ಹಸುಗಳೊಂದಿಗೆ ಅಸಹಜ ಲೈಂಗಿಕ ಕ್ರಿಯೆ: ಆರೋಪಿ ಬಂಧನ
Team Udayavani, Feb 24, 2022, 9:30 PM IST
ಬೆಂಗಳೂರು: ಗೋವುಗಳ ಜತೆ ಅಸಹಜ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ವಿಕೃತ ವ್ಯಕ್ತಿಯನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ಮೂಲದ ವೆಂಕಟೇಶ್ (22) ಬಂಧಿತ. ಆರೋಪಿ ಸಿಂಗಾಪುರ ಲೇಔಟ್ನ ಮುನಿ ಹನುಮಂತಪ್ಪ ಎಂಬವರಿಗೆ ಸೇರಿದ ಹಸುವಿನ ಜತೆ ಅಸಹಜ ಕ್ರಿಯೆ ನಡೆಸುವಾಗ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ಹೇಳಿದರು.
ಸಿಂಗಾಪುರ ಲೇಔಟ್ನಲ್ಲಿ ಮುನಿ ಹನುಮಂತಪ್ಪ ಐದಾರು ಹಸುಗಳನ್ನು ಸಾಕಿದ್ದಾರೆ. ಮನೆ ಮುಂಭಾಗದ ಸ್ಥಳದಲ್ಲಿಯೇ ಗೋವುಗಳಿಗೆ ಕೊಟ್ಟಿಗೆ ನಿರ್ಮಿಸಿಕೊಳ್ಳಲಾಗಿದೆ. ಫೆ. 19ರಂದು ರಾತ್ರಿ ವೇಳೆ ಆರೋಪಿ ವೆಂಕಟೇಶ್ ಗೋವುಗಳ ಜತೆ ಅಸಹಜವಾಗಿ ಲೈಂಗಿಕ ಕ್ರಿಯೆ ನಡೆಸುತ್ತಿದ್ದ. ಅದನ್ನು ಗಮನಿಸಿದ ಸ್ಥಳೀಯರು ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಅದರಿಂದ ಅಚ್ಚರಿಗೊಂಡ ಹನುಮಂತಪ್ಪ ಮರು ದಿನ ರಾತ್ರಿಯಿಡಿ ಕಾಯ್ದುಕೊಂಡು ಕುಳಿತಿದ್ದರು. ಆಗ ಕೊಟ್ಟಿಗೆಗೆ ಬಂದ ಆರೋಪಿ, ವಿವಸ್ತ್ರನಾಗಿ ಕೊಟ್ಟಿಗೆಯಲ್ಲಿ ಹಸುಗಳ ಜತೆ ವಿಕೃತವಾಗಿ ವರ್ತಿಸಿದ್ದಾನೆ. ಆರೋಪಿಯನ್ನು ಸ್ಥಳದಲ್ಲೇ ಹಿಡಿದುಕೊಂಡು, ಪೊಲೀಸರಿಗೆ ಮಾಹಿತಿ ನೀಡದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯ ವಿರುದ್ಧ ಅಸಹಜ ಲೈಂಗಿಕ ಕ್ರಿಯೆ ಹಾಗೂ ಜಾನುವಾರುಗಳ ಮೇಲೆ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿ ದಾವಣಗೆರೆಯಿಂದ ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದು, ಅವಿನ್ಯೂ ರಸ್ತೆಯಲ್ಲಿರುವ ಪುಸ್ತಕದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ