ತಾಂಡಾಗಳ ಅಭಿವೃದ್ಧಿಗೆ ಅಗತ್ಯ ಕ್ರಮ: ಪಿ.ರಾಜೀವ

ಬಂಜಾರ ಸಮಾಜದ ಅಭಿವೃದ್ಧಿಗಾಗಿ ಈಗಾಗಲೇ ಹಲವಾರು ಯೋಜನೆ ಮಾಡಲಾಗಿದೆ.

Team Udayavani, Mar 7, 2022, 6:14 PM IST

ತಾಂಡಾಗಳ ಅಭಿವೃದ್ಧಿಗೆ ಅಗತ್ಯ ಕ್ರಮ: ಪಿ.ರಾಜೀವ

ಬೀಳಗಿ: ತಾಂಡಾಗಳಲ್ಲಿ ವಾಸಿಸುವ ಲಂಬಾನಿ ಜನಾಂಗ ನಿತ್ಯಕಾಯಕ ಜೀವಿಗಳು ಇತರರ ಏಳಿಗೆಯ ಜತೆಗೆ ತಮ್ಮ ಹಿತ ಕಾಯ್ದುಕೊಳ್ಳುವ ಸ್ವಾಭಿಮಾನಿ ಸಮಾಜದವರುತಮ್ಮ ಬದುಕಿಗಾಗಿ ಸಮಾಜದ ಅಭಿವೃದ್ಧಿಗಾಗಿ ಹೊರರಾಜ್ಯಕ್ಕೆ ದುಡಿಯಲು ಸಾಗುವ ಜನರು ಅಂತಹ ಸಮಾಜದ ತಾಂಡಾಗಳ ಅಭಿವೃದ್ಧಿಗೆ ಸರ್ಕಾರ ಅಗತ್ಯ ತಗೆದುಕೊಂಡಿದೆ ಎಂದು ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಪಿ.ರಾಜೀವ ಹೇಳಿದರು.

ಇಲ್ಲಿನ ಸುನಗ ತಾಂಡಾ ನಂ.1 ರಲ್ಲಿ ತಾಂಡಾ ಅಭಿವೃದ್ಧಿ ನಿಗಮದಿಂದ ಹಮ್ಮಿಕೊಂಡಿದ್ದ ಮಂಜೂರಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಹಾಗೂ ಸಂತ ಸೇವಾಲಾಲರ 283ನೇ ಜಯಂತಿ ಉತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ತಾಂಡಾಗಳಲ್ಲಿ ವಾಸಿಸುವ ಜನರು ಪರೋಪಕಾರಿಯಾಗಿ ಇತರರ ಕಾಳಜಿ ಹೊಂದಿದವರು. ಬಂಜಾರ ಸಮಾಜದವರು ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗುತ್ತಿದ್ದಾರೆ. ಅಂತಹ ಸಮಾಜವನ್ನು ಎಲ್ಲ ರಂಗದಲ್ಲೂ ಮುಂದೆ ಬರುವಂತೆ ಮಾಡುವ ಕೆಲಸವು ಇಂದಿನ ದಿನಗಳಲ್ಲಿ ನಡೆಯುತ್ತಿದೆ. ತಾಂಡಾಗಳ ಅಭಿವೃದ್ಧಿಯಾಗಬೇಕು.

ಆರೋಗ್ಯ, ಶಿಕ್ಷಣ, ನೀರಾವರಿ, ಅಗತ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಹಲವಾರು ಯೋಜನೆ ರೂಪಿಸಲಾಗಿದೆ. ಈಗಾಗಲೇ ಬೀಳಗಿ ಮತಕ್ಷೇತ್ರದ ತಾಂಡಾಗಳ ಅಭಿವೃದ್ಧಿ 4 ಕೋಟಿ ರೂ. ಮಂಜೂರು ಮಾಡಲಾಗಿದ್ದು, ತಾಂಡಾಗಳಲ್ಲಿ ಅಗತ್ಯ ಸಮಸ್ಯೆಗಳ ಕೆಲಸಗಳು ಆಗಲಿವೆ ಎಂದರು.ಸಚಿವ ಮುರುಗೇಶ ನಿರಾಣಿ ಅವರು ಬಂಜಾರ ಸಮಾಜದ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸ ನೋಡಿದರೆ ಸಮಾಜ ಅಭಿವೃದ್ಧಿಗೆ ಇವರ ಕೊಡುಗೆ ಅಪಾರವಾಗಿದೆ ಎಂದರು.

ಕಲಬುರ್ಗಿ ಸಂಸದ ಉಮೇಶ ಜಾಧವ ಮಾತನಾಡಿ, ಶತಮಾನಗಳಿಂದ ಯಾವುದೇ ರೀತಿಯ ಅಭಿವೃದ್ಧಿ ಕಾಣದೆ ಸದಾ ಸೇವಕರಂತೆ ಕೆಲಸ ಮಾಡುತ್ತಿದ್ದ ಬಂಜಾರ ಸಮುದಾಯ ಇಂದು ಅಭಿವೃದ್ಧಿ ಮಾರ್ಗದತ್ತ ಸಾಗುತಿದೆ. ದೆಹಲಿಯಲ್ಲಿ ಸಂತ ಸೇವಾಲಾಲರ ಜಯಂತಿ ಆಚರಣೆ ಮಾಡಬೇಕು ಎನ್ನುವ ಕನಸನ್ನು ಪ್ರಧಾನಿ ಮೋದಿಯವರು ಈಡೇರಿಸಿ ದೆಹಲಿಯಲ್ಲಿ ಜಯಂತಿ ಆಚರಣೆ ಮಾಡಲಾಯಿತು.

ದೆಹಲಿಯಲ್ಲಿ ಬಂಜಾರ ಸಮುದಾಯ ಭವನ ನಿರ್ಮಾಣ ಮಾಡುವ ಗುರಿ ಹೊಂದಿದ್ದು, ಈಗಾಗಲೇ ಮಾತುಕತೆ ನಡೆದಿದೆ ಎಂದರು. ಸಚಿವ ಮುರುಗೇಶ ನಿರಾಣಿ ಮಾತನಾಡಿ,  ಬಂಜಾರ ಸಮಾಜದ ಅಭಿವೃದ್ಧಿಗಾಗಿ ಈಗಾಗಲೇ ಹಲವಾರು ಯೋಜನೆ ಮಾಡಲಾಗಿದೆ. ತಾಂಡಾಗಳ ಅಭಿವೃದ್ಧಿಗಾಗಿ ಒಟ್ಟು 8 ಕೋಟಿ ರೂ. ಜತೆಗೆ ಕುಡಿವ ನೀರು, ವಿವಿಧ ಸೌಲಭ್ಯಕ್ಕಾಗಿ 10 ಕೋಟಿ ರೂ. ಮಂಜೂರು ಮಾಡಲಾಗಿದ್ದು, ಕಾಮಗಾರಿಗಳು ಆರಂಭವಾಗಲಿವೆ ಎಂದು ತಿಳಿಸಿದರು.

ನೀಲಾ ನಗರದ ಶಕ್ತಿಪೀಠದ ಕುಮಾರ ಮಹಾರಾಜರು, ಕೇಸರಟ್ಟಿಮಠ ಸೋಮಲಿಂಗ ಸ್ವಾಮೀಜಿ, ವಿಧಾನ ಪರಿಷತ್‌ ಸದಸ್ಯ ಹಣಮಂತ ನಿರಾಣಿ, ಪಿ.ಎಚ್‌. ಪೂಜಾರ, ಹೂವಪ್ಪ ರಾಠೊಡ, ಕಾವೇರಿ ರಾಠೊಡ, ಸಂಗಪ್ಪ ಕಟಗೇರಿ, ಹೊಳೆಬಸು ಬಾಳಾಶೆಟ್ಟಿ, ಜಗತ್ತ ಕಣವಿ, ಈರಣ್ಣ ತೋಟದ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.