ಜನನಾಯಕರಿಗೆ ತಮ್ಮ ಹಿತಕ್ಕಿಂತ ಜನರ ಹಿತ ಮುಖ್ಯವಾಗಲಿ


Team Udayavani, Feb 24, 2022, 6:00 AM IST

ಜನನಾಯಕರಿಗೆ ತಮ್ಮ ಹಿತಕ್ಕಿಂತ ಜನರ ಹಿತ ಮುಖ್ಯವಾಗಲಿ

ಭಾರೀ ನಿರೀಕ್ಷೆ ಮೂಡಿಸಿದ್ದ ರಾಜ್ಯ ವಿಧಾನಸಭೆ ಅಧಿವೇಶನ ಕೇವಲ ಎರಡು ದಿನಗಳ ಅಧಿಕೃತ ಕಲಾಪಗಳಿಗೆ ಸೀಮಿತವಾಗಿ ಆರೋಪ, ಪ್ರತ್ಯಾರೋಪ, ಗದ್ದಲ, ಧರಣಿಯ ಕಾರಣದಿಂದ ಮೂರು ದಿನ ಮುನ್ನವೇ ಮುಂದೂಡಲ್ಪಟ್ಟಿದೆ. ಕೊರೊನಾ ಸೃಷ್ಟಿಸಿದ ಅವಾಂತರದಿಂದ ಜನ ಸಾಮಾನ್ಯರಿನ್ನೂ ಸಂಕಷ್ಟದಿಂದ ಹೊರಬರಲು ಪರದಾಡುತ್ತಿದ್ದರೆ ಕೃಷಿ, ಕೈಗಾರಿಕೆ, ಪ್ರವಾಸೋದ್ಯಮ ಆದಿಯಾಗಿ ಎಲ್ಲ ಕ್ಷೇತ್ರಗಳೂ ಪುನಶ್ಚೇತನದ ಹಾದಿಯಲ್ಲಿವೆ. ಜನಸಾಮಾನ್ಯರ ಸಮಸ್ಯೆ, ಬೇಡಿಕೆಗಳ ಕುರಿತಂತೆ ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ಒಂದಿಷ್ಟು ಸವಿಸ್ತಾರವಾಗಿ ಚರ್ಚೆ ನಡೆದು ಪರಿಹಾರೋಪಾಯಗಳನ್ನು ಕಂಡುಕೊಳ್ಳುವ ಪ್ರಯತ್ನ ನಡೆದೀತು ಎಂಬ ನಿರೀಕ್ಷೆಯನ್ನು ಈ ಅಧಿವೇಶನ ಹುಸಿಯಾಗಿಸಿದೆ. ಆದರೆ ರಾಜಕೀಯ ನಾಯಕರ ಈ ಎಲ್ಲ ಆಟಾಟೋಪಗಳ ಹೊರ  ತಾಗಿಯೂ ಸರಕಾರ ಶಾಸಕರ ವೇತನ ಮತ್ತು ಭತ್ತೆ ಪರಿಷ್ಕರಣೆ ಮಸೂದೆಗೆ ಎರಡೂ ಸದನಗಳಲ್ಲಿ ಒಪ್ಪಿಗೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಇದನ್ನು ಗಮನಿಸಿದಾಗ ಸರಕಾರ ಮತ್ತು ನಮ್ಮ ಜನಪ್ರತಿನಿಧಿಗಳ ಆದ್ಯತೆ ಏನು ಎಂಬುದು ಜನಸಾಮಾನ್ಯನಿಗೂ ಕೂಡ ಸ್ಪಷ್ಟವಾಗಿ ಅರಿವಾಗುತ್ತದೆ.

ವೇತನ, ಭತ್ತೆ ಪರಿಷ್ಕರಣೆ ಮಸೂದೆಯನ್ನು ಮುಖ್ಯಮಂತ್ರಿಗಳ ಪರವಾಗಿ ಮಂಡಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿನ ಭಾರೀ ಹೆಚ್ಚಳ, ಮನೆ ಬಾಡಿಗೆ ವೆಚ್ಚ ಅಧಿಕಗೊಂಡಿರುವುದು, ನಿರ್ವಹಣ ವೆಚ್ಚಗಳಲ್ಲಿ ವಿಪರೀತ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳ ಶಾಸಕರ ಅಭಿಪ್ರಾಯಗಳನ್ನು ಆಲಿಸಿ, ಅವರ ಬೇಡಿಕೆಗಳನ್ನು ಪರಿಗಣಿಸಿ ವೇತನ ಪರಿಷ್ಕರಿಸಲು ತೀರ್ಮಾನಿಸಲಾಗಿದೆ ಎಂದು ಸರಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು. ಕಳೆದ ಐದು ದಿನಗಳಿಂದ ಸಚಿವರೋರ್ವರು ಭಾವೋದ್ರೇಕಕ್ಕೊಳಗಾಗಿ ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಮುಂದಿಟ್ಟು ಪ್ರಧಾನ ವಿಪಕ್ಷ ಕಾಂಗ್ರೆಸ್‌ ಸದಸ್ಯರ ಧರಣಿಯ ನಡುವೆಯೇ ಈ ಮಸೂದೆಗೆ ಉಭಯ ಸದನಗಳಲ್ಲಿ ಸರ್ವಾನುಮತದ ಒಪ್ಪಿಗೆ ಪಡೆಯುವಲ್ಲಿ ಸರಕಾರ ಯಶಸ್ವಿಯಾಯಿತು.

ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿರುವ ವೇಳೆ ಸರಕಾರ ಇಷ್ಟೊಂದು ತರಾತುರಿಯಲ್ಲಿ ಈ ನಿರ್ಧಾರ ಕೈಗೊಂಡಿರುವುದು “ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ’ ಎಂಬ ಗಾದೆ ಮಾತಿನಂತಾಗಿದೆ. ಈ ಬಾರಿಯ ಅಧಿವೇಶನದುದ್ದಕ್ಕೂ ಕಾದಾಡುತ್ತಲೇ ಬಂದಿದ್ದ ಎಲ್ಲ ಪಕ್ಷಗಳ ಶಾಸಕರು ಅತ್ಯಂತ ಆಸ್ಥೆಯಿಂದ ಈ ವಿಚಾರದಲ್ಲಿ ಮಾತ್ರ ಮೌನಕ್ಕೆ ಶರಣಾದುದನ್ನು ಕಂಡರೆ ನಮ್ಮ ಜನಪ್ರತಿನಿಧಿಗಳಿಗೆ ಜನಹಿತಕ್ಕಿಂತ ಸ್ವಹಿತವೇ ಮುಖ್ಯವಾಯಿತೇ ಎಂಬ ಅನುಮಾನ ಕಾಡದಿರದು.

ಸರಕಾರದ ವಿವಿಧ ಇಲಾಖೆ, ಸಂಸ್ಥೆಯ ನೌಕರರು ವೇತನ ಪರಿಷ್ಕರ ಣೆಗಾಗಿ ಹೋರಾಟ ನಡೆಸುವ ಸಂದರ್ಭದಲ್ಲಿ ಇಲ್ಲಸಲ್ಲದ ನೆಪಗಳನ್ನು ಒಡ್ಡಿ ಅವರ ಮನವೊಲಿಕೆ ಕಾರ್ಯಕ್ಕೆ ಮುಂದಾಗುವ ಸರಕಾರ ಈ ವಿಚಾರದಲ್ಲಿಯೂ ತುಸು ವಿಳಂಬ ಧೋರಣೆ ಅನುಸರಿಸುತ್ತಿದ್ದರೆ ಆಕಾಶವೇನೂ ಕೆಳಗೆ ಬೀಳುತ್ತಿರಲಿಲ್ಲ. ಇದನ್ನೇ ಅಸ್ತ್ರವನ್ನಾಗಿಟ್ಟು ಕೊಂಡು ಕೆಳ ಹಂತದ ಜನಪ್ರತಿನಿಧಿಗಳೂ ವೇತನ ಪರಿಷ್ಕರಣೆಯ ಬೇಡಿಕೆಯನ್ನು ಮುಂದಿಟ್ಟರೆ ಆಗ ಸರಕಾರದ ನಿಲುವೇನಾಗಿರಲಿದೆ, ಸಾರ್ವಜನಿಕ ಹಣವನ್ನು ಹೀಗೆ ಬೇಕಾಬಿಟ್ಟಿಯಾಗಿ ತಮ್ಮ ಹಿತಕ್ಕಾಗಿ ಬಳಸಿಕೊಂಡಲ್ಲಿ ಜನಹಿತವನ್ನು ಕಾಯುವವರಾದರೂ ಯಾರು? ಸಾರ್ವಜನಿಕರ ಈ ಎಲ್ಲ ಪ್ರಶ್ನೆಗಳಿಗೆ ಉತ್ತರಿಸುವ ಹೊಣೆಗಾರಿಕೆ ಸರಕಾರದ್ದಾಗಿದೆ.

 

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.