ಕೊಡವ ಸಂಸ್ಕೃತಿಗೆ ಅಪಚಾರ : ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಧಿಕ್ಕಾರದ ಘೋಷಣೆ
Team Udayavani, Mar 6, 2022, 7:40 PM IST
ಬೆಂಗಳೂರು: ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಧಿಕ್ಕಾರದ ಘೋಷಣೆ ಮೊಳಗಿಸಿದ ಘಟನೆ ನಡೆದಿದೆ.
ಚಾಮರಾಜಪೇಟೆ ಅಂಬರೀಶ್ ಚಿತ್ರಮಂದಿರದಲ್ಲಿ ಮಧ್ಯಾಹ್ನ ಕೊಡವ ಭಾಷೆಯ ದೇವರ ಕಾಡು ಪ್ರದರ್ಶನ ಮುಗಿದಾಗ, ಇದು ಕೊಡವ ಸಂಸ್ಕೃತಿಗೆ ಅಪಚಾರ ಮಾಡುವ ಸಿನಿಮಾ ಎಂದು ಪ್ರಕಾಶ್ ಕಾರ್ಯಪ್ಪ ಆಕ್ರೋಶ ವ್ಯಕ್ತಪಡಿಸಿ, ಧಿಕ್ಕಾರದ ಘೋಷಣೆ ಕೂಗಿದರು.
ಸಿನೆಮಾ ಶೀರ್ಷಿಕೆಗೂ ಇದಕ್ಕೂ ಸಂಬಂಧವೇ ಇಲ್ಲ. ಕೊಡಗಿನ ಆಚಾರ ವಿಚಾರಗಳು ಉತ್ಕೃಷ್ಟವಾಗಿದ್ದು, ಅದನ್ನು ತಳಮಟ್ಟಕ್ಕೆ ಇಳಿಸಿ ಚಿತ್ರೀಕರಣ ಮಾಡಿರುವುದು ಕೊಡವರಿಗೆ ಮಾಡಿದ ಅಪಮಾನ. ಈ ಸಿನೆಮಾ ಅಂತಾರಾಷ್ಟ್ರೀಯ ಚಿತ್ರೋತ್ಸವ ತನಕ ಹೇಗೆ ಬಂತು? ಯಾರು ಆಯ್ಕೆ ಮಾಡಿದರು ಎಂದು ನಿರ್ದೇಕರು, ಕಲಾವಿದರ ಸಮ್ಮುಖದಲ್ಲಿ ಪ್ರಶ್ನಿಸಿದರು.
ಇದೊಂದು ಆರ್ಟ್ ಸಿನಿಮಾ. ಆ ದೃಷ್ಟಿಯಿಂದ ನೋಡಿ ಎಂದು ನಿರ್ದೇಶಕರು ಮನವಿ ಮಾಡಿದರೂ, ಅವರ ಆಕ್ರೋಶ ತಣಿಯಲಿಲ್ಲ.
ಇದನ್ನೂ ಓದಿ :20 ಕೋಟಿ ಖರ್ಚು: ಕನ್ನಡ ಶಾಲೆಗಳು ಪುನಶ್ಚೇತನವಾಗಲಿ;ಸರಕಾರಕ್ಕೆ ಅರಳಿ ನಾಗರಾಜ್
ಕೊಡವರಿಗೆ ಮತ್ತು ಕೊಡವ ಸಂಸ್ಕೃತಿಗೆ ತದ್ವಿರುದ್ಧವಾಗಿರುವ ಸಿನಿಮಾ ತೆಗೆದು ಕೊಡವರ ಗೌರವ ಕಳೆಯಬೇಡಿ ಎಂದು ಮನವಿ ಮಾಡಿದರು.
ವಿಚಾರ ವಾಗ್ವಾದ ರೂಪ ಪಡೆದ ಹಿನ್ನೆಲೆಯಲ್ಲಿ ಸಂವಾದಕ್ಕೆ ತೆರೆ ಎಳೆಯಲಾಯಿತು.
ಚಿತ್ರೋತ್ಸವದಲ್ಲಿ ಧಿಕ್ಕಾರ ಕೂಗಿದ್ದು ಬೇಸರವಾಗಿದೆ ಎಂದು ಚಿತ್ರದ ಹಿರಿಯ ಕಲಾವಿದೆ ಅಸಮಾಧಾನ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rachana inder: ಮರ್ಡರ್ ಮಿಸ್ಟರಿ 4 ಎನ್ 6
Sandalwood: ರಿಲಯನ್ಸ್ ತೆಕ್ಕೆಗೆ ʼಜಡ್ಜ್ ಮೆಂಟ್ʼ
Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ
ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ
Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್ʼ
MUST WATCH
ಹೊಸ ಸೇರ್ಪಡೆ
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
IPL 2024; ಲಕ್ನೋ, ಹೈದ್ರಾಬಾದ್ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ
ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ
ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ