ಜನರ ಆಶಯಗಳಿಗೆ ಪೂರಕವಾದ ಬಜೆಟ್‌ ಮಂಡನೆಯಾಗಲಿ


Team Udayavani, Mar 2, 2022, 6:00 AM IST

ಜನರ ಆಶಯಗಳಿಗೆ ಪೂರಕವಾದ ಬಜೆಟ್‌ ಮಂಡನೆಯಾಗಲಿ

ಚೊಚ್ಚಲ ಬಜೆಟ್‌ ಮಂಡನೆಗೆ ಸಜ್ಜಾಗುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮುಂದೆ ಸಂಪನ್ಮೂಲ ಕ್ರೋಡೀಕರಣ, ಹೊಸ ಯೋಜನೆ ಹಾಗೂ ಕಾರ್ಯಕ್ರಮಗಳ ಅನುಷ್ಠಾನದ ದೊಡ್ಡ ಸವಾಲು ಇದೆ.
ಕೊರೊನಾ ಲಾಕ್‌ಡೌನ್‌, ಪ್ರವಾಹದಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಎರಡು ವರ್ಷಗಳಿಂದ ಸಂಕಷ್ಟಕ್ಕೀಡಾಗಿದ್ದು ಇದೀಗಷ್ಟೇ ಚೇತರಿ ಸಿಕೊಳ್ಳುತ್ತಿರುವುದು ಆಶಾದಾಯಕ ಬೆಳವಣಿಗೆ. ಆದರೆ ಜಿಎಸ್‌ಟಿ ಪರಿಹಾರ 2022ಕ್ಕೆ ಮುಕ್ತಾಯವಾಗುವ ಆತಂಕ, ಕೇಂದ್ರದ ಸಹಾಯಧನ, ತೆರಿಗೆ ಹಂಚಿಕೆ ಪ್ರಮಾಣ ಇಳಿಕೆ ಮತ್ತಿತರ ಕಾರಣಗಳಿಂದ 2022-23ನೇ ಸಾಲಿನ ಬಜೆಟ್‌ನಲ್ಲಿ ಹಣಕಾಸು ಹೊಂದಾಣಿಕೆ ಮಾಡಲು ಹರಸಾಹಸ ಮಾಡಬೇಕಾಗಿರುವುದಂತೂ ಹೌದು.

ಜತೆಗೆ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಕಾರಣ ಈ ಬಾರಿಯ ಬಜೆಟ್‌ ಚುನಾವಣೆ ಬಜೆಟ್‌ ಎಂದೇ ಬಿಂಬಿಸ ಲಾಗಿದೆ. ಹೀಗಾಗಿ ಆಡಳಿತ ಪಕ್ಷದ ಶಾಸಕರಷ್ಟೇ ಅಲ್ಲದೆ ಎಲ್ಲ ಶಾಸಕರು ತಮ್ಮ ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಕೈಗಾರಿಕೆ, ಪ್ರವಾಸೋದ್ಯಮ ವಲಯದ ಬೇಡಿಕೆಗಳೂ ಹೆಚ್ಚಾಗಿವೆ. ಶಿಕ್ಷಣ, ಆರೋಗ್ಯ, ಆಹಾರ ಮತ್ತು ನಾಗರಿಕ ಪೂರೈಕೆ, ಇಂಧನ, ಕೃಷಿ, ತೋಟಗಾ ರಿಕೆ, ಕಂದಾಯ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌, ಸಮಾಜ ಕಲ್ಯಾಣ ಇಲಾಖೆಗಳ ನಿರೀಕ್ಷೆಗಳು ದೊಡ್ಡ ಮಟ್ಟದಲ್ಲೇ ಇವೆ.

ರಾಜ್ಯದ ಪ್ರತೀ ಜಿಲ್ಲೆಯಿಂದಲೂ ಬಜೆಟ್‌ನಲ್ಲಿ ಹೊಸ ಯೋಜನೆಗಳು ಹಾಗೂ ಕಾರ್ಯಕ್ರಮ, ಈ ಹಿಂದೆ ಘೋಷಣೆಯಾದ ಯೋಜನೆಗಳಿಗೆ ಅನುದಾನ ಒದಗಿಸುವ ಬೇಡಿಕೆ ಇದೆ. ಬಜೆಟ್‌ ಪೂರ್ವಭಾವಿ ಸಭೆಗಳಲ್ಲಿ ಪಾಲ್ಗೊಂಡಿದ್ದ ಚಲನಚಿತ್ರ ವಾಣಿಜ್ಯ ಮಂಡಳಿ, ಎಫ್ಕೆಸಿಸಿಐ, ರೈತ ಸಂಘ ಟನೆಗಳು ಹೀಗೆ ಪ್ರತಿಯೊಬ್ಬರೂ ತಮ್ಮ ತಮ್ಮ ವಲಯಕ್ಕೆ ಹೊಸ ಯೋಜನೆ ರೂಪಿಸಲು ಬೇಡಿಕೆ ಇಟ್ಟಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಬಜೆಟ್‌ ನಿರೀಕ್ಷೆಗಳ ದೊಡ್ಡ ಪಟ್ಟಿಯೇ ಇದೆ. ರಾಜ್ಯ ಬಿಜೆಪಿ ಸರಕಾರದ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಹೊಣೆಗಾರಿಕೆಯೂ ಇದೆ. 2023 ಚುನಾ ವಣೆ ವರ್ಷ ಆಗಿರುವುದರಿಂದ ಪ್ರಣಾಳಿಕೆಯ ಎಲ್ಲ ಆಶ್ವಾಸನೆ ಈಡೇರಿಸ ಬೇಕು. ಹಾಗೆಯೇ ಇದು ಬೊಮ್ಮಾಯಿ ಅವರು ಮಂಡಿಸುತ್ತಿರುವ ಈ ಸರಕಾರದ ಕಡೆಯ ಮತ್ತು ಈ ಸರಕಾರವೇ ಅನುಷ್ಠಾನ ಮಾಡಬಹುದಾದ ಪೂರ್ಣ ಬಜೆಟ್‌.

ಮತ್ತೊಂದು ಬಜೆಟ್‌ ಮಂಡನೆಯ ಅವಕಾಶ ಇದ್ದರೂ ಅದು ಕೇವಲ ಲೇಖಾನುದಾನದ ರೀತಿ ಇರುತ್ತದೆ. ಜತೆಗೆ ಅನುಷ್ಠಾನ ಚುನಾವಣೆ ಅನಂತರದ ಸರಕಾರದ ಜವಾಬ್ದಾರಿಯಾಗಿರುತ್ತದೆ ಆದರೆ ಮುಂದಿನ ವರ್ಷ ಚುನಾವಣೆ ಇರುವುದರಿಂದ ಈ ಬಜೆಟ್‌ನಲ್ಲಿ ಘೋಷಣೆಯಾದ ಕಾರ್ಯಕ್ರಮ ಹಾಗೂ ಯೋಜನೆಗಳಿಗೆ ಮಹತ್ವವಿದೆ. ಇದರ ಜಾರಿ ಬಗ್ಗೆಯೂ ವಿಪಕ್ಷಗಳೂ ನಿಗಾ ವಹಿಸಿರುತ್ತವೆ.

ಅತ್ತ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನ, ಕೇಂದ್ರದಿಂದ ಬರುವ ತೆರಿಗೆ ಹಂಚಿಕೆ ಹಾಗೂ ಅನುದಾನ, ಜಿಎಸ್‌ಟಿ ಪರಿಹಾರ ಮುಂದುವರಿಯದಿದ್ದರೆ ಎದುರಾಗಬಹುದಾದ ಸಂಕಷ್ಟ ಎಲ್ಲವನ್ನೂ ನೋಡಿ ಕೊಂಡೇ ಬಜೆಟ್‌ ರೂಪಿಸಬೇಕಾಗುತ್ತದೆ. ನಮ್ಮ ಬದ್ಧತೆ ಮತ್ತು ರಾಜ್ಯದ ಅಭಿವೃದ್ಧಿಯ ಬಗೆಗಿನ ಸ್ಪಷ್ಟತೆ ಬಜೆಟ್‌ನಲ್ಲಿ ತೋರಿಸುತ್ತೇವೆ ಎಂದು ಖುದ್ದು ಮುಖ್ಯಮಂತ್ರಿಯವರು ವಿಧಾನಸಭೆಯಲ್ಲಿ ಹೇಳಿದ್ದಾರೆ. ಹೀಗಾಗಿ ಹಣಕಾಸು ಖಾತೆಯ ಹೊಣೆಗಾರಿಕೆಯೂ ವಹಿಸಿಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಈ ಬಾರಿಯ ಬಜೆಟ್‌ ಸವಾಲೇ ಸರಿ.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಿಒಕೆ

Editorial; ಪಿಒಕೆ: ಭುಗಿಲೆದ್ದ ಜನಾಕ್ರೋಶ ಇಕ್ಕಟ್ಟಿಗೆ ಸಿಲುಕಿದ ಪಾಕಿಸ್ಥಾನ

1—–ewqeq

Health; ರೋಗಮುಕ್ತ ಸಮಾಜಕ್ಕಾಗಿ ಆರೋಗ್ಯಯುತ ಆಹಾರ ಕ್ರಮ

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.