ಇಂಗ್ಲಿಷ್‌ ಪ್ರಭಾವ ಹೆಚ್ಚಾಗಿ ಮರೆಯಾಗುತ್ತಿದೆ ಕನ್ನಡ


Team Udayavani, Mar 1, 2022, 10:55 AM IST

10kannada

ಜೇವರ್ಗಿ: ಇಂಗ್ಲಿಷ್‌ ಪ್ರಭಾವ ಹೆಚ್ಚಾಗಿ ಕನ್ನಡ ಮರೆಯಾಗುತ್ತಿದೆ. ಹೆಚ್ಚು ಕನ್ನಡ ಪದಗಳನ್ನೇ ಬಳಸಿ ಭಾಷೆ ಉಳಿಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಹಿರಿಯ ವಿದ್ವಾಂಸ, ಸಾಹಿತಿ ಗೋ.ರು. ಚನ್ನಬಸಪ್ಪ ಹೇಳಿದರು.

ಪಟ್ಟಣದ ಹಳೆಯ ತಹಶೀಲ್‌ ಕಚೇರಿ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಘಟಕದ ಕಾರ್ಯ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ವ್ಯಕ್ತಿ ಪ್ರತಿಷ್ಠೆಯಿಂದ ದೇಶ ಇಂದು ಅಲ್ಲೋಲ ಕಲ್ಲೋಲವಾಗಿದೆ. ಬರಹಗಾರ ತಮ್ಮ ಗಂಭೀರ ಚಿಂತನೆಗಳಿಂದ ಈ ಬಗ್ಗೆ ಜಾಗೃತಿ ಮೂಡಿಸಬೇಕು. ಸಾಹಿತಿ, ರಾಜಕಾರಣಿ ಹಾಗೂ ಸನ್ಯಾಸಿ ಎಂದಿಗೂ ಅಹಂಕಾರಿಯಾಗಬಾರದು. ಸಾಹಿತ್ಯ ಸಹಜವಾಗಿ ಮೂಡಿಬರಬೇಕು. ಪ್ರಾಚೀನ ಸಾಹಿತ್ಯದ ನಂತರ ನೂರಾರು ಸಾಹಿತ್ಯ ಪ್ರಕಾರಗಳು ಹರಿದು ಬಂದಿದ್ದರೂ ಪ್ರಾಚೀನ ಸಾಹಿತ್ಯ ಗಟ್ಟಿಯಾಗಿ ಉಳಿದಿದೆ. ನಮ್ಮ ಅಭಿರುಚಿ ಹಾಳಾಗಿದೆ. ವಿಕೃತ ಮತ್ತು ವಿಲಕ್ಷಣ ಅಭಿರುಚಿಗಳು ನಮ್ಮ ಯುವ ಜನರ ದಾರಿದೀಪಗಳಾಗಿರುವುದು ದುರ್ದೈವ. ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಡೆಯುವ ಕಾರ್ಯಕ್ರಮಗಳು ಕೇವಲ ಶಿಕ್ಷಕರು, ಅಧಿಕಾರಿಗಳು ಹಾಗೂ ಮಕ್ಕಳಿಗೆ ಸೀಮಿತವಾಗಬಾರದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಜೇರಟಗಿ ವಿರಕ್ತಮಠದ ಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪುರಸಭೆ ಅಧ್ಯಕ್ಷೆ ಶರಣಮ್ಮ ಸಾಯಬಣ್ಣ ತಳವಾರ, ಯಡ್ರಾಮಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಲವಂತರಾಯ ಬಿರಾದಾರ, ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಶಿವನಗೌಡ ಪಾಟೀಲ ಹಂಗರಗಾ, ಕನ್ನಡ ಸಾಹಿತ್ಯ ಪರಿಷತ್ತು ಯಡ್ರಾಮಿ ತಾಲೂಕು ಘಟಕದ ಅಧ್ಯಕ್ಷ ನಾಗಪ್ಪ ಸಜ್ಜನ್‌ ಭಾಗವಹಿಸಿದ್ದರು. ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಅಧ್ಯಕ್ಷ ಎಸ್‌.ಕೆ.ಬಿರಾದಾರ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಜ್ಞಾನಜ್ಯೋತಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ನಾಡಗೀತೆ ನೃತ್ಯ, ಶ್ರೀ ಮಹಾಲಕ್ಷ್ಮೀ ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರಿಂದ ಜಾನಪದ ನೃತ್ಯ, ಬಸಯ್ಯಸ್ವಾಮಿ ಹಿರೇಮಠ ಕಾಸರಭೋಸಗಾ ಜಾನಪದ ಹಾಡುಗಳನ್ನು ಹಾಡಿದರು. ಶರಣಮ್ಮ ಸುಂಬಡ ಸಿದ್ದಮ್ಮ ಚನ್ನೂರ ಹಾಗೂ ಸಂಗಡಿಗರು ಶೋಭಾನ ಹಾಡು ಹಾಡಿದರು. ಚಂದಾಸಾಬ್‌ ಜಲಾಲಸಾಬ್‌ ಚನ್ನೂರ ಭಜನೆ ಪದಗಳು, ಶಂಕರ ಹಾಗೂ ಸಂಗಡಿಗರು ಡೊಳ್ಳಿನ ಪದಗಳನ್ನು ಹಾಡಿದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೆ„ದ ಸಾಧಕರನ್ನು ಸನ್ಮಾನಿಸಲಾಯಿತು.

ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಪ್ರೊ.ಯಶವಂತ ರಾಯ ಅಷ್ಠಗಿ, ಶಿವರಾಜ ಅಂಡಗಿ, ವಿನೋದಕುಮಾರ ಜನವರಿ, ಚನ್ನಮಲ್ಲಯ್ಯಸ್ವಾಮಿ ಹಿರೇಮಠ, ಕಲ್ಯಾಣಕುಮಾರ ಸಂಗಾವಿ, ಸೋಮಶೇಖರಗೌಡ ಪಾಟೀಲ ಗುಡೂರ, ಚಂದ್ರಶೇಖರ ಸೀರಿ, ಶಿವಾನಂದ ಘಂಟಿಮಠ, ಪುಂಡಲೀಕ ಗಾಯಕವಾಡ, ಶಶಿ ಮಹೇಂದ್ರಕರ್‌, ನೀಲಕಂಠರಾಯಗೌಡ ಮಾಲಿಪಾಟೀಲ, ಸಂಗಯ್ಯ ಗುತ್ತೇದಾರ, ಉಮಾಕಾಂತ ಗೋಲಗೇರಿ, ಶ್ರೀಹರಿ ಕರಕಿಹಳ್ಳಿ, ಎಸ್‌.ಎ,ಪಡಶೆಟ್ಟಿ, ಸುನಂದಾ ಕಲ್ಲಾ, ಜಗನ್ನಾಥ ಇಮ್ಮಣ್ಣಿ, ಮಹಾಂತೇಶ ಪಾಟೀಲ, ಪರಮೇಶ್ವರ ಬಿರಾಳ, ಕಾಶಿನಾಥ ಸಾಹು ಮಂದೇವಾಲ, ಬಸವರಾಜ ಬಾಗೇವಾಡಿ, ವೆಂಕಟರಾವ ಮುಜುಮದಾರ, ಸಂಗಮೇಶ ಸಂಕಾಲಿ, ಎಸ್‌.ಟಿ.ಬಿರಾದಾರ, ಡಾ|ಹಣಮಂತ್ರಾವ ರಾಂಪೂರೆ, ಶರಣಗೌಡ ಜೈನಾಪೂರ, ಬಸವರಾಜ ತಿಳಗೂಳ, ಭೀಮಯ್ಯ ಗುತ್ತೇದಾರ, ಮೌನಪ್ಪ ವಿಶ್ವಕರ್ಮ, ಭೀಮರಾವ ಭಜಂತ್ರಿ ಸೇರಿದಂತೆ ಹಲವಾರು ಜನ ಭಾಗವಹಿಸಿದ್ದರು. ಶಿಕ್ಷಕಿ ಸುನಂದಾ ಕಲ್ಲಾ ಸ್ವಾಗತಿಸಿದರು. ಡಾ|ಧರ್ಮಣ್ಣ ಬಡಿಗೇರ ನಿರೂಪಿಸಿದರು. ಬಸವರಾಜ ಬಾಗೇವಾಡಿ ವಂದಿಸಿದರು.

ಟಾಪ್ ನ್ಯೂಸ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

6-sslc

Rank: ರಾಜ್ಯಕ್ಕೆ 5ನೇ ರ‍್ಯಾಂಕ್ ಪಡೆದ ಪ್ರತ್ವಿತಾ ಪಿ.ಶೆಟ್ಟಿ; ಐ.ಎ.ಎಸ್ ಅಧಿಕಾರಿಯಾಗುವ ಆಸೆ

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.