ಪ್ರತಿಷ್ಠೆಗೆ ಅಧಿವೇಶನ ಬಲಿ; ಆಡಳಿತ; ವಿಪಕ್ಷಗಳ ಹಠ; ಐದು ದಿನಗಳಿಂದ ಕಲಾಪ ವ್ಯರ್ಥ

ಪಟ್ಟು ಬಿಟ್ಟು ಸಮಸ್ಯೆ ಪರಿಹರಿಸಲಿ ಎಂದ ಮಾಜಿ ಸ್ಪೀಕರ್‌ಗಳು

Team Udayavani, Feb 21, 2022, 7:00 AM IST

ಪ್ರತಿಷ್ಠೆಗೆ ಅಧಿವೇಶನ ಬಲಿ; ಆಡಳಿತ; ವಿಪಕ್ಷಗಳ ಹಠ; ಐದು ದಿನಗಳಿಂದ ಕಲಾಪ ವ್ಯರ್ಥ

ಬೆಂಗಳೂರು: ಆಡಳಿತ ಮತ್ತು ವಿಪಕ್ಷಗಳ ಪ್ರತಿಷ್ಠೆಯ ತಿಕ್ಕಾಟದ ನಡುವೆ ರಾಜ್ಯ ವಿಧಾನಮಂಡಲದ ಜಂಟಿ ಅಧಿ ವೇಶನದ ಕಲಾಪಗಳು ಆಹುತಿಯಾಗುತ್ತಿವೆ. ಐದು ದಿನಗಳಿಂದ ಸದನದ ಕಾರ್ಯ ಕಲಾಪ ನಡೆಯದಿರುವುದು ರಾಜ್ಯದ ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ರಾಜ್ಯದ ಇತಿಹಾಸದಲ್ಲಿ ಹಲವು ಬಾರಿ ವಿಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಅಹೋ ರಾತ್ರಿ ಧರಣಿ ನಡೆಸಿವೆ. ಈ ಬಾರಿಯೂ ರಾಜಕೀಯ ಪಕ್ಷಗಳ ಪ್ರತಿಷ್ಠೆಯಿಂದಾಗಿ ಮಹತ್ವದ ಕಲಾಪ ಬಲಿಯಾಗಿ ಸಾರ್ವ ಜನಿಕರ ತೆರಿಗೆ ಹಣಪೋಲಾಗುತ್ತಿರುವುದು ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ.

ಸಚಿವ ಈಶ್ವರಪ್ಪ ರಾಷ್ಟ್ರಧ್ವಜದ ಕುರಿತು ನೀಡಿರುವ ಹೇಳಿಕೆಗಾಗಿ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಕಾಂಗ್ರೆಸ್‌ ಅಹೋರಾತ್ರಿ ಧರಣಿ ನಡೆಸುತ್ತಿದೆ. ಆದರೆ ಯಾವುದೇ ಕಾರಣಕ್ಕೂ ಈಶ್ವರಪ್ಪ ಅವರ ರಾಜೀನಾಮೆ ಪಡೆಯುವುದಿಲ್ಲ ಎಂದು ಬಿಜೆಪಿ ಪಟ್ಟು ಹಿಡಿದಿದೆ.

ಆಡಳಿತ ಮತ್ತು ವಿಪಕ್ಷಗಳ ಪ್ರತಿಷ್ಠೆ ಮಹತ್ವದ ವಿಧಾನಮಂಡಲದ ಕಲಾಪ ವನ್ನೇ ಬಲಿ ಪಡೆಯುತ್ತಿದೆ. ಜ್ವಲಂತ ಸಮಸ್ಯೆಗಳಾದ ರೈತರ ಬೆಳೆಗಳಿಗೆ ಸರಿ ಯಾದ ಬೆಲೆ ಸಿಗದಿರುವುದು, ಪ್ರವಾಹ ದಿಂದ ಆಗಿರುವ ಬೆಳೆಹಾನಿಗೆ ಸೂಕ್ತ ಪರಿಹಾರ ದೊರೆಯದಿರುವುದು, ಹಿಜಾಬ್‌ ಗೊಂದಲದಿಂದಾಗಿ ಶಾಲೆ ಕಾಲೇಜುಗಳು ನಡೆಯದಿರುವುದರ ಸಹಿತ ಶಾಸಕರು ಸಮಸ್ಯೆಗಳ ಕುರಿತು ಚರ್ಚಿಸಬೇಕಿದೆ.

ಇಂದು ಬಿಜೆಪಿ ಪ್ರತಿತಂತ್ರ
ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್‌ ಸೋಮವಾರ ಎಲ್ಲ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಿದೆ. ಸೋಮವಾರವೂ ಅದು ಧರಣಿ ವಾಪಸ್‌ ಪಡೆಯದಿದ್ದರೆ, ಸರಕಾರ ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡುವ ಸಾಧ್ಯತೆ ಇದೆ. ಧರಣಿಗೆ ಪ್ರತಿತಂತ್ರ ಸಂಬಂಧ ಸೋಮವಾರ ಬೆಳಗ್ಗೆ ಬಿಜೆಪಿ ನಾಯಕರ ಸಭೆ ನಡೆಯಲಿದೆ.

ಇಂದು ಜೆಡಿಎಸ್‌ ಧರಣಿ
ಸುಗಮ ಕಲಾಪಕ್ಕೆ ಕಾಂಗ್ರೆಸ್‌-ಬಿಜೆಪಿ ಎರಡೂ ಅಡ್ಡಿಪಡಿಸುತ್ತಿವೆ ಎಂದು ಆರೋಪಿಸಿ ಜೆಡಿಎಸ್‌ ಸದನದ ಹೊರಗೆ ಸೋಮವಾರ ಧರಣಿ ನಡೆಸಲು ನಿರ್ಧರಿಸಿದೆ.

ಇದನ್ನೂ ಓದಿ:ಇತಿಮಿತಿಯಲ್ಲಿ ಬಜೆಟ್‌ ಮಂಡನೆ: ಸಿಎಂ ಬೊಮ್ಮಾಯಿ

ಸ್ಪೀಕರ್‌ ದೃಢ
ನಿರ್ಧಾರ ಕೈಗೊಳ್ಳಲಿ
ಶಾಸನಸಭೆಗಳಲ್ಲಿ ಚರ್ಚೆ, ಸಂವಾದಗಳು ನಡೆಯಬೇಕು. ಯಾವುದೇ ಸಮಸ್ಯೆಯಿದ್ದರೂ ಆಡಳಿತ ಮತ್ತು ವಿಪಕ್ಷಗಳು ಚರ್ಚಿಸಿ ಬಗೆಹರಿಸಿಕೊಳ್ಳ ಬೇಕು. ಇಲ್ಲಿ ಇತ್ತಂಡಗಳಿಗೂ ಪ್ರತಿಷ್ಠೆಯೇ ಮುಖ್ಯವಾಗಿದೆ. ಸ್ಪೀಕರ್‌ ದೃಢ ನಿಲುವು ತೆಗೆದುಕೊಳ್ಳಬೇಕು. ಹಲವು ಬಾರಿ ಪ್ರತಿಭಟನೆಗಳು ನಡೆದಿವೆ. ಚರ್ಚೆಗೆ ಅವಕಾಶ ನೀಡದವರನ್ನು ಅಮಾನತು ಮಾಡಿರುವ ಉದಾ ಹರಣೆಗಳೂ ಇವೆ. ಸುಗಮ ಕಲಾಪ ನಡೆ ಸಲು ದಿಟ್ಟ ನಿರ್ಧಾರದ ಅಗತ್ಯವಿದೆ.
– ಬಿ.ಎಲ್‌. ಶಂಕರ್‌, ಮಾಜಿ ಸಭಾಪತಿ

ಪ್ರತಿಷ್ಠೆಯೇ ಮುಖ್ಯವಾಗಬಾರದು
ಈಗಿನ ವಿಚಾರದಲ್ಲಿ ಅಹೋರಾತ್ರಿ ಧರಣಿ ಸರಿಯಲ್ಲ. ಎರಡೂ ಪಕ್ಷಗಳು ಗಂಭೀರವಾಗಿ ಚರ್ಚಿಸಬೇಕು. ಜನರ ಸಮಸ್ಯೆ ಬಗ್ಗೆ ಆದ್ಯತೆ ನೀಡಬೇಕು. ಈಶ್ವರಪ್ಪ ಅವರ “ನೂರು ಮುನ್ನೂರು ವರ್ಷಗಳ ಅನಂತರ ರಾಷ್ಟ್ರಧ್ವಜ ಹಾರಬಹುದು’ ಎಂಬ ಹೇಳಿಕೆಯಿಂದ ಜನರ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ. ಸರಕಾರ ಸಾಕಷ್ಟು ತಪ್ಪುಗಳನ್ನು ಮಾಡಿರುತ್ತದೆ. ವಿಪಕ್ಷ ಅಂಥ ತಪ್ಪುಗಳನ್ನು ಎತ್ತಿ ತೋರಿಸುವ ಕೆಲಸ ಮಾಡಬೇಕು. ಇಲ್ಲಿ ಪ್ರತಿಷ್ಠೆ ಮುಖ್ಯವಾಗಬಾರದು. ಜನರ ಸಮಸ್ಯೆಗೆ ಸದನದಲ್ಲಿ ಸ್ಪಂದನೆ ಸಿಗಬೇಕು.
-ಡಿ.ಎಚ್‌. ಶಂಕರ ಮೂರ್ತಿ, ಮಾಜಿ ಸಭಾಪತಿ

ಅಹೋರಾತ್ರಿ ಧರಣಿಗೆ ಪರಿಹಾರ ಮಾರ್ಗೋಪಾಯ ಸ್ಪೀಕರ್‌ ಬಳಿ ಇತ್ತು. ಚೆಂಡು ಅವರ ಅಂಗಳದಲ್ಲಿ ಇರುವಾಗ ವಿವೇಚನೆ ಮತ್ತು ಸೂಕ್ಷ್ಮತೆಯಿಂದ ವಿವಾದವನ್ನು ಸದನದೊಳಗೆ ಬಗೆಹರಿಸಿಕೊಳ್ಳಬಹುದಿತ್ತು. ಸಿದ್ದರಾಮಯ್ಯ ನಿಯಮ 60ರಡಿ ಮಂಡಿಸಿದ ನಿಲುವಳಿ ಸೂಚನೆ ಮೇಲೆ ಪ್ರಾಥಮಿಕ ವಿಷಯ ಮಂಡನೆಗೆ ಅವಕಾಶ ಕೊಟ್ಟು, ಅದನ್ನು ನಿಯಮ 69ಕ್ಕೆ ಪರಿವರ್ತಿಸಿ ಎರಡೂ ಕಡೆಯವರಿಗೆ ಚರ್ಚೆಗೆ ಅವಕಾಶ ಒದಗಿಸಿ, ಯಾವುದಾದರೂ ತೀರ್ಮಾನಕ್ಕೆ ಬರಬೇಕಿತ್ತು. ಕಾಂಗ್ರೆಸ್‌-ಬಿಜೆಪಿ ಎರಡೂ ಪಕ್ಷಗಳು ಪ್ರತಿಷ್ಠೆಗೆ ಬಿದ್ದಿವೆ. ಸೋಮವಾರ ಸ್ಪೀಕರ್‌ ಕಲಾಪ ಸಲಹಾ ಸಮಿತಿಯ ಸಭೆ ಕರೆದು ತೀರ್ಮಾನ ತೆಗೆದುಕೊಳ್ಳಬೇಕು.
-ವೈಎಸ್‌ವಿ ದತ್ತಾ, ಜೆಡಿಎಸ್‌ ಮುಖಂಡ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.