ಅಹಿಂದ ನಾಯಕರನ್ನು ಪಕ್ಷಾತೀತವಾಗಿ ಮುಗಿಸಲು ಸಿದ್ದರಾಮಯ್ಯ ಯತ್ನ : ಬಿಜೆಪಿ
ಪರಮೇಶ್ವರ್ ರನ್ನು ಸೋಲಿಸಿ, ಇಬ್ರಾಹಿಂರನ್ನು ಪಕ್ಷದಿಂದ ಓಡಿಸಿದರು
Team Udayavani, Feb 18, 2022, 1:25 PM IST
ಬೆಂಗಳೂರು : ಸಚಿವ ಈಶ್ವರಪ್ಪ ರಾಜೀನಾಮೆಗೆ ಹೋರಾಟ ರೂಪಿಸುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಅಹಿಂದ ವರ್ಗದ ಯಾವುದೇ ಮುಖಂಡರ ಏಳಿಗೆ ಸಹಿಸುತ್ತಿಲ್ಲ ಎಂದು ಬಿಜೆಪಿ ಆರೋಪಿಸಿದೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ತಾನೊಬ್ಬ ಅಹಿಂದ ವರ್ಗದ ನಾಯಕ ಎಂದು ಬಿಂಬಿಸಿಕೊಂಡಿರುವ ಸಿದ್ದರಾಮಯ್ಯ ಈಗ ಅಹಿಂದ ವರ್ಗದ ನಾಯಕರನ್ನು ಪಕ್ಷಾತೀತವಾಗಿ ಮುಗಿಸಲು ಮುಂದಾಗಿದ್ದಾರೆ ಎಂದು ದೂರಿದೆ.
ಕುರುಬ ಸಮಾಜಕ್ಕೆ ಸೇರಿದ ಸಚಿವ ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಧರಣಿಯ ಹಿಂದೆ ಸಿದ್ದರಾಮಯ್ಯ ಅವರ ದಮನಕಾರಿ ಷಡ್ಯಂತ್ರವಿದೆ. ಸಿದ್ದರಾಮಯ್ಯ ಅವರು ಅಹಿಂದ ನಾಯಕರ ಏಳಿಗೆ ಸಹಿಸುವುದಿಲ್ಲ.
ಇದಕ್ಕೆ ನೂರಾರು ದೃಷ್ಟಾಂತಗಳಿವೆ.ದಲಿತ ನಾಯಕ ಪರಮೇಶ್ವರ್ ಅವರನ್ನು ಸೋಲಿಸಿ, ಇಬ್ರಾಹಿಂ ಅವರನ್ನು ಪಕ್ಷದಿಂದ ಓಡಿಸಲು ಸಂಚು ನಡೆಸಿದರು.ಈಗ ಹಿಂದುಳಿದ ಸಮಾಜದ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಸಿದ್ದರಾಮಯ್ಯ ಅಹಿಂದ ವಿರೋಧಿ ಎನ್ನುವುದಕ್ಕೆ ಬೇರೆ ಸಾಕ್ಷಿ ಬೇಕೇ ? ಎಂದು ಪ್ರಶ್ನಿಸಿದೆ.
ಹಿಂದುಳಿದ ಸಮಾಜಕ್ಕೆ ನಾನೇ ಪ್ರಶ್ನಾತೀತ ನಾಯಕ ಎಂದು ಭ್ರಮಿಸಿರುವ ಸಿದ್ದರಾಮಯ್ಯ ಅವರು ಈಗ ಕುಟುಂಬ ರಾಜಕಾರಣಕ್ಕೆ ಇಳಿದಿದ್ದಾರೆ. ತಮ್ಮ ಪುತ್ರ ಡಾ. ಯತೀಂದ್ರ ಅವರನ್ನು ಮುನ್ನೆಲೆಗೆ ತರಲು ಈಗ ತನ್ನದೇ ಸಮಾಜದ ಪ್ರಭಾವಿ ನಾಯಕರನ್ನು ಈಗಿಂದೀಗಲೇ ಮಟ್ಟಹಾಕಲು ಷಡ್ಯಂತ್ರ್ಯ ರೂಪಿಸುತ್ತಿದ್ದಾರೆ ಎಂದು ಆರೋಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ