ಶ್ರೀನಗರದಲ್ಲಿ ಗ್ರೆನೇಡ್ ಎಸೆದು ಉಗ್ರರ ಅಟ್ಟಹಾಸ: ವೃದ್ಧ ಬಲಿ , 24 ಮಂದಿಗೆ ಗಾಯ
Team Udayavani, Mar 6, 2022, 6:21 PM IST
ಶ್ರೀನಗರ : ಇಲ್ಲಿನ ಹರಿ ಸಿಂಗ್ ಹೈ ಸ್ಟ್ರೀಟ್ ಪ್ರದೇಶದಲ್ಲಿ ಭಾನುವಾರ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗ್ರೆನೇಡ್ ಎಸೆದ ಪರಿಣಾಮ 75 ವರ್ಷದ ನಾಗರಿಕ ಸಾವನ್ನಪ್ಪಿದ್ದು, ಒಬ್ಬ ಪೊಲೀಸ್ ಸಿಬ್ಬಂದಿ ಸೇರಿದಂತೆ 24 ಜನರು ಗಾಯಗೊಂಡಿದ್ದಾರೆ.
“ಸಂಜೆ 4:20 ರ ಸುಮಾರಿಗೆ, ಹರಿ ಸಿಂಗ್ ಹೈ ಸ್ಟ್ರೀಟ್ನಲ್ಲಿ ಪೊಲೀಸ್ ಮತ್ತು ಭದ್ರತಾ ಪಡೆಗಳ ನಿಯೋಜನೆಯ ಮೇಲೆ ಭಯೋತ್ಪಾದಕರು ಗ್ರೆನೇಡ್ ಎಸೆದರು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾಯಾಳುಗಳನ್ನು ಇಲ್ಲಿನ ಶ್ರೀ ಮಹಾರಾಜ ಹರಿ ಸಿಂಗ್ (SMHS) ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಹೇಳಿದರು.
ಹೆಚ್ಚುವರಿ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದಿದ್ದು, ಅಪರಾಧಿಗಳನ್ನು ಹಿಡಿಯಲು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ