ರಾಷ್ಟ್ರಧ್ವಜ ಇಟ್ಟುಕೊಂಡೇ ಜನರ ಮುಂದೆ ಬನ್ನಿ; ಸಿಎಂ ಸವಾಲು


Team Udayavani, Feb 23, 2022, 7:40 AM IST

ರಾಷ್ಟ್ರಧ್ವಜ ಇಟ್ಟುಕೊಂಡೇ ಜನರ ಮುಂದೆ ಬನ್ನಿ; ಸಿಎಂ ಸವಾಲು

ವಿಧಾನ ಪರಿಷತ್ತು: “ನೀವು ಈಗ ನಡೆಸುತ್ತಿರುವ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದ ವಿಷಯವನ್ನು ಇಟ್ಟುಕೊಂಡೇ ಜನರ ಮುಂದೆ ಬನ್ನಿ. ನಾವು ಅಭಿವೃದ್ಧಿ ಮಂತ್ರದೊಂದಿಗೆ ಬರುತ್ತೇವೆ. ಜನರೇ ತೀರ್ಮಾನ ಮಾಡುತ್ತಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಕ್ಷ ಕಾಂಗ್ರೆಸ್‌ಗೆ ಸವಾಲು ಹಾಕಿದರು.

ಮಂಗಳವಾರ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಮಂಡನೆ ವೇಳೆ ಮಾತನಾಡಿದ ಅವರು, “ರಾಜಕೀಯ ಲಾಭಕ್ಕಾಗಿ ನೀವು (ಕಾಂಗ್ರೆಸ್‌) ಅಧಿವೇಶನದಲ್ಲಿ ಈ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದ ವಿಷಯ ಇಟ್ಟುಕೊಂಡು ಹೋರಾಟ ಮಾಡುತ್ತಿದ್ದೀರಿ. ವಾಸ್ತವವಾಗಿ ಸಚಿವರು ಹೇಳಿದೆ ಇರುವುದನ್ನು, ಸೇರಿಸಿ ಹೋರಾಟ ನಡೆಸುತ್ತಿದ್ದೀರಿ. ಇದು ತಪ್ಪು ಮತ್ತು ಜನ ಕೂಡ ಇದನ್ನು ಒಪ್ಪುವುದಿಲ್ಲ. ಬೇಕಿದ್ದರೆ ಇದೇ ವಿಷಯ ಇಟ್ಟುಕೊಂಡು ಜನರ ಮುಂದೆ ಬನ್ನಿ. ಆಗ ಜನರೇ ತೀರ್ಪು ಹೇಳುತ್ತಾರೆ’ ಎಂದು ಸವಾಲು ಹಾಕಿದರು.

“ಆಡಳಿತ ಪಕ್ಷವಾಗಿ ಅಂತೂ ಕಾಂಗ್ರೆಸ್‌ ಉಳಿದಿಲ್ಲ. ಈ ಅಧಿವೇಶನದಲ್ಲಿ ತಮ್ಮ ವರ್ತನೆಯಿಂದ ಪ್ರತಿಪಕ್ಷವಾಗುವ ಅರ್ಹತೆಗಳನ್ನೂ ಕಳೆದುಕೊಂಡಂತಾಗಿದೆ. ರಾಜ್ಯಪಾಲರ ಭಾಷಣದ ಮೇಲೆ ಭಾಗವಹಿಸಿ, ಸರ್ಕಾರದ ನೂನ್ಯತೆಗಳನ್ನು ಎತ್ತಿಹಿಡಿಯಲು ಪ್ರತಿಪಕ್ಷಕ್ಕೆ ಒಂದು ಅವಕಾಶ ಇತ್ತು.

ಪೂರ್ಣಪ್ರಮಾಣದಲ್ಲಿ ಚರ್ಚೆಯಾಗದಿರುವುದು ವಿಧಾನ ಮಂಡಲದ ಇತಿಹಾಸದಲ್ಲಿ ಕಪ್ಪುಚುಕ್ಕೆ. ಹುಬ್ಬಳ್ಳಿಯಲ್ಲಿ ರಾಷ್ಟ್ರಧ್ವಜ ಹಾರಿಸಲು ಮುಂದಾದಾಗ, ಸೇನಾಪಡೆಯೊಂದಿಗೆ ಬಂದವರು ನೀವು (ಕಾಂಗ್ರೆಸ್‌). ಅದರಲ್ಲಿ ಆರು ಜನ ಬಲಿಯಾದರು. ನಿಮ್ಮಂತಹವರಿಂದ ರಾಷ್ಟ್ರಭಕ್ತಿ ಕಲಿಯಬೇಕೇ?’ ಎಂದು ತರಾಟೆಗೆ ತೆಗೆದುಕೊಂಡರು.

ಇದನ್ನೂ ಓದಿ:ಸುನೀಲ್‌ ಶೆಟ್ಟಿ ನಿರ್ಮಾಣದ “ಇನ್‌ವಿಸಿಬಲ್‌ ಮ್ಯಾನ್‌’ ನಲ್ಲಿ ನಟಿಸಲಿದ್ದಾರೆ ಈಶಾ ಡಿಯೋಲ್‌

ಇದಕ್ಕೂ ಮುನ್ನ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬರುವ ದಿನಗಳಲ್ಲಿ 8, 9 ಮತ್ತು 10ನೇ ತರಗತಿಯ ಗ್ರಾಮೀಣ ಹೆಣ್ಣುಮಕ್ಕಳಿಗೂ ವಿದ್ಯಾನಿಧಿ ಯೋಜನೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಈಗಾಗಲೇ ಇರುವ ವಿದ್ಯಾನಿಧಿ ಯೋಜನೆ ಅಡಿ ಇದುವರೆಗೆ 4.52 ಲಕ್ಷ ಮಕ್ಕಳಿಗೆ ಆರ್ಥಿಕ ನೆರವು ನೀಡಲಾಗಿದೆ ಎಂದು ಹೇಳಿದರು.

ಆರು ತಿಂಗಳಲ್ಲಿ 11.2 ಲಕ್ಷ ಮನೆಗಳಿಗೆ ಮನೆ ಮನೆ ಗಂಗೆ ಕಲ್ಪಿಸಲಾಗಿದೆ. ಕಲ್ಯಾಣ ಕರ್ನಾಟಕಕ್ಕೆ 1,400 ಕೋಟಿ ರೂ. ಒಂದೇ ವರ್ಷದಲ್ಲಿ ಬಿಡುಗಡೆ ಮಾಡಲಾಗಿದೆ. ಬರುವ ವರ್ಷ ಈ ಅನುದಾನವನ್ನು ಮೂರು ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸಲು ಉದ್ದೇಶಿಸಲಾಗಿದೆ ಎಂದ ಅವರು, ಕೋವಿಡ್‌ ಮತ್ತು ನೆರೆ ಹಾವಳಿ ನಡುವೆಯೂ ಸರ್ಕಾರ ಅಭಿವೃದ್ಧಿ ಪಥ ಮುಂದುವರಿಸಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.