ಅನುದಾನ ಪೂರ್ಣ ಬಳಸಲು ತೇಲ್ಕೂರ ತಾಕೀತು
Team Udayavani, Feb 18, 2022, 12:40 PM IST
ಸೇಡಂ: ಗ್ರಾಮೀಣ ಭಾಗದ ಅನೇಕ ಗ್ರಾಮಗಳ ರಸ್ತೆಗಳ ಮೇಲೆ ಚರಂಡಿ ನೀರು ಹರಿಯುತ್ತಿದೆ. ಕಂಪ್ಯೂಟರ್ ಆಪರೇಟರ್ಗಳ ಮೇಲೆ ಆರೋಪಗಳು ಕೇಳಿ ಬರುತ್ತಿವೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಅಸಡ್ಡೆಯಿಂದ ಬಜೆಟ್ ವಾಪಸ್ ಹೋಗುತ್ತಿದೆ. ನೈರ್ಮಲ್ಯಕ್ಕೆ ಒತ್ತು ನೀಡಲಾಗುತ್ತಿಲ್ಲ.
ಇವು ಪಟ್ಟಣದ ತಾಪಂ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಅಧ್ಯಕ್ಷ ಹಾಗೂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕರ ಅಸಮಾಧಾನಕ್ಕೆ ಕಾರಣವಾದ ವಿಷಯಗಳು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ಪಿಡಿಒಗಳು, ನೋಡಲ್ ಅಧಿಕಾರಿಗಳು, ಕಂಪ್ಯೂಟರ್ ಆಪರೇಟರ್ ಗಳು ಭಾಗಿಯಾಗಿದ್ದರು. ಆದರೆ ಬಹುತೇಕರ ನಿಷ್ಕಾಳಜಿ ಬಗ್ಗೆ ಶಾಸಕ ತೇಲ್ಕೂರ ಸಿಡಿಮಿಡಿಗೊಂಡಿದ್ದರು. ಅಲ್ಲದೇ ಕೆಲಹೊತ್ತು ತರಾಟೆ ತೆಗೆದುಕೊಂಡರು. ಅಭಿವೃದ್ಧಿಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಅಮಾನತು ಮಾಡಲಾಗುವುದು ಎಂದು ಎಚ್ಚರಿಸಿದರು.
14 ಮತ್ತು 15ನೇ ಹಣಕಾಸು ಯೋಜನೆ ಸದ್ಬಳಕೆಯಾಗುತ್ತಿಲ್ಲ. ಈ ಬಾರಿ 14ನೇ ಹಣಕಾಸು ಯೋಜನೆಯ ಸಂಪೂರ್ಣ ಅನುದಾನ ಬಳಕೆಯಾಗಬೇಕು. ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಕೂಡಲೇ ಪರಿಹಾರ ದೊರೆಯಬೇಕು. ಏಪ್ರಿಲ್ 1ರ ನಂತರ ಗ್ರಾಮಗಳಿಗೆ ತೆರಳುತ್ತಿದ್ದು, ಅಲ್ಲಿಯ ವರೆಗೆ ಯಾವ ಗ್ರಾಮದ ರಸ್ತೆಯಲ್ಲೂ ಚರಂಡಿ ನೀರು ಹರಿಯದಂತೆ ಎಚ್ಚರವಹಿಸಬೇಕು. ಕೂಡಲೇ ಇಂಗುಗುಂಡಿ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸೂಚಿಸಿದರು.
ಗ್ರಾಮೀಣ ಭಾಗದಲ್ಲಿ ಮನೆ ಹಂಚಿಕೆಗೆ ಹೆಚ್ಚಿನ ವೇಗ ನೀಡಬೇಕಾಗಿದೆ. ನಿಗದಿತ ಸಮಯದಲ್ಲಿ ಸಬೂಬು ಹೇಳದೇ ಮನೆ ಹಂಚಿಕೆ ಮುಗಿಯಬೇಕು. ವಸತಿ ಯೋಜನೆಯಡಿ 980 ಮನೆಗಳು ತಾಲೂಕಿಗೆ ನೀಡಲಾಗಿದೆ. ಜನರ ಸಮಸ್ಯೆ ಪರಿಹರಿಸಿದಾಗಲೇ ಜನಪ್ರತಿನಿಧಿಗೆ ಬೆಲೆ ಬರಲು ಸಾಧ್ಯ ಎಂದರು. ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ, ತಾಪಂ ಇಒ ಗುರುನಾಥ ಶೆಟಗಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
Prajwal Revanna: ಪ್ರಜ್ವಲ್ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್
Kamalapur: ಜಾತಿ ನಿಂದನೆ ಕೇಸ್ಗೆ ಹೆದರಿ ಯುವಕ ಆತ್ಮಹತ್ಯೆ
ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್
MUST WATCH
ಹೊಸ ಸೇರ್ಪಡೆ
Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು
Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ
Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು