ಹರ್ಷ ಕೊಲೆ ಹಿಂದಿನ ಅಪರಾಧಿಗಳ ಬಂಧಿಸಿ: ಬಿ.ವೈ. ವಿಜಯೇಂದ್ರ
Team Udayavani, Feb 21, 2022, 10:00 PM IST
ಬೆಂಗಳೂರು: ಶಿವಮೊಗ್ಗ ಬಜರಂಗ ದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ಬಿಜೆಪಿ ಉಗ್ರವಾಗಿ ಖಡಿಸುತ್ತದೆ. ಸರ್ಕಾರ ಕೊಲೆ ಹಿಂದಿನ ಅಪರಾಧಿಗಳ ಬಂಧನ ಮಾಡಬೇಕು ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವುರ, ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಚರ್ಚೆ ಎಲ್ಲಿಗೆ ಮುಟ್ಟುತ್ತಿದೆ ಅಂತ ಗಮನಿಸಬೇಕು. ಹೆಣ್ಣುಮಕ್ಕಳು ಕುಂಕುಮ ಹಾಕಬಾರದು ಅನ್ನುವವರೆಗೆ ಹೋಗಿದೆ. ಇದರ ಹಿಂದೆ ಕಾಂಗ್ರೆಸ್ ಕುತಂತ್ರ ಇದೆ. ಶಿವಮೊಗ್ಗ ಪ್ರಕರಣದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು. ಗೃಹ ಸಚಿವರು ಸೂಕ್ತ ಕ್ರಮ ವಹಿಸುತ್ತಿದ್ದಾರೆ ಎಂದು ಹೇಳಿದರು.
ಇದೇ ವೇಳೆ, ಕಾಂಗ್ರೆಸ್ ಸಚಿವ ಈಶ್ವರಪ್ಪ ಅವರ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದೆ. ಇದು ಕಾಂಗ್ರೆಸ್ಗೆ ಶೋಭೆ ತರುವುದಿಲ್ಲ. ಹಿಜಾಬ್ ವಿಷಯದಲ್ಲಿ ಕಾಂಗ್ರೆಸ್ ಗೊಂದಲ ಮೂಡಿಸುತ್ತಿದೆ ಎಂದು ಆರೋಪಿಸಿದರು.