ಮತ್ತೆ ಕಂಗೊಳಿಸಲಿದೆ ಪಂಪ್‌ವೆಲ್‌ : ಮಹಾವೀರ ವೃತ್ತದ ಕಲಶ ನಿರ್ಮಾಣ ಸದ್ಯದಲ್ಲಿಯೇ ಆರಂಭ


Team Udayavani, Feb 23, 2022, 2:20 PM IST

ಮತ್ತೆ ಕಂಗೊಳಿಸಲಿದೆ ಪಂಪ್‌ವೆಲ್‌ : ಮಹಾವೀರ ವೃತ್ತದ ಕಲಶ ನಿರ್ಮಾಣ ಸದ್ಯದಲ್ಲಿಯೇ ಆರಂಭ

ಮಹಾನಗರ : ಒಂದು ಕಾಲದಲ್ಲಿ ನಗರದ ಆತ್ಮದಂತೆ ಕಂಗೊಳಿಸುತ್ತಿದ್ದ ಪಂಪ್‌ವೆಲ್‌ನ ಮಹಾವೀರ ವೃತ್ತದ ಕಲಶ ಮತ್ತೂಮ್ಮೆ ಅದೇ ಜಾಗದಲ್ಲಿ ಕಂಗೊಳಿಸುವ ನಿರೀಕ್ಷೆಯಲ್ಲಿದೆ.

ಜೈನ ಸಮುದಾಯದ ವತಿಯಿಂದ ನೂತನ ಕಲಶ ನಿರ್ಮಾಣವಾಗಲಿದೆ. ಮೇಲ್ಸೇತುವೆ ಕಾಮಗಾರಿ ವೇಳೆ ಕೆಲವು ವರ್ಷಗಳ ಹಿಂದೆ ಪಂಪ್‌ವೆಲ್‌ ಪ್ರದೇಶದಲ್ಲಿದ್ದ ಕಲಶವನ್ನು ತೆರವುಗೊಳಿಸಲಾಗಿತ್ತು. ಆ ವೇಳೆ ತೀವ್ರ ಆಕ್ಷೇಪ ಬಂದರೂ, ಬಳಿಕ ಅದೇ ಪ್ರದೇಶದಲ್ಲಿ ಕಲಶ ಮರು ಸ್ಥಾಪಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳಿಗೆ ಭರವಸೆ ಬಂದಿತ್ತು. ಆದರೆ, ಪಂಪ್‌ವೆಲ್‌ ಮೇಲ್ಸೇತುವೆ ಉದ್ಘಾಟನೆಗೊಂಡರೂ, ಕಲಶ ನಿರ್ಮಾಣಕ್ಕೆ ಮಾತ್ರ ಮುಂದಾಗಿರಲಿಲ್ಲ. ಜೈನ ಸಮುದಾಯ ಮತ್ತೆ ಪಾಲಿಕೆಗೆ ಮನವಿ ಸಲ್ಲಿಸಿದ್ದು, ಪಾಲಿಕೆ ಕೂಡ ಬಹುತೇಕ ಸಮ್ಮತಿ ನೀಡಿದೆ. ಅದರಂತೆ ಸದ್ಯದಲ್ಲೇ ಕಲಶ ನಿರ್ಮಾಣ ಕಾಮಗಾರಿ ಆರಂಭಗೊಳ್ಳಲಿದೆ.

ಭಗವಾನ್‌ ಶ್ರೀ ಮಹಾವೀರ ಸ್ವಾಮಿಯ 2600ನೇ ಜನ್ಮ ಕಲ್ಯಾ ಣೋತ್ಸವವನ್ನು ರಾಷ್ಟ್ರದ್ಯಂತ 2001ರಿಂದ 2002ರ ವರೆಗೆ ಆಚ ರಿ ಸಲು ಕೇಂದ್ರ ಸರಕಾರ ನಿರ್ಧರಿಸಿತ್ತು. ಅದÃ ‌ಂತೆ ಮಂಗಳೂರು ಮಹಾನಗರ ಪಾಲಿಕೆಯು “ಮಹಾವೀರ ವೃತ್ತ’ ಎಂದು ನಾಮಕರಣ ನಡೆಸಿತ್ತು. ಬಳಿಕ ಜೈನ್‌ ಸೊಸೈಟಿ ಹಾಗೂ ಜೈನ ಸಮಾಜ ಸೇರಿಕೊಂಡು 43 ಸೆಂಟ್ಸ್‌ ಜಾಗದಲ್ಲಿ ಸುಮಾರು 12 ಲಕ್ಷ ರೂ. ವೆಚ್ಚದಲ್ಲಿ ಸುಂದರ ಮಹಾವೀರ ವೃತ್ತ ಹಾಗೂ 20 ಟನ್‌ ತೂಕದ ಮಂಗಲ ಕಲಶವನ್ನು ನಿರ್ಮಾಣ ಮಾಡಲಾಯಿತು.

ಮಹಾವೀರ ವೃತ್ತ ಮತ್ತು ಕಲಶ ನಿರ್ಮಾಣ ಕಾಮಗಾರಿ 2003ರ ಜನವರಿ ತಿಂಗಳಿನಲ್ಲಿ ಆರಂಭಗೊಂಡು 6 ತಿಂಗಳ ಬಳಿಕ ಉದ್ಘಾಟನೆ ನೆರವೇರಿತ್ತು. ಪಂಪ್‌ವೆಲ್‌ ಮೇಲ್ಸೇತುವೆ ಕಾಮಗಾರಿ ವೇಳೆ ಈ ಕಲಶವನ್ನು ತೆರವು ಗೊಳಿ ಸಲಾಗಿತ್ತು. ಬಳಿಕ ಅಲ್ಲೇ ಹತ್ತಿರದಲ್ಲಿ ಕಂಕನಾಡಿ ರಸ್ತೆ ತಿರುವು ಪ್ರವೇಶದಲ್ಲಿ ಇಡಲಾಗಿದೆ. ಇದೀಗ ಮಹಾವೀರ ವೃತ್ತ ಮತ್ತು ಕಲಶ ನಿರ್ಮಾಣ ಕಾಮಗಾರಿ ಸದ್ಯದಲ್ಲಿಯೇ ಆರಂಭಗೊಳ್ಳಲಿದೆ.

ಇದನ್ನೂ ಓದಿ : ಮೇಕೆದಾಟು ಪಾದಯಾತ್ರೆ ಮತ್ತೆ ಪ್ರಾರಂಭ : ಡಿ.ಕೆ.ಶಿವಕುಮಾರ್ 

ಕಲಶ ನಿರ್ಮಾಣವೆಲ್ಲಿ?
ನಗರವನ್ನು ಪ್ರವೇಶಿಸುವ ಪಂಪ್‌ವೆಲ್‌ನಲ್ಲೇ ಕಲಶ ಮತ್ತೆ ಮರುಸ್ಥಾಪನೆಗೊಳ್ಳಲಿದೆ. ಪಂಪ್‌ ವೆಲ್‌ ಮೇಲ್ಸೇತುವೆ ಪಕ್ಕದಲ್ಲಿ ಅಂದರೆ ಪಂಪ್‌ವೆಲ್‌-ಪಡೀಲು ತಿರುವು ಪಡೆ ಯುವ ಜಾಗದಲ್ಲಿ ಸ್ಥಾಪನೆ ಮಾಡಲು ಉದ್ದೇಶಿ ಸಲಾಗಿದೆ. ಈ ಪ್ರದೇಶದಲ್ಲಿ ಈಗಾಗಲೇ ಐಲ್ಯಾಂಡ್‌ ನಿರ್ಮಾಣ ಮಾಡಲಾಗಿದ್ದು, ಅಲ್ಲಿ ಕಲಶ ಸ್ಥಾಪನೆ ಜತೆಗೆ ಸುಂದರೀಕರಣ ಮತ್ತು ಮಹಾವೀರ ವೃತ್ತ ಫಲಕ ಹಾಕಲಾಗುತ್ತದೆ. ಇದರ ಖರ್ಚು ವೆಚ್ಚವನ್ನು ಮಂಗಳೂರಿನ ಜೈನ ಸಮಾಜವೇ ಭರಿಸಲು ಉದ್ದೇಶಿಸಲಾಗಿದೆ.

ಸೂಕ್ತ ಕ್ರಮ
ಮಹಾವೀರ ವೃತ್ತದಲ್ಲಿ ಜನಾಕರ್ಷಣೆ ಪಡೆದಿದ್ದ ಕಲಶವನ್ನು ಪಂಪ್‌ವೆಲ್‌ ಭಾಗದಲ್ಲಿ ಮೇಲ್ಸೇತುವೆ ನಿರ್ಮಾಣದ ವೇಳೆ ತೆರವು ಗೊಳಿಸಲಾಗಿತ್ತು. ಇದೀಗ ಪಂಪ್‌ವೆಲ್‌ನಲ್ಲಿ ಮತ್ತೆ ಕಲಶ ಸ್ಥಾಪನೆ ಕುರಿತಂತೆ ಜೈನ ಸಮುದಾಯದಿಂದ ಮನವಿ ಬಂದಿದೆ. ಆ ಪ್ರದೇಶದಲ್ಲಿ ಕಲಶ ನಿರ್ಮಾಣ ಅನುಮತಿಗೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ.
-ಪ್ರೇಮಾನಂದ ಶೆಟ್ಟಿ, ಮನಪಾ ಮೇಯರ್‌

ಜೈನ ಸಮುದಾಯದಿಂದ ಸ್ಥಾಪನೆ
ಪಂಪ್‌ವೆಲ್‌ನಲ್ಲಿ ಜೈನ ಸಮುದಾಯದ ವತಿಯಿಂದ ಮತ್ತೆ ಕಲಶ ಮರು ಸ್ಥಾಪನೆಗೊಳ್ಳಲಿದೆ. ಈಗಾಗಲೇ ಮಹಾನಗರ ಪಾಲಿಕೆಗೆ ಪತ್ರ ಬರೆಯಲಾಗಿದ್ದು, ಈ ಕುರಿತು ಮಾತುಕತೆ ನಡೆಸಿ ತೀರ್ಮಾನಿಸಲಾಗಿದೆ. ಇದರ ಖರ್ಚು ವೆಚ್ಚವನ್ನು ನಗರದ ಜೈನ ಸಮಾಜವೇ ಭರಿಸಲಿದೆ. ವೃತ್ತದಲ್ಲಿ (ಐಲ್ಯಾಂಡ್‌) ಕಲಶ ಇಟ್ಟು ಸುಂದರೀಕರಣಗೊಳಿಸಲಾಗುತ್ತದೆ. ಈ ಪ್ರದೇಶದಲ್ಲಿ ಮಹಾವೀರ ವೃತ್ತ ಎಂಬ ಹೆಸರಿಸಲಾಗುವುದು.

-ಪುಷ್ಪರಾಜ್‌ ಜೈನ್‌, ಭಾರತೀಯ ಜೈನ್‌ ಮಿಲನ್‌ ರಾಜ್ಯಾಧ್ಯಕ್ಷರು

ಟಾಪ್ ನ್ಯೂಸ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

ಲಕ್ಷದ್ವೀಪ ಪ್ರವಾಸೋದ್ಯಮದ ಅವಕಾಶ ಬಳಸಿಕೊಳ್ಳುವಲ್ಲಿ ಮಂಗಳೂರು ಹಿನ್ನಡೆ

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.