ಭಾರತ – ಉಕ್ರೇನ್: ವಿಮಾನ ನಿರ್ಬಂಧ ರದ್ದು
Team Udayavani, Feb 18, 2022, 6:47 AM IST
ಹೊಸದಿಲ್ಲಿ: ಭಾರತ – ಉಕ್ರೇನ್ ನಡುವೆ ಸಂಚರಿಸುವ ವಿಮಾನಗಳಿಗೆ ವಿಧಿಸಲಾಗಿದ್ದ ಮಿತಿಯನ್ನು ಭಾರತ ರದ್ದುಗೊಳಿಸಿದೆ. ಇದರ ಜತೆಗೆ ವಿಮಾನಗಳಲ್ಲಿ ಪ್ರಯಾಣಿಕರಿಗೆ ವಿಧಿಸಲಾಗಿದ್ದ ಆಸನಗಳ ಮಿತಿಯನ್ನೂ ತೆಗೆದುಹಾಕಲಾಗಿದೆ.
“ಉಕ್ರೇನ್ನಲ್ಲಿರುವ ಎಲ್ಲ ಭಾರತೀಯರನ್ನು ತತ್ಕ್ಷಣವೇ ತೆರವುಗೊಳಿಸುವ ಆಲೋಚನೆ ಸದ್ಯಕ್ಕಿಲ್ಲ. ಆದರೂ, ಅವರ ಸುರಕ್ಷೆಗೆ ಹೆಚ್ಚಿನ ಆದ್ಯತೆ ನೀಡುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಭಾರತ ಹೇಳಿದೆ.
ಉಕ್ರೇನ್-ರಷ್ಯಾ ನಡುವೆ ಯುದ್ಧ ನಡೆಯುವ ಭೀತಿ ಆವರಿಸಿರುವುದರಿಂದ ಉಕ್ರೇನ್ನಲ್ಲಿರುವ ಭಾರತೀಯರು ಹೆಚ್ಚೆಚ್ಚು ಸಂಖ್ಯೆಯಲ್ಲಿ ಭಾರತಕ್ಕೆ ಆದಷ್ಟು ಬೇಗನೇ ಆಗಮಿಸಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇತ್ತೀಚೆಗೆ, ಕೊರೊನಾ ನಿಬಂಧನೆಗಳನ್ವಯ, ಎರಡು ದೇಶಗಳ ನಡುವೆ ಸಂಚರಿಸುವ ವಿಮಾನಗಳ ಸಂಖ್ಯೆಯನ್ನು ಇಳಿಕೆ ಮಾಡಲಾಗಿತ್ತು.
ಅಮೆರಿಕ ವಿಶ್ವಾಸ: ರಷ್ಯಾ- ಉಕ್ರೇನ್ ಯುದ್ಧ ಆರಂಭವಾದರೆ ಭಾರತ, ತನ್ನ ಬೆಂಬಲಕ್ಕೆ ನಿಲ್ಲುತ್ತದೆ ಎಂಬ ವಿಶ್ವಾಸವನ್ನು ಅಮೆರಿಕ ವ್ಯಕ್ತಪಡಿಸಿದೆ.
ಹೆಚ್ಚುವರಿ 7 ಸಾವಿರ ತುಕಡಿ: ಉಕ್ರೇನ್ ಗಡಿಯಲ್ಲಿ ತಾನು ನಿಯೋಜಿಸಿರುವ ಸೇನೆಗೆ ಹೆಚ್ಚುವರಿಯಾಗಿ 7 ಸಾವಿರ ಸೇನಾ ತುಕಡಿಗಳನ್ನು ರಷ್ಯಾ ನಿಯೋಜಿಸಿದೆ ಎಂದು ಅಮೆರಿಕ ಹೇಳಿದೆ. ಇತ್ತೀಚೆಗೆ, ಉಕ್ರೇನ್ ಗಡಿಯಿಂದ ತನ್ನ ಸೇನೆಯನ್ನು ಹಂತಹಂತವಾಗಿ ಹಿಂದಕ್ಕೆ ಕರೆಯಿಸಿಕೊಳ್ಳುತ್ತಿರುವು ದಾಗಿ ರಷ್ಯಾ ಪ್ರಕಟಿಸಿತ್ತು. ಇದರ ಹೊರತಾಗಿಯೂ ಮತ್ತಷ್ಟು ಸೇನಾ ತುಕಡಿಗಳನ್ನು ಗಡಿಯಲ್ಲಿ ನಿಯೋಜಿಸಲಾಗಿದೆ ಎಂದು ಅಮೆರಿಕ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ