ಎಸ್ ಡಿಪಿಐ ಮತ್ತು ಪಿಎಫ್ ಐ ನಿಷೇಧ ಕುರಿತು ಕೂಲಂಕಷ ಪರಿಶೀಲನೆ: ಸಿಎಂ ಬೊಮ್ಮಾಯಿ
Team Udayavani, Feb 26, 2022, 8:07 PM IST
ಹುಬ್ಬಳ್ಳಿ: ಎಸ್ ಡಿಪಿಐ ಮತ್ತು ಪಿಎಫ್ ಐ ಸಂಘನೆಗಳ ನಿಷೇಧ ಕುರಿತು ವಿಶೇಷವಾಗಿ ಕರಾವಳಿ ಪ್ರದೇಶದಲ್ಲಿ ನಡೆದ ಹಲವಾರು ಘಟನೆಗಳನ್ನು ಆಧರಿಸಿ ಹಿರಿಯ ಪೊಲೀಸ್ ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲನೆ ಮಾಡುತ್ತಿದ್ದಾರೆ. ಅದರ ಆಧಾರದ ಮೇಲೆ ಮುಂದಿನ ದಿನದಲ್ಲಿ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಂತಿ ಕದಡುವುದು ಹಾಗೂ ಮತೀಯ ದ್ವೇಷ ಬಿತ್ತುತ್ತಿರುವುದನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ಸಂಗ್ರಹ ಆಧಾರ ಮೇಲೆ ಅವುಗಳ ಮೇಲೆ ಕ್ರಮತೆಗೆದುಕೊಳ್ಳಲಾಗುವುದು ಎಂದರು.
ಮಾರ್ಚ್ 4ರಂದು ಆಯವ್ಯಯ ನಡೆಯುತ್ತದೆ. ಎಲ್ಲೆಲ್ಲಿ ಯಾವ ಪ್ರದೇಶಕ್ಕೆ ಏನೇನು ಸಿಗುತ್ತದೆ ಎಂಬುದು ಗೊತ್ತಾಗುತ್ತದೆ. ಬಿಜೆಟ್ ನಲ್ಲಿ ಏನಿದೆ ಅನ್ನೋದನ್ನು ಈಗಲೇ ಹೇಳೋದು ತಪ್ಪಾಗುತ್ತದೆ. ಅದರ ಬಗ್ಗೆ ಮಾ. 4 ರಂದು ನೋಡಿ ಎಂದರು.
ಕಾಂಗ್ರೆಸ್ ಮೇಕೆದಾಟು ಪಾದಯತ್ರೆ ಅದು ರಾಜಕೀಯ ಪಾದಯಾತ್ರೆ ಆಗಿದೆ. ಅವರು ಮೊದಲು ಮಾಡಿದ್ದು ಅದನ್ನೇ, ಈಗ ಮಾಡೋದು ಅದನ್ನೇ. ಅವರ ಕಾಲದಲ್ಲಿ ಡಿಪಿಆರ್ ಸಿದ್ಧಪಡಿಸಲು 5 ವರ್ಷ ತೆಗೆದುಕೊಂಡಿದ್ದರು. ಎಚ್.ಡಿ. ಕುಮಾರಸ್ವಾಮಿ ಬಂದಮೇಲೆ ಡಿಪಿಆರ್ ಸಿದ್ಧವಾಯ್ತು. ಹೀಗಾಗಿ ಯಾವ ನೈತಿಕ ಆಧಾರದ ಮೇಲೆ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಉಕ್ರೇನ್ ದಲ್ಲಿ ರಾಜ್ಯದ ವಿದ್ಯಾರ್ಥಿಗಳು ಸಿಲುಕಿರುವ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ. ಪೂರ್ವ ಭಾಗದಲ್ಲೇ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಈಗಾಗಲೇ ಕೇಂದ್ರ ವಿದೇಶಾಂಗ ಸಚಿವರು ಅವರ ಸಂಪರ್ಕದಲ್ಲಿದ್ದಾರೆ. ಯುದ್ಧದ ತೀವ್ರತೆ ಕಡಿಮೆ ಆದ ತಕ್ಷಣ ವಿದ್ಯಾರ್ಥಿಗಳನ್ನು ಕರೆ ತರಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ