ಈಡಿಗ ಸಮಾಜಕ್ಕೆ ನಿಗಮ ಮಂಡಳಿ ಘೋಷಿಸಿ
Team Udayavani, Feb 24, 2022, 12:28 PM IST
ಚಿಂಚೋಳಿ: ಆರ್ಯ ಈಡಿಗ ಸಮಾಜಕ್ಕೆ ನಿಗಮ ಮಂಡಳಿ ಘೋಷಿಸಿ, 500 ಕೋಟಿ ರೂ. ಮೀಸಲಿಡಬೇಕು ಎಂದು ಆರ್ಯ ಈಡಿಗ ಮಹಾ ಮಂಡಳಿ ರಾಷ್ಟ್ರೀಯ ಅಧ್ಯಕ್ಷ ಡಾ|ಪ್ರಣವಾನಂದ ಸ್ವಾಮೀಜಿ ಸರ್ಕಾರಕ್ಕೆ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ಯ ಈಡಿಗ ಸಮಾಜ ಕುಲಕಸುಬಾದ ಸೇಂದಿ ಇಳಿಸುವ ಕೆಲಸ ಮಾಡುತ್ತಿದ್ದಾಗ 1990ರಲ್ಲಿ ಸರ್ಕಾರ ಸೇಂದಿ ಇಳಿಸುವುದನ್ನು ನಿಷೇಧಿಸಿತು. ಈಗ ಪರ್ಯಾಯವಾಗಿ ಯಾವ ಕಸುಬು ಇಲ್ಲದಂತಾಗಿ. ಆರ್ಥಿಕ ಸಂಕಷ್ಟ ಉಂಟಾಗಿದೆ. ಸದ್ಯ 16 ಶಾಸಕರು, ಆರು ಸಂಸದರು ಇದ್ದರೂ ಸಮುದಾಯ ತೀರಾ ಹಿಂದುಳಿದಿದೆ ಎಂದರು.
ಮಾಜಿ ಮುಖ್ಯಮಂತ್ರಿ ದಿ| ಎಸ್. ಬಂಗಾರಪ್ಪ ನಂತರ ನಮ್ಮ ಸಮಾಜಕ್ಕೆ ಸರ್ಕಾರ ಯಾವುದೇ ನ್ಯಾಯ ದೊರಕಿಸುವ ಪ್ರಯತ್ನ ಮಾಡುತ್ತಿಲ್ಲ. ರಾಜ್ಯ ಸರ್ಕಾರ ಈಡಿಗ ಸಮಾಜವನ್ನು ಕಡೆಗಾಣಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
28 ಒಳ ಪಂಗಡ ಹೊಂದಿರುವ ಆರ್ಯ ಈಡಿಗ ಸಮುದಾಯ 78ಲಕ್ಷ ಜನಸಂಖ್ಯೆ ಹೊಂದಿದೆ. ಆಡಳಿತರೂಢ ಬಿಜೆಪಿ ಸರ್ಕಾರದಲ್ಲಿ ಏಳು ಜನ ಶಾಸಕರು ಮತ್ತು ಇಬ್ಬರು ಸಚಿವರು ಇದ್ದಾರೆ. ಈಡಿಗ ಸಮುದಾಯಕ್ಕೆ ನಿಗಮ ಮಂಡಳಿ ಸ್ಥಾಪನೆ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಬೇಡಿಕೆ ಈಡೇರಿಲ್ಲ ಎಂದರು.
108 ಅಡಿ ಎತ್ತರದ ಬ್ರಹ್ಮಶ್ರೀ ನಾರಾಯಣಗುರು ಮೂರ್ತಿ ನಿರ್ಮಾಣಕ್ಕೆ, ಹೆಂಡದ ಮಾರಯ್ಯ ಪೀಠ, ರೇಣುಕಾ ಯಲ್ಲಮ್ಮದೇವಿ ಪೀಠಕ್ಕೆ ಸರಕಾರ 10 ಕೋಟಿ ರೂ. ಮಂಜೂರಿ ಮಾಡಬೇಕೆಂದು ಒತ್ತಾಯಿಸಿದರು.
ಮುಖಂಡರಾದ ಚಂದ್ರಶೇಖರ ಗುತ್ತೇದಾರ, ಮಹೇಶ ಗುತ್ತೇದಾರ, ಭೀಮಯ್ಯ ಗುತ್ತೇದಾರ, ಸಿದ್ಧಯ್ಯಗೌಡ ಮಿರಿಯಾಣ, ನರವೀರ ಗುತ್ತೇದಾರ, ಗುಂಡಯ್ಯ ಎಂಪಳ್ಳಿ, ಉದಯಕುಮಾರ ದೇಗಲಮಡಿ, ರಾಘವೇಂದ್ರ ಕಲ್ಲೂರ, ಮೋಹನ ಗುತ್ತೇದಾರ, ಪ್ರಕಾಶ ಗುತ್ತೇದಾರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು
Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ
Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು