ಇಬ್ಬರು ಎಎಸ್ಐ, ಇಬ್ಬರು ಮುಖ್ಯಪೇದೆ ಅಮಾನತು
Team Udayavani, Feb 27, 2022, 2:39 PM IST
ಯಳಂದೂರು: ರಸ್ತೆ ಅಪಘಾತ ಸಂಬಂಧ ಪೊಲೀಸ್ ಠಾಣೆಗೆ ನೀಡಿದ ದೂರನ್ನು ಸರಿಯಾಗಿ ನಿರ್ವಹಿಸಿಲ್ಲ ಹಾಗೂ ಡ್ರೆçವರ್ ಹೆಸರನ್ನು ಬದಲಿಸಲಾಗಿದೆ ಎಂಬವಿಚಾರವಾಗಿ ಯಳಂದೂರು ಪೊಲೀಸ್ ಠಾಣೆಯ ನಾಲ್ವರನ್ನು ಅಮಾನತುಗೊಳಿಸಲಾಗಿದೆ.
ಈ ವೇಳೆ ಕರ್ತವ್ಯದಲ್ಲಿದ್ದ ಎಎಸ್ಐಗಳಾದ ಮಧುಸೂದನ್, ನಾಗರಾಜು, ಹೆಡ್ ಕಾನ್ಸ್ಸ್ಟೇಬಲ್ಗಳಾದ ಪರಶಿವಮೂರ್ತಿ ಹಾಗೂ ಗೋಪಾಲ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಏನಿದು ಪ್ರಕರಣ?: ಫೆ.8 ರಂದು ಬೆಳಗ್ಗೆ 10.30 ಕ್ಕೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 209 ರ ಬಳಿ ಇರುವ ಭಾರತ್ ಪೆಟ್ರೋಲ್ ಬಂಕ್ ಹತ್ತಿರ ಟಿವಿಎಸ್ ಬೈಕ್ನಲ್ಲಿ (ಕೆಎ 10 ಎಲ್ 8210) ಅಂಬಳೆ ಗ್ರಾಮದ ನಾಗಪ್ಪ (76) ಎಂಬುವವರು ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕಾರು (ಕೆಎ10 ಎಂ5048) ಡಿಕ್ಕಿ ಹೊಡೆದಿತ್ತು. ಆ ವೇಳೆ ನಾಗಪ್ಪ ಗಾಯಗೊಂಡಿದ್ದರು. ಘಟನೆ ಕುರಿತು ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ದೂರುದಾರರು ನೀಡಿದ್ದ ದೂರಿನಲ್ಲಿ ಕಾರ್ ಡ್ರೈವರ್ನ ಹೆಸರನ್ನು ಬೇಕೆಂತಲೇ ಬದಲಿಸಲಾಗಿತ್ತು. ಅಲ್ಲದೆ ದೂರುದಾರರಿಗೆ ಇವರು ಸರಿಯಾಗಿ ಸ್ಪಂದಿಸಿಲ್ಲ ಎಂದುನಾಗಪ್ಪ ಅವರ ಪುತ್ರ ಡಾ| ಎನ್. ಲಿಂಗರಾಜು ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.
ಇದನ್ನು ಪರಿಶೀಲನೆ ನಡೆಸಿದ ಪೊಲೀಸ್ ವರಿಷ್ಠಾಧಿಕಾರಿಗಳು, ದೂರಿನಲ್ಲಿ ಲೋಪ ಕಂಡು ಬಂದಹಿನ್ನೆಲೆಯಲ್ಲಿ ಈ ನಾಲ್ವರನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
MUST WATCH
ಹೊಸ ಸೇರ್ಪಡೆ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!