ಜೆಡಿಯು ಅಭ್ಯರ್ಥಿ ಮೇಲೆ ಗುಂಡಿನ ದಾಳಿ : ಚುನಾವಣೆಗೆ ಒಂದು ದಿನ ಇರುವಾಗಲೇ ನಡೆಯಿತು ಘಟನೆ
Team Udayavani, Feb 27, 2022, 8:54 PM IST
ಮಣಿಪುರ : ಮಣಿಪುರದಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ಜನತಾ ದಳ (ಯುನೈಟೆಡ್) ಅಭ್ಯರ್ಥಿಯ ಮೇಲೆ ಗುಂಡಿನ ದಾಳಿ ನಡೆದಿದ್ದು ಪರಿಣಾಮ ಅಭ್ಯರ್ಥಿ ಗಂಭೀರ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ಇಂಫಾಲ್ ಪೂರ್ವ ಜಿಲ್ಲೆಯ ಕ್ಷೇತ್ರಗಾವ್ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಜನತಾ ದಳ-ಯುನೈಟೆಡ್ ಅಭ್ಯರ್ಥಿ ವಹೆಂಗ್ಬಮ್ ರೋಹಿತ್ ಸಿಂಗ್ ಅವರ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮಣಿಪುರ ವಿಧಾನಸಭೆ ಚುನಾವಣೆ ಫೆಬ್ರವರಿ 28 ರಂದು ಮೊದಲ ಹಂತದಲ್ಲಿ ಕ್ಷೇತ್ರಗಾವ್ ಸೇರಿದಂತೆ 37 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ರಾತ್ರಿ 11.30 ರ ಸುಮಾರಿಗೆ ಅಭ್ಯರ್ಥಿ ಸಿಂಗ್ ತನ್ನ ನಿವಾಸದಿಂದ ಸುಮಾರು 3 ಕಿಮೀ ದೂರದಲ್ಲಿರುವ ನಹರೂಪ್ ಮಖಾಪತ್ನಲ್ಲಿ ತನ್ನ ಕೆಲವು ಬೆಂಬಲಿಗರನ್ನು ಭೇಟಿಯಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ದುಷ್ಕರ್ಮಿಗಳು ಮೂರು ಸುತ್ತು ಗುಂಡಿನ ದಾಳಿ ನಡೆಸಿದ್ದು ಗಂಭೀರ ಗಾಯಗೊಂಡ ಅಭ್ಯರ್ಥಿಯನ್ನು ಕೂಡಲೇ ಇಂಫಾಲ್ನಲ್ಲಿರುವ ಖಾಸಗಿ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿತ್ತು.
ಇದನ್ನೂ ಓದಿ : ಬೆಲಾರಸ್ ಗಡಿಯಲ್ಲಿ ರಷ್ಯಾ ಜೊತೆ ಮಾತುಕತೆಗೆ ಉಕ್ರೇನ್ ಒಪ್ಪಿಗೆ !
ದುಷ್ಕರ್ಮಿಗಳು ಎರಡು ದ್ವಿಚಕ್ರ ವಾಹನಗಳಲ್ಲಿ ಬೇರೆ ಬೇರೆ ದಾರಿ ಮೂಲಕ ಬಂದಿದ್ದು. ಸಿಂಗ್ ಜೊತೆಗಿದ್ದ ಭದ್ರತಾ ಸಿಬ್ಬಂದಿ ಮತ್ತು ಅವರ ಬೆಂಬಲಿಗರು ಪ್ರತಿಕ್ರಿಯಿಸುವ ಮೊದಲೇ, ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಸದ್ಯ ರೋಹಿತ್ ಸಿಂಗ್ ಚಿಕಿತ್ಸೆಗೆ ಸ್ಪಂಧಿಸಿದ್ದು ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ಹೇಳಿದ್ದಾರೆ.
ಚುನಾವಣೆಯಲ್ಲಿ ಗೆಲ್ಲುವ ಉತ್ತಮ ಅವಕಾಶವಿರುವುದರಿಂದ ಸಿಂಗ್ ಅವರನ್ನು ಗುರಿಯಾಗಿಸಲಾಗಿದೆ ಎಂದು ಅವರ ಕುಟುಂಬ ಸದಸ್ಯರು ಮತ್ತು ಬೆಂಬಲಿಗರು ಹೇಳಿದ್ದಾರೆ.
ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ