ಕ್ಷೇತ್ರದ ಅಭಿವೃದ್ಧಿಗೆ ನಿರಂತರ ಶ್ರಮ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ರಾಜ್ಯ ಅಭಿವೃದ್ಧಿಯಾಗಲು ಸಾಧ್ಯ. ತತ್ವಾಧಾರಿತ ಆಡಳಿತದಿಂದ ಜನಕಲ್ಯಾಣವಾಗುತ್ತದೆ

Team Udayavani, Feb 28, 2022, 6:15 PM IST

ಕ್ಷೇತ್ರದ ಅಭಿವೃದ್ಧಿಗೆ ನಿರಂತರ ಶ್ರಮ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸವಣೂರು: ಕ್ಷೇತ್ರದ ಜನತೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪನವರ ಆಶೀರ್ವಾದದಿಂದ ನಾನೆಂದೂ ಎಣಿಸಿರದ ಮುಖ್ಯಮಂತ್ರಿಯಾಗುವ ಭಾಗ್ಯ ಸಿಕ್ಕಿದೆ. ಇದರೊಂದಿಗೆ ನಾಡಿನ ಜನತೆ ನಂಬಿಕೆಯಿಟ್ಟು ನನ್ನ ಹೆಗಲ ಮೇಲೆ ಹೆಚ್ಚಿನ ಜವಾಬ್ದಾರಿ ಹಾಕಿದ್ದಾರೆ ಎಂದು ನಾನು ಭಾವಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪಟ್ಟಣದ ದೊಡ್ಡ ಹುಣಸೆ ಕಲ್ಮಠದಲ್ಲಿ ರವಿವಾರ ನಡೆದ ಗುರು ರಾಚೋಟೇಶ್ವರ ಮಹಾಸ್ವಾಮಿಗಳ 45ನೇ ಸ್ಮರಣೋತ್ಸವ, ಶರಣ ಸಂಸ್ಕೃತಿ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಅಭಿವೃದ್ಧಿ ನಿರಂತರ ಪ್ರಕ್ರಿಯೆ. ನನ್ನ ಕ್ಷೇತ್ರದ ಅಭಿವೃದ್ಧಿಯನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದೇನೆ. ಬಡವರಿಗೆ, ಮಹಿಳೆಯರಿಗೆ, ಯುವಕರಿಗೆ ಸಾಧ್ಯವಾದಷ್ಟು ಪ್ರಾಮಾಣಿಕವಾಗಿ ಸಹಾಯ ಮಾಡಲು ಬದ್ಧನಾಗಿದ್ದೇನೆ ಎಂದರು.

ರಾಜ್ಯ ಕಟ್ಟಲು ನಿಮ್ಮ ಮನೆ ಮಗನನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿಸಿ ಕಳುಹಿಸಿದ್ದೀರಿ. ಆದ್ದರಿಂದ, ತಮ್ಮ ಆಶೀರ್ವಾದ ಸದಾ ನನ್ನ ಮೇಲಿರಲಿ ಎಂದು ಕ್ಷೇತ್ರದ ಮತದಾರರಲ್ಲಿ ಕೇಳಿಕೊಂಡರು.

ಪರಮ ಪೂಜ್ಯರ ಆಶೀರ್ವಾದದಿಂದ ನಾನು ಶಾಸಕನಾಗಿ, ಮಂತ್ರಿಯಾಗಿ ಇದೀಗ ಮುಖ್ಯಮಂತ್ರಿಯಾಗಿ ಭಾಗವಹಿಸುವ ಸೌಭಾಗ್ಯ ನನ್ನದಾಗಿದೆ. ಪ್ರತಿ ವರ್ಷದ ಶರಣ ಸಂಸ್ಕೃತಿಯಿಂದ ನಾನು ಪ್ರೇರಣೆ ಪಡೆಯುತ್ತಾ ಬಂದಿದ್ದೇನೆ. ಶರಣರ ಮಾತುಗಳಲ್ಲಿ ಆತ್ಮ ಶೋಧನೆಯ ಅಂಶಗಳಿರುತ್ತವೆ. ಆತ್ಮ ಶೋಧನೆ ಆತ್ಮ ಶುದ್ಧೀಕರಣಕ್ಕೆ ಮುಖ್ಯವಾಗಿದೆ.

ಸರಿ ತಪ್ಪಿನ ಶೋಧನೆ ಮಾಡದೇ ಮನಸ್ಸಿನ ಶುದ್ಧೀಕರಣವಾಗುವುದಿಲ್ಲ. ಅದಕ್ಕಾಗಿ ಯೋಗ್ಯ ಮನಸ್ಥಿತಿ, ಆತ್ಮದ ಅರಿವು, ಬಾಹ್ಯದ ಅನುಭವ ಹಾಗೂ ಮುಖ್ಯವಾಗಿ ಶಿವಶರಣರ ಧಾರ್ಮಿಕ ಸಂಸ್ಕೃತಿ ಅವಶ್ಯವಾಗಿದೆ ಎಂದರು. ಚಿತ್ರದುರ್ಗ ಮುರಘಾಮಠದ ಜಗದ್ಗುರು ಡಾ|ಶಿವಮೂರ್ತಿ ಮುರಘಾ ಶರಣರು ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು. ಗಂಗಾವತಿ ಕಲ್ಮಠದ ಡಾ|ಕೊಟ್ಟೂರ ಮಹಾಸ್ವಾಮಿಗಳು ನೇತೃತ್ವ ವಹಿಸಿದ್ದರು.

ಸಮಾರಂಭದಲ್ಲಿ ಅಥಣಿಯ ಮೋಟಗಿಮಠದ ಪ್ರಭು ಚನ್ನಬಸವ ಮಹಾಸ್ವಾಮಿಗಳಿಗೆ ಶ್ರೀಮಠದಿಂದ ನೀಡಲಾಗುವ ಕಲ್ಪವೃಕ್ಷ ಶ್ರೀ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರದಾನ ಮಾಡಿ ಗೌರವಿಸಿದರು.ಸಮಾರಂಭದ ನೇತೃತ್ವ ವಹಿಸಿದ್ದ ಚನ್ನಬಸವ ಮಹಾಸ್ವಾಮಿಗಳು ಪ್ರಾಸ್ತಾವಿಕವಾಗಿ ಮಾತನಾಡಿದರು. ಚಲನಚಿತ್ರ ನಿರ್ಮಾಪಕ ಡಾ| ಗಂಡಸಿ ಸದಾನಂದ ಸ್ವಾಮಿ, ರಾಷ್ಟ್ರೀಯ ಪಂಚಮಸಾಲಿ ಯುವ ಘಟಕದ ಅಧ್ಯಕ್ಷ ರಾಜಶೇಖರ ಮೆಣಸಿನಕಾಯಿ ಮಾತನಾಡಿದರು.

ಶರಣ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಪ್ರೊ. ಮಾರುತಿ ಶಿಡ್ಲಾಪೂರ ವಚನಗಳ ಮೌಲ್ಯಗಳ ಕುರಿತು ಉಪನ್ಯಾಸ ನೀಡಿದರು. ಪುರಸಭೆ ಸದಸ್ಯ ಸದಾನಂದ ಕೆಮ್ಮಣ್ಣಕೇರಿ, ದೇವರಗುಡ್ಡದ ಪ್ರಧಾನ ಅರ್ಚಕ ಸಂತೋಷ ಗುರೂಜಿ, ಡಾ|ಹರಿಪ್ರಸಾದ, ನಿವೃತ್ತ ಎಸಿಪಿ ಪೀರಪ್ಪ ಎಸ್‌. ಗಚ್ಚಿನಕಟ್ಟಿ, ಎನ್‌.ಜಿ.ಶ್ರೀನಿವಾಸ, ಯೋಗೇಂದ್ರ ಜಂಬಗಿ ಉಪಸ್ಥಿತರಿದ್ದರು. ವನಿತಾ ಪರಮೇಶ್ವರ ಕೆ. ವಚನ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಡಿ.ಎಫ್‌.ಬಿಂದಲಗಿ ನಿರೂಪಿಸಿದರು.

ತತ್ವಜ್ಞಾನಿ ರಾಜನಾಗಿರಬೇಕು
ರಾಜ ತತ್ವಜ್ಞಾನಿಯಾದಾಗ ಮಾತ್ರ ರಾಜ್ಯ ಅಭಿವೃದ್ಧಿಯಾಗಲು ಸಾಧ್ಯ. ತತ್ವಾಧಾರಿತ ಆಡಳಿತದಿಂದ ಜನಕಲ್ಯಾಣವಾಗುತ್ತದೆ. ಆದ್ದರಿಂದ ಶರಣರ ಮಾತುಗಳು ಪ್ರೇರಣೆ ಮಾತ್ರವಲ್ಲ ಆತ್ಮಶೋಧನೆಗೆ ದಾರಿ ಮಾಡಿಕೊಡುತ್ತದೆ. ತತ್ವಾದರ್ಶಗಳಿಂದ ಬಾಳಿದ ಮಾಜಿ ಮುಖ್ಯಮಂತ್ರಿ ಎಸ್‌. ನಿಜಲಿಂಗಪ್ಪನವರನ್ನು ಮುಖ್ಯಮಂತ್ರಿಯನ್ನಾಗಿಸಿದ ಕ್ಷೇತ್ರವಿದು. ಅಂತಹವರನ್ನು ಈ ಕ್ಷೇತ್ರದಿಂದ ಅವಿರೋಧವಾಗಿ ಆಯ್ಕೆ ಮಾಡುವ ಸಂದರ್ಭದಲ್ಲಿ ಎದುರಾಗಿದ್ದ ಸಮಸ್ಯೆಗಳನ್ನು ನಿವಾರಿಸಿ ಆಯ್ಕೆಯನ್ನು ಸರಳಗೊಳಿಸುವಲ್ಲಿ ನಮ್ಮ ತಂದೆ ಮಾಜಿ ಮುಖ್ಯಮಂತ್ರಿ ಎಸ್‌.ಆರ್‌.ಬೊಮ್ಮಾಯಿ ಅವರ ಶ್ರಮವೂ ಇತ್ತು ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಮರಿಸಿದರು.

ಟಾಪ್ ನ್ಯೂಸ್

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ

Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ

3-mundaragi

Mundargi: ದುರಸ್ತಿ ಸಂದರ್ಭ ವಿದ್ಯುತ್‌ ಶಾಕ್‌ ; ಕೂಲಿಕಾರ ಸಾವು

ಮುಂಡರಗಿ-ರಾಜ್ಯ ಸರ್ಕಾರವೂ ಬರ ಪರಿಹಾರ ನೀಡಲಿ: ಶಿವಾನಂದ ಇಟಗಿ

ಮುಂಡರಗಿ-ರಾಜ್ಯ ಸರ್ಕಾರವೂ ಬರ ಪರಿಹಾರ ನೀಡಲಿ: ಶಿವಾನಂದ ಇಟಗಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.