ಕಲೆ-ಸಾಹಿತ್ಯಕ್ಕೆ ಪ್ರೋತ್ಸಾಹ ಅಗತ್ಯ: ನರಿಬೋಳ


Team Udayavani, Mar 2, 2022, 11:00 AM IST

7naribola

ಜೇವರ್ಗಿ: ಪ್ರತಿಯೊಬ್ಬರಲ್ಲಿಯೂ ಒಂದೊಂದು ಪ್ರತಿಭೆ ಹಾಗೂ ಕಲೆ ಅಡಗಿರುತ್ತದೆ. ಅದನ್ನು ಹೊರತರುವ ಪ್ರಯತ್ನ ಆಗಬೇಕಿದೆ. ಕಲೆ ಇಲ್ಲದಿದ್ದರೇ ಮನುಷ್ಯ ಮೃಗವಾಗುತ್ತಾನೆ. ಇನ್ನೊಬ್ಬರ ಸಾಧನೆ ಕಂಡು ಅಸೂಹೆ ಪಡದೇ ಪ್ರೋತ್ಸಾಹ ನೀಡುವ ಕೆಲಸವಾಗಬೇಕು ಎಂದು ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಹೇಳಿದರು.

ತಾಲೂಕಿನ ಹರವಾಳ ಗ್ರಾಮದ ಶ್ರೀ ಗುರು ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಶಿವಗುರು ಸಿದ್ಧೇಶ್ವರ ಸಾಂಸ್ಕೃತಿಕ ಕಲಾ ಸಂಘದ ವತಿಯಿಂದ ಸಾಹಿತಿ ಮಲ್ಲಣ್ಣಗೌಡ ಶಿವರಾಯಗೌಡ ನಾಗರವತ್‌ ಹರವಾಳ ರಚಿಸಿದ ಚಪಲ ಕಾದಂಬರಿ, ಸಂತಿ ಸರದಾರ ನಾಟಕ ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ವಿನಮೃತೆಗೆ ಬಹಳ ಬೆಲೆ ಇದ್ದು, ಪ್ರತಿ ಸಾಹಿತಿಯಲ್ಲೂ ವಿನಮೃತೆ ಅತ್ಯವಶ್ಯಕ. ಸಾಹಿತ್ಯ ಓದಿನಿಂದ ಮಾತ್ರ ಮನಸ್ಸನ್ನು ಸಂಸ್ಕಾರಗೊಳಿಸಲು ಸಾಧ್ಯ. ಕಂಪ್ಯೂಟರ್‌ ಯುಗದಲ್ಲೂ ಮಲ್ಲನಗೌಡ ನಾಗರವತ್‌ ಅವರ ಕಾದಂಬರಿ, ನಾಟಕ ಪುಸ್ತಕ ಬಿಡುಗಡೆ ಮಾಡಿರುವುದು ಶ್ಲಾಘನೀಯ. ಹೊಸ ಕಾಲದಲ್ಲಿ ಪುಸ್ತಕದ ಸ್ವರೂಪ ಮತ್ತು ಅಸ್ತಿತ್ವ ತುಂಬಾ ಬೇರೆಯಾಗಿದೆ. ಕ್ಷಣಾರ್ಧದಲ್ಲಿ ನೂರಾರು ಪುಟಗಳ ಪುಸ್ತಕಗಳನ್ನು ಅಂತರ್‌ ಜಾಲದಲ್ಲಿ ಮುಳಿಗಿಸಿ ಬಿಡುವ ಈ ದಿನಗಳಲ್ಲಿ ಪುಸ್ತಕಗಳು ಉಳಿಯಬೇಕು ಎಂದರು.

ಜೀವನದಲ್ಲಿ ಅನುಭವಿಸಿ ಗ್ರಂಥ ರಚಿಸಿರುವ ಮಲ್ಲನಗೌಡ ಕನ್ನಡ ಸಾರಸ್ವತ ಲೋಕಕ್ಕೆ ತಮ್ಮದೇಯಾದ ಕೊಡುಗೆ ನೀಡಿದ್ದಾರೆ. ಸಂಗೀತ, ಸಾಹಿತ್ಯ ಕಲಾ ಸಂಘಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಅಗತ್ಯ ಅನುದಾನ ನೀಡಲಾಗುತ್ತಿದೆ. ಶ್ರೀ ಶಿವಗುರು ಸಿದ್ಧೇಶ್ವರ ಸಾಂಸ್ಕೃತಿಕ ಕಲಾ ಸಂಘಕ್ಕೆ ಸಹಾಯ, ಸಹಕಾರ ನೀಡುವ ಭರವಸೆ ನೀಡಿದರು.

ಸಾಹಿತಿ ಪ್ರೊ| ಶಿವರಾಜ ಪಾಟೀಲ ಮಾತನಾಡಿ, ಕ್ರಿಯಾಶೀಲತೆ ಮತ್ತು ಅಧ್ಯಯನ ಶೀಲತೆಯಿಂದ ಯಾವುದೇ ಕ್ಷೇತ್ರದಲ್ಲಿ ಪ್ರಾವಿಣ್ಯತೆ ಸಾಧಿ ಸಬಹುದು ಎಂದರು. ಲೇಖಕ ಮಲ್ಲಣ್ಣಗೌಡ ನಾಗರವತ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಅಧ್ಯಕ್ಷ ಲಕ್ಷ್ಮೀಕಾಂತ ನಾಗರಾವತ್‌ ನೇತೃತ್ವ, ಎಂ.ಬಿ.ಪಾಟೀಲ ಅಧ್ಯಕ್ಷತೆ ವಹಿಸಿದ್ದರು.

ರಾಜಶೇಖರ ಸೀರಿ, ಷಣ್ಮುಖಪ್ಪಗೌಡ ಹಿರೇಗೌಡ, ಶಿವಣಗೌಡ ಹಂಗರಗಿ, ಬಸವಕೇಂದ್ರ ಅಧ್ಯಕ್ಷ ಶರಣಬಸವ ಕಲ್ಲಾ, ಕಸಾಪ ಅಧ್ಯಕ್ಷ ಎಸ್‌. ಕೆ.ಬಿರಾದಾರ, ಹಣಮಂತ್ರಾಯ ಹೂಗಾರ, ಸಾಹಿತಿ ರವೀಂದ್ರ ಪಾಟೀಲ, ಪ್ರಭಾಕರ ರಬಶೆಟ್ಟಿ, ಗ್ರಾಪಂ ಅದ್ಯಕ್ಷ ಆಕಾಶ ಗಣಜಲಖೇಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಸತ್ಕರಿಸಲಾಯಿತು. ಸಂಜೆ ಮಲ್ಲಣ್ಣ ಶಿವರಾಯಗೌಡ ಹರವಾಳ ರಾಯಚೂರು ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮ ಜರುಗಿತು. ಲಕ್ಷ್ಮೀಕಾಂತ ನಾಗರವತ್‌ ಸ್ವಾಗತಿಸಿದರು, ಸಿದ್ಧಣ್ಣ ಕೊತಲಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.