ಹಸುಗಳೊಂದಿಗೆ ಅಸಹಜ ಲೈಂಗಿಕ ಕ್ರಿಯೆ: ವಿಕೃತ ಯುವಕನ ಬಂಧನ
Team Udayavani, Feb 25, 2022, 1:48 PM IST
ಬೆಂಗಳೂರು: ಗೋವುಗಳ ಜತೆ ಅಸಹಜ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ವಿಕೃತ ವ್ಯಕ್ತಿಯನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ಮೂಲದ ವೆಂಕಟೇಶ್ (22) ಬಂಧಿತ. ಆರೋಪಿ ಸಿಂಗಾಪುರ ಲೇಔಟ್ನ ಮುನಿ ಹನು ಮಂತಪ್ಪ ಎಂಬುವರಿಗೆ ಸೇರಿದ ಹಸುವಿನ ಜತೆ ಅಸಹಜ ಕ್ರಿಯೆ ನಡೆಸುವಾಗ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ಹೇಳಿದರು. ಸಿಂಗಾಪುರ ಲೇಔಟ್ನಲ್ಲಿ ಮುನಿ ಹನುಮಂತಪ್ಪ ಐದಾರು ಹಸುಗಳನ್ನು ಸಾಕಿದ್ದಾರೆ. ಮನೆ ಮುಂಭಾಗದ ಸ್ಥಳದಲ್ಲಿಯೇ ಗೋವುಗಳಿಗೆ ಕೊಟ್ಟಿಗೆ ನಿರ್ಮಿಸಿಕೊಳ್ಳಲಾಗಿದೆ. ಫೆ. 19ರಂದು ರಾತ್ರಿ ವೇಳೆ ಆರೋಪಿ ವೆಂಕಟೇಶ್ ಗೋವುಗಳ ಜತೆ ಅಸಹಜವಾಗಿ ಲೈಂಗಿಕ ಕ್ರಿಯೆ ನಡೆಸುತ್ತಿದ್ದ. ಅದನ್ನು ಗಮನಿಸಿದ ಸ್ಥಳೀಯರು ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಅದರಿಂದ ಅಚ್ಚರಿಗೊಂಡ ಹನುಮಂತಪ್ಪ ಮರು ದಿನ ರಾತ್ರಿಯಿಡಿ ಕಾಯ್ದುಕೊಂಡು ಕುಳಿತಿದ್ದರು. ಆಗ ಕೊಟ್ಟಿಗೆಗೆ ಬಂದ ಆರೋಪಿ, ವಿವಸ್ತ್ರನಾಗಿ ಕೊಟ್ಟಿಗೆಯಲ್ಲಿ ಹಸುಗಳ ಜತೆ ವಿಕೃತವಾಗಿ ವರ್ತಿಸಿದ್ದಾನೆ.
ಆರೋಪಿಯನ್ನು ಸ್ಥಳದಲ್ಲೇ ಹಿಡಿದುಕೊಂಡು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯ ವಿರುದ್ಧ ಅಸಹಜ ಲೈಂಗಿಕ ಕ್ರಿಯೆ ಹಾಗೂ ಜಾನುವಾರುಗಳ ಮೇಲೆ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ