“ಮಲಿಬು’ವನ್ನು ಬಿಟ್ಟು ನಾನೆಲ್ಲೂ ಹೋಗಲ್ಲ!
Team Udayavani, Feb 28, 2022, 7:50 AM IST
“ನನ್ನ ಮಲಿಬುವನ್ನು ಬಿಟ್ಟು ನಾನು ಎಲ್ಲೂ ಬರಲ್ಲ. ಪ್ಲೀಸ್ ನನ್ನೊಂದಿಗೆ ಅವನನ್ನೂ ಕರೆದುಕೊಂಡು ಬರಲು ಅವಕಾಶ ಕೊಡಿ…’
ಹೀಗೆಂದು ಉಕ್ರೇನ್ನ ಬಂಕರ್ನಲ್ಲಿದ್ದುಕೊಂಡೇ ಮೊರೆಯಿಡುತ್ತಿರುವುದು ಖಾರ್ಕಿವ್ನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿ ರಿಷಬ್ ಕೌಶಿಕ್.
ಹೌದು.ತನ್ನ ಸಹಪಾಠಿಗಳೆಲ್ಲ ಏರ್ಇಂಡಿಯಾ ವಿಮಾನಗಳನ್ನು ಹತ್ತಿ ಭಾರತಕ್ಕೆ ಮರಳುತ್ತಿದ್ದರೆ, ಕೌಶಿಕ್ ಮಾತ್ರ ಬಂಕರ್ನಿಂದ ಕದಲುತ್ತಿಲ್ಲ.
ಅಂದ ಹಾಗೆ ಕೌಶಿಕ್ ಹೇಳುತ್ತಿರುವ “ಮಲಿಬು’ ಯಾರು ಗೊತ್ತಾ? ಅವನ ಪ್ರೀತಿಯ ಸಾಕು ನಾಯಿ!
ತನ್ನ ಪುಟ್ಟ ನಾಯಿಮರಿಯನ್ನು ತನ್ನೊಂದಿಗೆ ಭಾರತಕ್ಕೆ ಕರೆತರುವ ಸಲುವಾಗಿ, ಕೌಶಿಕ್ ಎಲ್ಲ ದಾಖಲೆ ಪತ್ರಗಳನ್ನೂ ಸಿದ್ಧಪಡಿಸುತ್ತಿದ್ದಾರಂತೆ. ಬಂಕರ್ನೊಳಗೆ ವಿಪರೀತ ಚಳಿಯಿರುವ ಕಾರಣ ನಾಯಿಮರಿಗೆ ಬಹಳ ಕಷ್ಟವಾಗುತ್ತಿದೆ.
ಇದನ್ನೂ ಓದಿ:ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿ: ಪೋಷಕರಿಗೆ ಧೈರ್ಯ ತುಂಬಿದ ತಹಶೀಲ್ದಾರ್
ಹೀಗಾಗಿ, ಅವನನ್ನುಬೆಚ್ಚಗಿರಿಸಲು ನಾನು ಒಮ್ಮೊಮ್ಮೆ ಮೆಲ್ಲನೇ ಬಂಕರ್ನಿಂದ ಹೊರಬರುತ್ತಿದ್ದೇನೆ. ಸ್ಫೋಟದ ಸದ್ದಿನಿಂದ ಮಲಿಬು ಇಡೀ ದಿನ ಬೊಗಳುತ್ತಿರುತ್ತಾನೆ.
ದಯವಿಟ್ಟು ನಮಗೆ ಸಹಾಯ ಮಾಡಿ ಎಂದು ಮೊರೆಯಿಡುತ್ತಿದ್ದಾರೆ ಕೌಶಿಕ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Video call;ಪಂಜಾಬ್ ಸಚಿವ ಯುವತಿಗೆ ಖಾಸಗಿ ಅಂಗ ತೋರಿದ ವಿಡಿಯೋ ವೈರಲ್!
Bidar: ಬ್ರೇಕ್ ಫೇಲ್ ಆಗಿ ಆಲದ ಮರಕ್ಕೆ ಢಿಕ್ಕಿಯಾದ ಸಾರಿಗೆ ಬಸ್
Prajwal Revanna ಬರುತ್ತಿರುವುದು ಸಮಾಧಾನ ತಂದಿದೆ:ಎಚ್ ಡಿಕೆ ಹೇಳಿದ್ದೇನು?
Jammu and Kashmir; 35 ವರ್ಷದಲ್ಲೇ ಗರಿಷ್ಠ ಮತದಾನ: ಶೀಘ್ರ ವಿಧಾನಸಭೆಗೆ?
Maharashtra;ಎಐಎಂಐಎಂ ನಾಯಕನ ಮೇಲೆ ಗುಂಡಿನ ದಾಳಿ: ಉದ್ವಿಗ್ನತೆ