ಜೀವ ಉಳಿಸಿಕೊಳ್ಳಲು ಹೋದಾತ ಜೀವನವನ್ನೇ ಕಳೆದುಕೊಂಡ


Team Udayavani, Mar 2, 2022, 7:20 AM IST

ಜೀವ ಉಳಿಸಿಕೊಳ್ಳಲು ಹೋದಾತ ಜೀವನವನ್ನೇ ಕಳೆದುಕೊಂಡ

ದಾವಣಗೆರೆ: ಹೊರಗಡೆ ಜೀವ ಕಳೆದುಕೊಳ್ಳುವ ಭಯ. ಒಳಗಡೆ ಜೀವ ಉಳಿಸಿಕೊಳ್ಳುವ ಭಯ. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಹಸಿವು ನೀಗಿಸಿಕೊಳ್ಳಲು ಹೊರಗೆ ಕಾಲಿಟ್ಟವನು ಕೊನೆಗೂ ಶೆಲ್‌ ದಾಳಿಗೆ ಗುರಿಯಾದ.

ಇದು ರಷ್ಯಾ-ಉಕ್ರೇನ್‌ ನಡುವಿನ ಕಾಳಗದಲ್ಲಿ ಸಿಲುಕಿ ಜೀವ ಕಳೆದುಕೊಂಡ ಹಾವೇರಿ ಜಿಲ್ಲೆ ರಾಣಿಬೆನ್ನೂರು ತಾಲೂಕಿನ ಚಳಗೇರಿಯ ಯುವಕ ನವೀನ್‌ ಗ್ಯಾನಗೌಡರ ಸಾವಿನ ಘಟನೆ.

ಬಂಕರ್‌ನಲ್ಲಿ ತಿನ್ನಲು ಏನೂ ಇಲ್ಲದ್ದರಿಂದ ಮಂಗಳವಾರ ಬೆಳಗ್ಗೆ ನವೀನ, ತನಗೆ ಹಾಗೂ ತನ್ನೊಟ್ಟಿಗೆ ಇರುವ ಇಬ್ಬರು ಸ್ನೇಹಿತರಿಗಾಗಿ ತಿಂಡಿ ತರಲು ಬಂಕರ್‌ನಿಂದ ಹೊರಗಡೆ ಬಂದ. ಅಣತಿ ದೂರ ಹೋಗುತ್ತಿದ್ದಂತೆ ಆ ವೇಳೆ ನಡೆಯುತ್ತಿದ್ದ ಶೆಲ್‌ ದಾಳಿಗೆ ಸಿಲುಕಿ ಪ್ರಾಣ ಕಳೆದುಕೊಂಡೇ ಬಿಟ್ಟ. ಹಸಿವಿನಿಂದ ಜೀವ ಉಳಿಸಿಕೊಳ್ಳಲು ಹೊರಟವನ ಪ್ರಾಣ, ಶೆಲ್‌ಗ‌ಳ ದಾಹಕ್ಕೆ ಆಹುತಿಯಾಯಿತು.

ರಷ್ಯಾ-ಉಕ್ರೇನ್‌ ಯುದ್ಧ ಆರಂಭ
ವಾಗುತ್ತಿದ್ದಂತೆ ಖಾರ್ಕಿವ್‌ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯದ ನೂರಾರು ವಿದ್ಯಾರ್ಥಿಗಳನ್ನು ಬಂಕರ್‌ಗಳಲ್ಲಿ ರಕ್ಷಣೆ ಮಾಡಲಾಗಿತ್ತು. ಅದೇ ರೀತಿ ರಾಣಿಬೆನ್ನೂರು ತಾಲೂಕಿನ ಚಳಗೇರಿಯ ಮೂವರು (ಅಮಿತ್‌, ನವೀನ್‌, ಸುಮನ್‌) ವಿದ್ಯಾರ್ಥಿಗಳು ಒಂದೇ ಬಂಕರ್‌ನಲ್ಲಿದ್ದರು. ಕಳೆದ ಮೂರ್‍ನಾಲ್ಕು ದಿನಗಳಿಂದ ಆಹಾರ ಸಿಗದೆ ಪರಿತಪಿಸುತ್ತಿದ್ದು ಒಣಹಣ್ಣು, ಬಿಸ್ಕೆಟ್‌ನಂಥ ತಿಂಡಿ ತಿಂದು ದಿನ ಕಳೆಯುತ್ತಿದ್ದರು. ಇದ್ದಷ್ಟು ತಿಂಡಿ ಖಾಲಿಯಾಗಿದ್ದರಿಂದ ಅಮಿತ್‌, ತಿಂಡಿ ತರಲು ಹೊರಗಡೆ ಹೋಗಲು ಸಿದ್ಧನಾದ. ಆಗ ನವೀನ್‌, ನೀನು ಬೇಡ. ಹೊರಗೆ ಎಚ್ಚರಿಕೆಯಿಂದ ಹೋಗಬೇಕು. ನಾನೇ ಹೋಗುತ್ತೇನೆ’ ಎಂದು ಆತನನ್ನು ತಡೆದು ತಾನೇ ಬಂಕರ್‌ ಹೊರಗೆ ಕಾಲಿಟ್ಟ.

ಕರೆ ಸ್ವೀಕರಿಸಲಿಲ್ಲ
ಒಂದು ಗಂಟೆಯಾದರೂ ಮರಳಿ ಬಾರದೇ ಇರುವುದರಿಂದ ಸ್ನೇಹಿತರು ನವೀನ್‌ ಮೊಬೈಲ್‌ಗೆ ಕರೆ ಮಾಡಿದ್ದಾರೆ. ಮೊಬೈಲ್‌ ರಿಂಗಣಿಸಿತ್ತಾದರೂ ಕರೆ ಸ್ವೀಕರಿಸಲಿಲ್ಲ. ಇದರಿಂದ ಭಯಗೊಂಡ ಸ್ನೇಹಿತರು ಚಳಗೇರಿಗೆ ಕರೆ ಮಾಡಿ ಪಾಲಕರಿಗೆ ವಿಷಯ ಮುಟ್ಟಿಸಿದರು. ಪಾಲಕರು ವಿಚಾರ ಮಾಡುವಷ್ಟರಲ್ಲಿ ವಿದೇಶಾಂಗ ಸಚಿವಾಲಯದಿಂದ ನವೀನ್‌ ಮೃತಪಟ್ಟ ಅಧಿಕೃತ ಮಾಹಿತಿ ಬಂದಿತ್ತು. ವಿಷಯ ತಿಳಿದ ತಂದೆ-ತಾಯಿ ಇದ್ದಲ್ಲೇ ಕುಸಿದು ಬಿದ್ದರು. ಇತ್ತ ಬಂಕರ್‌ನಲ್ಲಿರುವ ಸ್ನೇಹಿತರಿಗೆ ನವೀನ್‌ ಶೆಲ್‌ ದಾಳಿಗೆ ತುತ್ತಾಗಿರುವ ಸುದ್ದಿ ತಿಳಿದು ಜೀವ ಭಯದಲ್ಲೇ ಮುದುಡಿಕೊಂಡಿದ್ದಾರೆ.

ಯುದ್ಧ ಸಂದರ್ಭ ಶೆಲ್‌ ದಾಳಿಗೆ ತುತ್ತಾದ ಸಹೋದರನ ಮಗ ನವೀನನ ಸಾವಿನ ಘಟನೆಯನ್ನು ಮಾಧ್ಯಮದವರ ಮುಂದೆ ಎಳೆ ಎಳೆಯಾಗಿ ಬಿಚ್ಚಿಟ್ಟ ಉಜ್ಜನಗೌಡ ಗ್ಯಾನಗೌಡರ ಕಣ್ಣುಗಳಲ್ಲಿ ನೀರಿನ ಹರಿವು ನಿಲ್ಲಲೇ ಇಲ್ಲ.

ಸ್ನೇಹಿತ ನವೀನ್‌ ಸಾವಿನ ಸುದ್ದಿ ಕೇಳಿ ನಮ್ಮ ಮಕ್ಕಳು ಬಹಳ ಆತಂಕಗೊಂಡಿದ್ದಾರೆ. ಬಹಳ ಸಂಕಷ್ಟದಲ್ಲಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರಲು ಸರಕಾರ ಕೂಡಲೇ ಕ್ರಮ ವಹಿಸಬೇಕು.
– ಶ್ರೀಧರ ವೈಶ್ಯರ, ವೆಂಕಟೇಶ ವೈಶ್ಯರ (ಅಮಿತ್‌, ಸುಮನ್‌ ಅವರ ಪಾಲಕರು)

ಟಾಪ್ ನ್ಯೂಸ್

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.