‘ಬಾಗ್ಲು ತೆಗಿ ಮೇರಿ ಜಾನ್’ ಹಿಟ್: ತೋತಾಪುರಿ 100 ಮಿಲಿಯನ್ ಮೈಲಿಗಲ್ಲು
Team Udayavani, Mar 4, 2022, 11:08 AM IST
ನವರಸ ನಾಯಕ ಜಗ್ಗೇಶ್ ನಟನೆಯ “ತೋತಾಪುರಿ’ ಸಾಕಷ್ಟು ವಿಷಯಗಳಿಂದ ಸದ್ದು ಮಾಡುತ್ತಿದೆ. ಕರ್ನಾಟಕ ಸೇರಿದಂತೆ ದೇಶ-ವಿದೇಶಗಳಲ್ಲೂ ಈ ಸಿನಿಮಾದ ಹಾಡಿನ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇತ್ತೀಚೆಗೆ ಬಿಡುಗಡೆಯಾದ “ಬಾಗ್ಲು ತೆಗಿ ಮೇರಿ ಜಾನ್’ ಹಾಡು 100 ಮಿಲಿಯನ್ಗೂ ಅಧಿಕ ಹಿಟ್ ದಾಖಲಿಸಿ ಮುನ್ನುಗ್ಗುತ್ತಿದೆ.
“ಮೋನಿಫಿಕ್ಸ್ ಆಡಿಯೋಸ್’ ಯೂ ಟ್ಯೂಬ್ ಚಾನೆಲ್ನಲ್ಲಿ ಅಧಿಕೃತವಾಗಿ ಬಿಡುಗಡೆಯಾಗಿದ್ದು, ಈ ಹಾಡಿಗೆ ಪ್ರಸ್ತುತ ಚಾನೆಲ್ವೊಂದರಲ್ಲೇ 15 ಮಿಲಿಯನ್ಗೂ ಅಧಿಕ ಹಿಟ್ಸ್ ದಾಖಲಾಗಿದೆ.
ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ 85 ಮಿಲಿಯನ್ಗೂ ಅಧಿಕ ಹಿಟ್ಸ್ ದಾಖಲಾಗಿರುವುದು “ತೋತಾಪುರಿ’ ಹೆಚ್ಚುಗಾರಿಕೆ. ಇತ್ತೀಚೆಗೆ ಬಂದ ಹಾಡುಗಳ ಪೈಕಿ ದೊಡ್ಡ ಮಟ್ಟದಲ್ಲಿ ಜನರನ್ನು ಸೆಳೆದ ಹಾಡು ಇದಾಗಿದ್ದು, ದಿನದಿಂದ ದಿನಕ್ಕೆ ಕ್ರೇಜ್ ಹೆಚ್ಚಿಸುತ್ತಲೇ ಇದೆ. ಯೂ ಟ್ಯೂಬ್ ರೀಲ್ಸ್, ಶಾಟ್ಸ್ ಹಾಗೂ ಸ್ಟೋರಿಸ್ಗ ಳಲ್ಲಿ ಈ ಹಾಡಿನ ತುಣುಕಿಗ ಡಾನ್ಸ್ ಮಾಡಿ ಅಪ್ಲೋಡ್ ಮಾಡಿರುವುದು ವಿಶೇಷ. ವಿದೇಶದಲ್ಲಿ ನೆಲೆಸಿರುವ ಕನ್ನಡಿಗರಿಗೂ ಈ ಹಾಡು ಇಷ್ಟವಾಗಿರುವುದು “ತೋತಾಪುರಿ’ ಹಾಡಿನ ವಿಶೇಷ.
ಇದನ್ನೂ ಓದಿ:ಓಲ್ಡ್ ಮಾಂಕ್ ಸೇಫ್ ಗೇಮ್!
ನಿರ್ದೇಶಕ ವಿಜಯ ಪ್ರಸಾದ್ ಅವರೇ ಈ ಹಾಡಿಗೆ ಸಾಹಿತ್ಯ ರಚಿಸಿದ್ದು, ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿದ್ದಾರೆ. ಮೋಜೋ, ಇನ್ಸ್ಸ್ಟಾಗ್ರಾಮ್, ಯೂ ಟ್ಯೂಬ್ ರೀಲ್ಸ್ ಶೇರ್ ಚಾಟ್, ಮ್ಯಾಕ್ ಟಕಾ ಟಕ್ ಸೇರಿದಂತೆ ಹಲವಾರು ಆ್ಯಪ್ಗಳಲ್ಲಿ ಈ ಹಾಡಿನ ತುಣುಕುಗಳಿರುವ ವಿಡಿಯೋ ಸಖತ್ ಸದ್ದು ಮಾಡುತ್ತಿವೆ.
ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗಿರುವ ಮೊದಲ ಕನ್ನಡ ಕಾಮಿಡಿ ಸಿನಿಮಾ ಎಂಬುದು ಒಂದೆಡೆಯಾದರೆ, ಏಕಕಾಲದಲ್ಲಿ “ತೋತಾಪುರಿ’ ಸಿನಿಮಾ ಎರಡು ಭಾಗಗಳಾಗಿ ತಯಾರಾಗಿದೆ ಎಂಬುದು ಮತ್ತೂಂದು ವಿಶೇಷ.
ಕೆ.ಎ.ಸುರೇಶ್ ನಿರ್ಮಾಣವಿರುವ ಈ ಸಿನಿಮಾದ ಮೊದಲ ಭಾಗ ಸದ್ಯದಲ್ಲೇ ಬಿಡುಗಡೆಯಾಗಲಿದ್ದು, ನಂತರ ಮತ್ತೂಂದು ಭಾಗವನ್ನು ರಿಲೀಸ್ ಮಾಡಲಿದೆ ಚಿತ್ರತಂಡ. “ಡಾಲಿ’ ಧನಂಜಯ, ಅದಿತಿ ಪ್ರಭುದೇವ, ಸುಮನ್ ರಂಗನಾಥ್, ದತ್ತಣ್ಣ, ವೀಣಾ ಸುಂದರ್, ಹೇಮಾದತ್ ಮೊದಲಾದವರು ಚಿತ್ರದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ