ಅಳಿಯನನ್ನು ಬಿಟ್ಟುಕೊಡದ ಮಮತಾ ಬ್ಯಾನರ್ಜಿ
ಅಭಿಷೇಕ್ ಬ್ಯಾನರ್ಜಿಗೆ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಟ್ಟ
Team Udayavani, Feb 19, 2022, 7:50 AM IST
ಕೋಲ್ಕತಾ: ಪಶ್ಚಿಮ ಬಂಗಾಳದ ಟಿಎಂಸಿಯಲ್ಲಿ ಒಳಜಗಳಗಳ ನಡುವೆಯೇ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಳಿಯ ಅಭಿಷೇಕ್ ಬ್ಯಾನರ್ಜಿಯನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿದ್ದಾರೆ.
ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಚರ್ಚೆ ನಡೆಸಿ, ಶುಕ್ರವಾರ ಈ ಪ್ರಕಟಣೆ ಹೊರಡಿಸಲಾಗಿದೆ.
ಕೇಂದ್ರದ ಮಾಜಿ ಸಚಿವ ಯಶ್ವಂತ್ ಸಿನ್ಹಾ ಅವರ ಜೊತೆ ಹಿರಿಯ ನಾಯಕರಾದ ಸುಬ್ರತಾ ಬಕ್ಷಿ, ಚಂದ್ರಿಮಾ ಭಟ್ಟಾಚಾರ್ಯರನ್ನು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿ, ರಾಜ್ಯ ಸಚಿವ ಅರೂಪ್ ಬಿಸ್ವಾಸ್ರನ್ನು ಕೋಶಾಧಿಕಾರಿಯಾಗಿ, ಕೋಲ್ಕತ ಮೇಯರ್ ಫಿರ್ಹಾದ ಹಕೀಮ್ರನ್ನು ಸಮನ್ವಯ ಉಸ್ತುವಾರಿಯಾಗಿ ನೇಮಿಸಲಾಗಿದೆ.
ಕಾಂಗ್ರೆಸ್ನಿಂದ ಟಿಎಂಸಿಗೆ ಬಂದಿರುವ ಸುಷ್ಮಿತಾ ದೇವ್ ಮತ್ತು ಮುಕುಲ್ ಸಂಗಮ್ಗೆ ಈಶಾನ್ಯ ಭಾಗದಲ್ಲಿನ ಪಕ್ಷದ ಘಟಕಗಳ ಜವಾಬ್ದಾರಿ ಕೊಡಲಾಗಿದೆ.
ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳ ಸಮಿತಿಯಲ್ಲಿ ಒಳಜಗಳ ಉಂಟಾದ ಹಿನ್ನೆಲೆ, ಮಮತಾ ಬ್ಯಾನರ್ಜಿ ಅವರು ಕಳೆದ ವಾರ ಪೂರ್ತಿ ಸಮಿತಿಯನ್ನು ವಿಸರ್ಜಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್
NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ