“ಅನುಪಯುಕ್ತ ವೆಚ್ಚ ತಡೆ ಕಾರ್ಯಪಡೆ’ ರಚನೆ; ಆಡಳಿತ ಸುಧಾರಣ ಆಯೋಗ ಶಿಫಾರಸು
Team Udayavani, Feb 19, 2022, 5:40 AM IST
ಬೆಂಗಳೂರು: ಸರಕಾರದ ವಿವಿಧ ಇಲಾಖೆಗಳಲ್ಲಿ, ನಿಗಮ ಮಂಡಳಿಗಳಲ್ಲಿನ ಅನುಪಯುಕ್ತ ವೆಚ್ಚ ತಡೆಯಲು ಅನುಪಯುಕ್ತ ವೆಚ್ಚ ತಡೆ ಕಾರ್ಯಪಡೆ’ ರಚಿಸಬಹುದು ಎಂದು ಕರ್ನಾಟಕ ಆಡಳಿತ ಸುಧಾರಣ ಆಯೋಗ-2 ಸರಕಾರಕ್ಕೆ ಶಿಫಾರಸು ಮಾಡಿದೆ. ಆಯೋಗದ 2ನೆಯ ಹಾಗೂ 3ನೆಯ ವರದಿಯನ್ನು ಅಧ್ಯಕ್ಷ ಟಿ.ಎಂ. ವಿಜಯಭಾಸ್ಕರ್ ಶುಕ್ರವಾರ ಮುಖ್ಯಮಂತ್ರಿಗೆ ಸಲ್ಲಿಸಿದರು.
ಈ ಎರಡೂ ವರದಿಗಳಲ್ಲಿ ಸಮಾಜ ಕಲ್ಯಾಣ, ಅಲ್ಪಸಂಖ್ಯಾಕರ ಕಲ್ಯಾಣ, ಒಳಾಡಳಿತ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್, ನಗರಾ ಭಿವೃದ್ಧಿ, ಇಂಧನ ಸಹಿತ ಎಂಟು ಇಲಾಖೆಗಳಿಗೆ ಸಂಬಂಧಿಸಿ 588 ಸಾಮಾನ್ಯ, 508 ನಾಗರಿಕ ಸೇವೆಗಳಿಗೆ ಸಂಬಂಧಿಸಿದ ಒಟ್ಟು 1,165 ಶಿಫಾರಸುಗಳಿವೆೆ.
ಪ್ರಮುಖ ಶಿಫಾರಸುಗಳು
– ಸರಕಾರದ ವಿವಿಧ ಇಲಾಖೆ ಗಳಲ್ಲಿ, ನಿಗಮ ಮಂಡಳಿಗಳಲ್ಲಿನ ಅನುಪಯುಕ್ತ ವೆಚ್ಚ ತಡೆಯಲು ಅನುಪಯುಕ್ತ ವೆಚ್ಚ ತಡೆ ಕಾರ್ಯಪಡೆ’ ರಚಿಸಬಹುದು.
– ಎಲ್ಲ ಇಲಾಖೆಗಳ ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆಯನ್ನು ಗಣಕೀಕೃತ ಕೌನ್ಸೆಲಿಂಗ್ ಮೂಲಕ ಮಾಡಲು ಕಾಯ್ದೆ ಜಾರಿ.
– ಎಲ್ಲ ಅಂಚೆ ಕಚೇರಿಗಳನ್ನು ರಾಜ್ಯ ಸರಕಾರದ ಸೇವೆಗಳನ್ನು ಒದಗಿಸಲು ಬಳಸಿಕೊಳ್ಳಬಹುದು.
– ಸಾರ್ವಜನಿಕ ಉದ್ಯಮ ಗಳ ಇಲಾಖೆಯನ್ನು ಆರ್ಥಿಕ ಇಲಾಖೆಯಲ್ಲಿ ವಿಲೀನ.
– ಹೊರಗುತ್ತಿಗೆ ಸಿಬಂದಿ ನೇಮಕ ಸಂದರ್ಭ ಎಸ್ಸಿ, ಎಸ್ಟಿ ವರ್ಗಗಳಿಗೆ ಅಗತ್ಯ ಪ್ರಾತಿನಿಧ್ಯ ನೀಡಬೇಕು.
– ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿ ನಾಗರಿಕ ಸೇವೆಗಳ ಸಹಾಯ ಕೇಂದ್ರ ಸ್ಥಾಪಿಸಬೇಕು.
– ಪೊಲೀಸ್ ಇಲಾಖೆಯ ಕಾನ್ಸ್ಟೆಬಲ್, ಸಬ್ ಇನ್ಸ್ಪೆಕ್ಟರ್ವರೆಗಿನ ಗೆಜೆಟೆಡ್ ಅಲ್ಲದ ಹುದ್ದೆಗಳ ನೇರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ.
– ಗ್ರಾ. ಪಂ. ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಸಾಮಾಜಿಕ ಭದ್ರತಾ ಪಿಂಚಣಿಗಳ ಅರ್ಜಿ ಪಡೆದು ಶಿಫಾರಸು ಮಾಡುವ ಅಧಿಕಾರ ನೀಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ
ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !
ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು
Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ
Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್ ವ್ಯವಹಾರ ಪರಿಶೀಲನೆ