ಕಾಲು ಸೋತವರಿಗೆ ತಂಗುದಾಣವಾಗಲಿ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೂಡಲೇ ಗಮನ ಕೊಡಲಿ


Team Udayavani, Feb 24, 2022, 11:27 AM IST

ಕಾಲು ಸೋತವರಿಗೆ ತಂಗುದಾಣವಾಗಲಿ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೂಡಲೇ ಗಮನ ಕೊಡಲಿ

ಇದು ರಾಷ್ಟ್ರೀಯ ಹೆದ್ದಾರಿಯಲ್ಲಿ ಇರುವ ಬಸ್‌ ತಂಗುದಾಣಗಳ ಕಥೆ. ಇವುಗಳು ನಿರ್ವಹಣೆಯ ನಿರೀಕ್ಷೆಯಲ್ಲಿವೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮನಸ್ಸು ಮಾಡಿದರೆ ಈ ಬೇಸಗೆಗೆ ಜನರು ಕೊಂಚ ನೆಮ್ಮದಿಯಿಂದ ಇರಲು ಸಾಧ್ಯ. ಉದಯವಾಣಿಯ ತಂಡ ಬೈಕಂಪಾಡಿಯಿಂದ ಪಡೀಲ್‌ ಕಣ್ಣೂರು ವ್ಯಾಪ್ತಿಯವರೆಗೆ ತಿರುಗಿ ಬಂದಾಗ ಸಿಕ್ಕಿದ್ದು, 15 ಬಸ್‌ ತಂಗುದಾಣಗಳು. ಈ ಹಾದಿಯಲ್ಲಿ ಇಷ್ಟೇ ಖಾಸಗಿ ಸಹಭಾಗಿತ್ವದ/ಖಾಸಗಿ ಕೊಡುಗೆಯ ತಂಗುದಾಣಗಳೂ ಇವೆ. ಆದರೆ ನಿರ್ವಹಣೆಯಲ್ಲಿ ಅಜಗಜಾಂತರವಿದೆ. ಅದರ ವಿವರವೇ ಇಲ್ಲಿದೆ.

ಸಮಸ್ಯೆ ಇಲ್ಲಿದೆ
– ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಲವು ತಂಗುದಾಣಗಳು ಪ್ರಯಾಣಿಕರಿಗೆ ಬೇಕಾದ ಸ್ಥಳದಲ್ಲಿಲ್ಲ ; ಹಾಗಾಗಿ ಅವು ಇದ್ದೂ ಇಲ್ಲದಂತೆ.
– ಕೆಲವೆಡೆ ಕುಳಿತುಕೊಳ್ಳಲು ವ್ಯವಸ್ಥೆ ಇಲ್ಲ. ಹಿರಿಯ ನಾಗರಿಕರಿಂದ ಹಿಡಿದು ಎಲ್ಲರೂ ನಿಲ್ಲಲೇ ಬೇಕು.
– ಕೆಲವೆಡೆ ಇರುವ ಬೆಂಚೂ ಮುರಿದು ತಿಂಗಳುಗಳಾಗಿವೆ. ದುರಸ್ತಿಯಾಗಿಲ್ಲ.
– ಬಹುತೇಕ ಕಡೆ ಕಳಪೆ ನಿರ್ವಹಣೆಯೇ ಪ್ರಮುಖ ಸಮಸ್ಯೆ

ಸಮಸ್ಯೆಯ ಸ್ಥೂಲ ಚಿತ್ರಣ
ಪಡೀಲ್‌ ವ್ಯಾಪ್ತಿಯ ಬಸ್‌ತಂಗುದಾಣದಲ್ಲಿ ಕುಳಿತುಕೊಳ್ಳಲು ವ್ಯವಸ್ಥೆಯಿಲ್ಲ. ಕೆಪಿಟಿ ಬಳಿಯಲ್ಲಿ ಕುಳಿತುಕೊಳ್ಳುವ ಬೆಂಚು ತುಂಡಾಗಿ ಬಿದ್ದಿದೆ. ಎ.ಜೆ ಆಸ್ಪತ್ರೆಯ ಇಕ್ಕೆಲಗಳಲ್ಲಿರುವ ಹೆದ್ದಾರಿ ಪ್ರಾಧಿಕಾರದ ತಂಗುದಾಣ ಬಳಕೆಗೆ ಸಿಗುತ್ತಿಲ್ಲ. ಬೈಕಂಪಾಡಿ ವ್ಯಾಪ್ತಿಯಲ್ಲಿಯೂ ಇಂತಹುದೇ ಪರಿಸ್ಥಿತಿ. ಪಣಂಬೂರು ಬೀಚ್‌ನ ಮುಂಭಾಗದ ತಂಗುದಾಣ ಬಳಕೆಯಾಗುತ್ತಿಲ್ಲ. ಪಣಂಬೂರು ಸಿಗ್ನಲ್‌ ಬಳಿ ಸ್ಮಾರ್ಟ್‌ಸಿಟಿ ಮಾಡಿರುವ ಬಸ್‌ನಿಲ್ದಾಣವು ಬಳಕೆಯಾಗದೆ ಬಿಕೋ ಎನ್ನುತ್ತಿದೆ!

ಪರಿಹಾರವೂ ಇಲ್ಲಿದೆ
– ಬಸ್‌ತಂಗುದಾಣದ ಪ್ರದೇಶವನ್ನು ಸ್ವತ್ಛ ಹಾಗೂ ಸುಂದರವಾಗಿರಿಸಲು ವ್ಯವಸ್ಥೆ ಕಲ್ಪಿಸಬೇಕು.
– ಪ್ರಯಾಣಿಕರಿಗೆ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮಾಡಬೇಕು.
– ಬಸ್‌ ತಂಗುದಾಣದಲ್ಲಿ ವ್ಯಾಪಾರ ಚಟುವಟಿಕೆಗೆ ಅವಕಾಶ ನಿರ್ಬಂಧಿಸಬೇಕು.
– ಅಗತ್ಯವಿರುವಲ್ಲಿಗೆ ನಿಲ್ದಾಣ ಸ್ಥಳಾಂತರ ವಾದರೆ ಹೆಚ್ಚು ಜನರಿಗೆ ಅನುಕೂಲ.

ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಗಮನಕ್ಕೆ
ಬೇಸಗೆ ಬರುತ್ತಿದೆ. ಜನರಿಗೆ ತಂಗುದಾಣದ ಹೆಸರಿನಲ್ಲಿರುವ ನಿಲ್ದಾಣ ಗಳು ಹೆಚ್ಚು ಪ್ರಯೋಜನಕ್ಕೆ ಬರುವ ಕಾಲವಿದು. ಹಾಗಾಗಿ ಆದ್ಯತೆಯ ಮೇರೆಗೆ ಇಲ್ಲಿನ ಸಮಸ್ಯೆ ಬಗೆಹರಿಸಬೇಕೆಂಬುದು ಸ್ಥಳೀಯ ನಾಗರಿಕರ ಆಗ್ರಹ.

– ದಿನೇಶ್ ಇರಾ / ಸತೀಶ್ ಇರಾ

ಟಾಪ್ ನ್ಯೂಸ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Dowry harassment: ವರದಕ್ಷಿಣೆ ಕಿರುಕುಳ, ಹಲ್ಲೆ, ಜೀವಬೆದರಿಕೆ: ದೂರು

Dowry harassment: ವರದಕ್ಷಿಣೆ ಕಿರುಕುಳ, ಹಲ್ಲೆ, ಜೀವಬೆದರಿಕೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.