ಅಪಘಾತ : ಗಾಯಾಳನ್ನು ಆಸ್ಪತ್ರೆಗೆ ದಾಖಲಿಸಲು ನೆರವಾದ ಡಾ.ಸುಧಾಕರ್
Team Udayavani, Feb 27, 2022, 1:03 PM IST
ಬೆಂಗಳೂರು: ದೇವನಹಳ್ಳಿ ಟೌನ್ ಪ್ರವೇಶದ್ವಾರದ ಬಳಿ ಟಿಪ್ಪರ್ ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು.
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಕಾರ್ಯಕ್ರಮ ನಿಮಿತ್ತ ತೆರಳುತ್ತಿದ್ದಾಗ ತಕ್ಷಣ ಗಾಯಾಳು ಮಹಿಳೆಯ ನೆರವಿಗೆ ಧಾವಿಸಿ, ತಕ್ಷಣ ಆಸ್ಪತ್ರೆಗೆ ಸಾಗಿಸಲು ನೆರವಾಗಿ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಕರೆ ಮಾಡಿ ಸೂಚನೆ ನೀಡಿದರು.
ಗಾಯಾಳು ಮಹಿಳೆಯ ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಅಪಘಾತದ ತೀವ್ರತೆಗೆ ಒಂದು ಕಾಲು ಸಂಪೂರ್ಣ ಜಖಂ ಆಗಿದೆ.