ಸಕಾಲ ನಿರ್ವಹಣೆಯಲ್ಲಿ ಕುಂದಾಪುರ ಪುರಸಭೆಯೇ ಮುಂದೆ


Team Udayavani, Feb 26, 2022, 5:10 AM IST

ಸಕಾಲ ನಿರ್ವಹಣೆಯಲ್ಲಿ ಕುಂದಾಪುರ ಪುರಸಭೆಯೇ ಮುಂದೆ

ಕುಂದಾಪುರ: ಕಡತ ವಿಲೇವಾರಿ ಕುರಿತು ಎಲ್ಲೆಡೆಯಿಂದ ದೂರುಗಳು ಕೇಳಿಬರುತ್ತಿದ್ದರೆ ಕುಂದಾಪುರ ಪುರಸಭೆ ಸಕಾಲದಲ್ಲಿ ಕಡತ ವಿಲೇ ಮಾಡಿ ರಾಜ್ಯದ 122 ಸಂಸ್ಥೆಗಳ ಸಾಲಿನಲ್ಲಿ ರಾಜ್ಯ ಮಟ್ಟದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದೆ.

ಜಿಲ್ಲೆಯಲ್ಲಿ ನಂ.1
ಜನವರಿ ತಿಂಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಸಮಯಕ್ಕೆ ಸರಿಯಾಗಿ ಕಡತಗಳನ್ನು ನಿರ್ವಹಿಸುವ ಪುರಸಭೆಗಳ ಪೈಕಿ ಕುಂದಾಪುರ ಮೊದಲ ಸ್ಥಾನದಲ್ಲಿದೆ. ಕಾಪು ಅನಂತರ ಕಾರ್ಕಳ ಆ ಬಳಿಕದ ಸ್ಥಾನದಲ್ಲಿದೆ. ಡಿಸೆಂಬರ್‌ನಲ್ಲಿ ಕಾಪು, ಕುಂದಾಪುರ, ಕಾರ್ಕಳ ಕ್ರಮವಾಗಿ ಸ್ಥಾನ ಹಂಚಿಕೊಂಡಿದ್ದವು.

ರಾಜ್ಯದಲ್ಲಿ 10ನೇ ಸ್ಥಾನ
ಈ ವರ್ಷ ಜನವರಿಯ ಲೆಕ್ಕಾಚಾರದಲ್ಲಿ ರಾಜ್ಯದ 122 ಪುರಸಭೆಗಳಲ್ಲಿ ಕುಂದಾ ಪುರಕ್ಕೆ ಸಕಾಲದ ಒಟ್ಟು ನಿರ್ವಹಣೆ ಯಲ್ಲಿ 10ನೇ ಸ್ಥಾನ ಇದೆ. ಸಕಾಲಿಕವಾಗಿ ನಿರ್ವಹಣೆ ಮಾಡುವುದರಲ್ಲಿ 16ನೇ ಸ್ಥಾನ ಪಡೆದಿದೆ.

ಮೂಡಬಿದಿರೆ ಸಮಗ್ರ ನಿರ್ವಹಣೆ ಯಲ್ಲಿ ನಂ.1, ಸಮಯದಲ್ಲಿ ಕಡ ವಿಲೇಯಲ್ಲಿ 11ನೇ ಸ್ಥಾನ, ಬಂಟ್ವಾಳ ಪುರಸಭೆ ನಂ. 1 ಸ್ಥಾನದಲ್ಲಿದ್ದು ಒಟ್ಟು ನಿರ್ವಹಣೆಯಲ್ಲಿ 12ನೇ ಸ್ಥಾನ ಪಡೆದಿದೆ. ಕಾರ್ಕಳ 62ನೇ ಸ್ಥಾನದಲ್ಲಿದ್ದು ಸಮಗ್ರ ನಿರ್ವಹಣೆಯಲ್ಲಿ 35ನೇ ಸ್ಥಾನದಲ್ಲಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಮೂಡು ಬಿದಿರೆ ಸಮಗ್ರ ನಿರ್ವಹಣೆಗೆ 5, ಬಂಟ್ವಾಳ 11, ಕುಂದಾಪುರ 25ನೆಯ ಸ್ಥಾನದಲ್ಲಿತ್ತು.

ಸಿಬಂದಿ ಕೊರತೆ
ಪುರಸಭೆಯಲ್ಲಿ ಸಿಬಂದಿ ಕೊರತೆ ಇದೆ. ಇದ್ದವರೂ ವರ್ಗವಾಗಿದ್ದಾರೆ. ಇನ್ನು ಕೆಲವರು ನಿಯೋಜನೆ ಮೇಲಿದ್ದಾರೆ. ಮತ್ತೆ ಕೆಲವರು ಎರಡು ಕಡೆ ಕೆಲಸ ನಿರ್ವಹಿಸಬೇಕಾಗಿ ಬಂದು ವಾರಕ್ಕಿಷ್ಟು ದಿನ ಎಂಬಂತೆ ಇದ್ದಾರೆ. ಈ ಎಲ್ಲ ಸಮಸ್ಯೆಗಳ ನಡುವೆ ಪುರಸಭೆ ಕಡತ ವಿಲೇವಾರಿಯನ್ನು ಸಕಾಲ ಯೋಜನೆಯಡಿ ಸಮಯಕ್ಕೆ ಸರಿಯಾಗಿ ಮಾಡಿ ಗುರುತಿಸಿಕೊಂಡಿದೆ.

ಬಾಕಿ ಕಡಿಮೆ
ಫೆಬ್ರವರಿ ತಿಂಗಳಲ್ಲಿ ಕೂಡ ಕಡತ ವಿಲೇಯಲ್ಲಿ ಸಮಗ್ರ ಸಾಧನೆಗಾಗಿ ಕಾರ್ಯ ನಿರ್ವಹಿಸಲಾಗುತ್ತಿದೆ. 23 ದಿನ ಗಳಲ್ಲಿ 431 ಕಡತಗಳ ವಿಲೇವಾರಿ ನಡೆದಿದೆ. ತಾಂತ್ರಿಕ ಕಾರಣದಿಂದ 3 ಅರ್ಜಿಗಳು ಬಾಕಿ ಇವೆ. ಜನನ ಪ್ರಮಾಣ ಪತ್ರದಲ್ಲಿ ಹೆಸರು, ದಿನಾಂಕ ಬದಲಾವಣೆಗೆ ಅತಿ ಹೆಚ್ಚಿನ ಅರ್ಜಿಗಳು ಬರುತ್ತಿದ್ದು ಡಿಸೆಂಬರ್‌ನಲ್ಲಿ 283, ಜನವರಿಯಲ್ಲಿ 354 ಅರ್ಜಿಗಳು, ಫೆಬ್ರವರಿಯಲ್ಲಿ 281 ಅರ್ಜಿಗಳು ಸಲ್ಲಿಕೆಯಾಗಿವೆ.

ಬಾಕಿ ಇಡುವುದಿಲ್ಲ
ತಾಂತ್ರಿಕ ಕಾರಣಗಳನ್ನು ಹೊರತಾದ, ಹಣ ಪಾವತಿಸದ, ದಾಖಲೆ ಇಲ್ಲದ ಇತ್ಯಾದಿ ಕಾರಣಗಳಿಲ್ಲದ ಯಾವುದೇ ಕಡತಗಳನ್ನು ನಮ್ಮ ಕಚೇರಿಯಲ್ಲಿ ಬಾಕಿ ಇಡುವುದಿಲ್ಲ. ಸರಿಯಾದ ಕಾಲದಲ್ಲಿ ಸಕಾಲ ಯೋಜನೆಯಲ್ಲಿ ಸೂಕ್ತ ವಿಲೇವಾರಿ ಮಾಡಲಾಗುತ್ತಿದೆ.
-ಗೋಪಾಲಕೃಷ್ಣ ಶೆಟ್ಟಿ ಮುಖ್ಯಾಧಿಕಾರಿ, ಕುಂದಾಪುರ ಪುರಸಭೆ

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.