ಅಕ್ರಮ ಶೆಡ್ ನಿರ್ಮಾಣ ಪ್ರಯತ್ನಕ್ಕೆ ತಹಶೀಲ್ದಾರ್‌ರಿಂದ ತಡೆ


Team Udayavani, Feb 26, 2022, 7:13 PM IST

ಅಕ್ರಮ ಶೆಡ್ ನಿರ್ಮಾಣ ಪ್ರಯತ್ನಕ್ಕೆ ತಹಶೀಲ್ದಾರ್‌ರಿಂದ ತಡೆ

ಸಾಗರ: ತಾಲೂಕಿನ ತ್ಯಾಗರ್ತಿ ಸಮೀಪದ ನಾಡಕಲಸಿ ಗ್ರಾಮದ ಸರ್ವೆ ನಂ. 133 ಮತ್ತು 134ರ ಸರ್ಕಾರಿ ಭೂಮಿ ಗೋಮಾಳ ಅತಿಕ್ರಮಣ ಮಾಡಿ ಮರಗಿಡಗಳನ್ನು ಕಡಿದು ಶೆಡ್ ನಿರ್ಮಾಣ ಮಾಡಲು ಆಗಮಿಸಿದ ಸಾಗರ ಪೇಟೆ ನಿವಾಸಿಗಳನ್ನು ನಾಡಕಲಸಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ವಿರೋಧಿಸಿ ಕಂದಾಯ ಇಲಾಖೆ ಅಧಿಕಾರಿಗಳ ನೆರವಿನಿಂದ ಶೆಡ್ ತೆರವುಗೊಳಿಸಿ ವಾಪಸ್ ಕಳಿಸಿದ ಘಟನೆ ಶನಿವಾರ ನಡೆದಿದೆ.

ಸಾಗರ ಪೇಟೆ ನಿವಾಸಿಗಳಾದ ಲಲಿತಮ್ಮ ಹೆಸರಿನಲ್ಲಿ 25 ವರ್ಷದ ಹಿಂದೆ ನಾಡಕಲಸಿ ಗ್ರಾಮದ ಸರ್ವೆ ನಂ 133 ರಲ್ಲಿ ನಾಲ್ಕು ಎಕರೆ ೩೮ ಗುಂಟೆ ಜಮೀನು ಬಗರ್ ಹುಕುಂನಲ್ಲಿ ಮಂಜೂರಾತಿ ಆಗಿತ್ತು ಎನ್ನಲಾಗಿದೆ. ಸಾಗುವಳಿ ಮಾಡದೆ ಇರುವ ದಟ್ಟ ಅರಣ್ಯ ಮರಗಿಡಗಳು ಇರುವ ಪ್ರದೇಶದಲ್ಲಿ ಗ್ರಾಮಸ್ಥರ ತೀವ್ರ ವಿರೋಧದಿಂದ ಉಪ ವಿಭಾಗಾಧಿಕಾರಿಗಳು ಮಂಜೂರಾತಿ ರದ್ದುಗೊಳಿಸಿ ಸರ್ಕಾರಿ ಕಾಯ್ದಿರಿಸಿದ ಭೂಮಿ ಎಂದು ಬೋರ್ಡ್ ಹಾಕಲಾಗಿತ್ತು. ಆದರೆ

ಶನಿವಾರ ಏಕಾಏಕಿ ಜನರ ಗುಂಪು ಕಟ್ಟಿಕೊಂಡು ಮರಗಳನ್ನು ಕಡಿಯಲು ತಯಾರಿ ನಡೆಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರು.

ಸ್ಥಳಕ್ಕೆ ಆಗಮಿಸಿದ ಕಂದಾಯ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಗ್ರಾಮಸ್ಥರ ಸಮ್ಮುಖದಲ್ಲಿ ಶೆಡ್ ತೆರವುಗೊಳಿಸಿ ಅತಿಕ್ರಮ ಸಾಗುವಳಿ ಮಾಡುತ್ತಿರುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ

ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಲೋಕನಾಥ್ ಬಿಳಿಸಿರಿ ಮಾತನಾಡಿ, ಹಿಂದಿನ ಅಧಿಕಾರಿಗಳ ಸಮ್ಮುಖದಲ್ಲಿ ಆಗಿರುವ ತೀರ್ಮಾನದಂತೆ ಇದನ್ನು ಕಾಯ್ದಿರಿಸಿದ ಜಾಗ ಎಂದು ಸೂಚನಾ ಫಲಕ ಹಾಕಲಾಗಿದೆ. ಸ್ಮಶಾನಕ್ಕಾಗಿ ಕಾಯ್ದಿರಿಸಿದ ಜಾಗ ಇದಾಗಿದ್ದು ಇವರು ಬೇರೆ ಊರಿನಿಂದ ಗೂಂಡಾಗಳನ್ನು ಕರೆತಂದು ಅತಿಕ್ರಮ ಸಾಗುವಳಿ ಮಾಡಲು ಹುನ್ನಾರ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ಅತಿಕ್ರಮ ಸಾಗುವಳಿ ಮಾಡಲು ಬಿಡುವುದಿಲ್ಲ ಎಂದು ಹೇಳಿದರು

ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್ ಮಾತನಾಡಿ, ನಾಡಕಲಸಿ ಗ್ರಾಮದ ಸರ್ವೆ ನಂ ೧೩೩ರಲ್ಲಿ ಯಾವುದೇ ಸಾಗುವಳಿ ಇಲ್ಲ ಯಾರು ಒತ್ತುವರಿ ಮಾಡಿಕೊಂಡು ಸಾಗುವಳಿ ಮಾಡಲು ಪ್ರಯತ್ನಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು. ತಾಲೂಕಿನಲ್ಲಿ ಬಗರ್ ಹುಕುಂ ಹೆಸರಿನಲ್ಲಿ ಹೊಸ ಒತ್ತುವರಿ ಆಗುತ್ತಿದೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು

ಸಂದರ್ಭದಲ್ಲಿ ಭೂನ್ಯಾಯ ಮಂಡಳಿ ಸದಸ್ಯ ದೇವೇಂದ್ರಪ್ಪ ಎಲಕುಂದ್ಲಿ, ನಾಡಕಲಸಿ ಗ್ರಾಪಂ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ ಬೊಮ್ಮತ್ತಿ,ಬಾಲಸುಂದರಗೌಡ, ನರೇಂದ್ರ ಮಳಲಿಕೊಪ್ಪ, ನಾರಾಯಣ, ಗ್ರಾಮ ಲೆಕ್ಕಿಗ ಪ್ರಕಾಶ್ ಸಿಂಗ್, ಅರಣ್ಯ ಇಲಾಖೆ ಅಧಿಕಾರಿ ಅಣ್ಣಪ್ಪ ಮತ್ತಿತರರು ಇದ್ದರು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.