ಕಲ್ಲಾಪು: ಮೀನು ಮಾರಾಟಗಾರನ ವಾಹನ ಅಡ್ಡಗಟ್ಟಿ, ತಲವಾರು ದಾಳಿ ನಡೆಸಿ 2 ಲಕ್ಷ ದರೋಡೆ
Team Udayavani, Mar 5, 2022, 12:46 PM IST
ಸಾಂದರ್ಭಿಕ ಚಿತ್ರ
ಉಳ್ಳಾಲ: ಕಲ್ಲಾಪು ಬಳಿ ಮೀನು ಮಾರಾಟ ನಡೆಸುತ್ತಿರುವ ವ್ಯಾಪಾರಿಯನ್ನು ತಡೆದ ಮೂವರು ಮುಸುಕುಧಾರಿ ತಂಡ ತಲವಾರಿನಿಂದ ಕಡಿದು ಟೆಂಪೋದಲ್ಲಿದ್ದ ರೂ. 2 ಲಕ್ಷ ದರೋಡೆ ನಡೆಸಿರುವ ಘಟನೆ ರಾ.ಹೆ.66 ರ ನೇತ್ರಾವತಿ ಸೇತುವೆ ಸಮೀಪ ಇಂದು ನಸುಕಿನ ಜಾವ ಸಂಭವಿಸಿದೆ.
ಉಳ್ಳಾಲ ಮುಕ್ಕಚ್ಚೇರಿ ಹೈದರಾಲಿ ರಸ್ತೆ ನಿವಾಸಿ ಮುಸ್ತಾಫ ದರೋಡೆಗೆ ಒಳಗಾದವರು. ರಾ.ಹೆ66 ರಕಲ್ಲಾಪು ಸಮೀಪ ಮೀನು ಮಾರಾಟ ನಡೆಸುತ್ತಿರುವ ಇವರು ಎಂದಿನಂತೆ ಮನೆಯಿಂದ ಧಕ್ಕೆಗೆ ಟೆಂಪೋ ಮೂಲಕ ಮೀನು ಖರೀದಿಸಲು ತೆರಳುತ್ತಿದ್ದರು. ಈ ವೇಳೆ ತೊಕ್ಕೊಟ್ಟು ಕಡೆಯಿಂದ ಕೆಂಪು ಬಣ್ಣದ ರಿಟ್ಝ್ ಕಾರಿನಲ್ಲಿ ತಂಡವೊಂದು ಟೆಂಪೋವನ್ನು ಹಿಂಬಾಲಿಸಿ ನೇತ್ರಾವತಿ ಸೇತುವೆ ಸಮೀಪ ಅಡ್ಡಗಟ್ಟಿದೆ.
ಬಳಿಕ ನಿರಂತರ ಹಾರ್ನ್ ಹಾಕುವುದನ್ನು ಪ್ರಶ್ನಿಸಲು ಮುಸ್ತಾಫ ಅವರು ಕೆಳಗಿಳಿಯುತ್ತಿದ್ದಂತೆ ಕಾರಿನಲ್ಲಿದ್ದ ಮೂವರಲ್ಲಿ ಇಬ್ಬರು ಮುಸುಕುಧಾರಿಗಳು ಇಳಿದು ತಲವಾರಿನಿಂದ ದಾಳಿ ನಡೆಸಿದ್ದಾರೆ.ಅಲ್ಲದೆ ಟೆಂಪೋ ಡ್ಯಾಷ್ ಬೋರ್ಡಿನಲ್ಲಿರಿಸಿದ್ದ ರೂ. 2 ಲಕ್ಷ ನಗದನ್ನು ಕಳವುಗೈದು ಪರಾರಿಯಾಗಿದ್ದಾರೆ. ಗಾಯಾಳು ಮುಸ್ತಾಫ ಅವರನ್ನು ಆಕ್ಟಿವಾ ಸ್ಕೂಟರಿನಲ್ಲಿದ್ದ ರಸ್ತೆ ಮೂಲಕ ತೆರಳುತ್ತಿದ್ದ ವ್ಯಕ್ತಿಯೋರ್ವರು ತಕ್ಷಣ ತೊಕ್ಕೊಟ್ಟು ನೇತಾಜಿ ಆಸ್ಪತ್ರೆ ಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಎಸಿಪಿ ದಿನಕರ್ ಶೆಟ್ಟಿ ನೇತೃತ್ಬದ ಪೊಲೀಸ್ ತಂಡ ತನಿಖೆ ಆರಂಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!
Swindon Borough ಕೌನ್ಸಿಲ್ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ
Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು
Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ