ಮಹಿಳಾ ದಿನಾಚರಣೆಯ ವಿಶೇಷ : ಬಹುಮುಖ ಪ್ರತಿಭೆಯ ಕಲಾವಿದೆ ಚಿಮ್ಮಡದ ಸುಂದ್ರವ್ವ ಮೇತ್ರಿ

ಪಾರಿಜಾತದ ಜೊತೆಗೆ ಚೌಡಕಿ ಪದಗಳ ಕಲಾವಿದೆ

Team Udayavani, Mar 8, 2022, 1:32 PM IST

ಮಹಿಳಾ ದಿನಾಚರಣೆಯ ವಿಶೇಷ : ಬಹುಮುಖ ಪ್ರತಿಭೆಯ ಕಲಾವಿದೆ ಚಿಮ್ಮಡದ ಸುಂದ್ರವ್ವ ಮೇತ್ರಿ

ರಬಕವಿ-ಬನಹಟ್ಟಿ: ಉತ್ತರ ಕರ್ನಾಟಕದ ವಿಶೇಷತೆಗಳಲ್ಲಿ ಬಯಲಾಟ ಅತ್ಯಂತ ಪ್ರಸಿದ್ಧವಾದುದು. ಅದರಲ್ಲೂ ಈ ಭಾಗದ ಪ್ರತಿಯೊಂದು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಶ್ರೀಕೃಷ್ಣ ಪಾರಿಜಾತ ಕಂಪನಿಯೊಂದು ಇರಲೇಬೇಕು.

ಬೆಳಗಾವಿಯಲ್ಲಿ ಶ್ರೀಕೃಷ್ಣ ಪಾರಿಜಾತ ಹುಟ್ಟಿದರೆ, ನಂತರ ಅದು ಬೆಳೆದು ಹೆಮ್ಮರವಾದುದು ವಿಜಯಪುರ ಬಾಗಲಕೋಟೆ ಜಿಲ್ಲೆಯಲ್ಲಿ. ಈ ಭಾಗದ ನನದಿ ರಾಮಯ್ಯ ರಾಚಯ್ಯ ಬರಗಿಯವರು, ಅಪ್ಪಾಲಾಲ ನದಾಫ್, ವಿಠ್ಠಲರಾವ ಟಕ್ಕಳಕಿ, ಹಿಡಕಲ್ ಭೀಮಪ್ಪ, ಮಲ್ಲಯ್ಯಸ್ವಾಮಿ ಅಥಣಿ, ಮಹಾದೇವಿ ಅಥಣಿ, ಚಂದ್ರವ್ವ ಗುಡ್ಲಮನಿ, ಲೋಕಾಪುರದ ದೇಶಪಾಂಡೆಯವರು, ನಿಂಗನೂರೆ ಹೆಳವಪ್ಪ, ಸವದಿಯ ಮಲ್ಲಯ್ಯ ಸೇರಿದಂತೆ ಹತ್ತಾರು ಜನರು ಈ ಕಲೆಯನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಉತ್ತುಂಗಕ್ಕೆ ಏರಿಸಿದ್ದಾರೆ.

ಈ ಸಾಲಿನಲ್ಲಿ ನಿಲ್ಲಬಹುದಾದ ಮತ್ತೊಬ್ಬ ಮಹಿಳಾ ಕಲಾವಿದೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದ ಸುಂದ್ರವ್ವ ಕಲ್ಲಪ್ಪ ಮೇತ್ರಿ ಕೂಡಾ ಒಬ್ಬರು. ಐವತ್ತೈದು ವರ್ಷ ಆಸುಪಾಸಿನ ಸುಂದ್ರವ್ವ ಎಲೆ ಮರೆಯ ಕಾಯಿಯಂತೆ ಈ ಕಲಾ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ತಮ್ಮ ಹತ್ತನೆಯ ವಯಸ್ಸಿನಲ್ಲಿಯೇ ಪಾರಿಜಾತವನ್ನು ಚಿಮ್ಮಡ ಗ್ರಾಮದ ಪಾರಿಜಾತ ಮಾಸ್ತರರಾದ ದುಂಡಪ್ಪ ಸುಣಧೋಳಿ ಅವರಿಂದ ಕಲಿತರು. ನಂತರ ತಮ್ಮ ಹದಿನೈದ ವಯಸ್ಸಿನಲ್ಲಿ ಕಲೆಯನ್ನು ಪ್ರದರ್ಶನ ಮಾಡಲು ಆರಂಭಿಸಿದ ಸುಂದ್ರವ್ವ ನಾಲ್ಕು ದಶಕಗಳಿಂದ ನಿರಂತರವಾಗಿ ಶ್ರೀ ಕೃಷ್ಣ ಪಾರಿಜಾತ ಕಲೆಯನ್ನು ಪ್ರದರ್ಶನ ಮಾಡುತ್ತ ಬಂದಿದ್ದಾರೆ. ಶ್ರೀಕೃಷ್ಣ ಪಾರಿಜಾತದ ಗೊಲ್ಲತಿ, ರುಕ್ಮಿಣಿ, ಸತ್ಯಭಾಮಾ, ನಾರದ ಪಾತ್ರಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಗಮನ ಸೆಳೆದವರು.

ಶ್ರೀಕೃಷ್ಣ ಪಾರಿಜಾತವೇ ಅವರಿಗೆ ಎರಡು ಹೊತ್ತಿನ ಊಟಕ್ಕೆ ಆಸರೆಯಾಗಿದೆ. ಮೊದಲು ತಿಂಗಳಿಗೆ ಹದಿನೈದರಿಂದ ಇಪ್ಪತ್ತು ಪಾರಿಜಾತಗಳು ನಡೆಯುತ್ತಿದ್ದವು. ಆಗ ಪ್ರತಿ ಆಟಕ್ಕೆ ರೂ.150 ರಿಂದ 200 ಕೊಡುತ್ತಿದ್ದರು. ದೂರದ ಊರುಗಳಿಗೆ ಹೋದರೆ ಸ್ವಲ್ಪ ಹೆಚ್ಚಿಗೆ ಸಂಭಾವನೆಯನ್ನು ಕೊಡುತ್ತಿದ್ದರು. ಆದರೆ ಈಗ ಪಾರಿಜಾತದ ಪ್ರದರ್ಶನಗಳೇ ಕಡಿಮೆಯಾಗಿವೆ. ಈಗ ಒಂದು ಪ್ರದರ್ಶನಕ್ಕೆ ರೂ.800 ನೀಡುತ್ತಾರೆ ಎನ್ನುತ್ತಾರೆ ಸುಂದ್ರವ್ವ.

ದಾದನಟ್ಟಿ ಕಾಶಿಬಾಯಿಯವರ ಕಂಪನಿಯಲ್ಲಿ ಎರಡು ದಶಕಗಳ ಕಾಲ, ಅದೇ ರೀತಿಯಾಗಿ ಮಲ್ಲಯ್ಯಸ್ವಾಮಿ ಹಾಗೂ ಮಹಾದೇವಿ ಅಥಣಿ ಕಂಪನಿಯಲ್ಲೂ ಕೂಡಾ ಪಾರಿಜಾತ ಕಲೆಯನ್ನು ಪ್ರದರ್ಶನ ಮಾಡಿದ್ದಾರೆ.

ಇದನ್ನೂ ಓದಿ : ಮಹಿಳಾ ದಿನಾಚರಣೆ ವಿಶೇಷ: ಸಾವಯವ ಕೃಷಿ ಸಾಧಕಿ ಲಕ್ಷ್ಮೀ ಶಿರಮಗೊಂಡ

ಬೆಂಗಳೂರು, ದಾವಣಗೇರಿ, ಧಾರವಾಡ, ಹುಬ್ಬಳ್ಳಿ, ಬೆಳಗಾವಿ, ಬೀದರ, ಕಲಬುರಗಿ, ಕರ್ನಾಟಕ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಹಾಗೂ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಪ್ರತಿಯೊಂದು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ತಮ್ಮ ಪಾರಿಜಾತ ಕಲೆಯನ್ನು ಪ್ರದರ್ಶನ ಮಾಡಿದ್ದಾರೆ. ಧಾರವಾಡ ಆಕಾಶವಾಣಿ ಕೇಂದ್ರವೂ ಕೂಡಾ ಇವರ ಪ್ರದರ್ಶನವನ್ನು ಪ್ರಸಾರ ಮಾಡಿದೆ.

ಇದುವರೆಗೆ ಐದಾರು ಸಾವಿರ ಪ್ರದರ್ಶನ ಮಾಡಿರುವ ಸುಂದ್ರವ್ವ ಶಾಲೆಯ ಕಟ್ಟೆಯನ್ನು ಹತ್ತಿದವರಲ್ಲ. ಆದರೂ ಅವರು ಪಾರಿಜಾತದ ಎಲ್ಲ ಪಾತ್ರಗಳ ಸಂಭಾಷಣೆಯನ್ನು ಸಲೀಸಲಾಗಿ ಹೇಳುತ್ತಾರೆ.

ಸಾಹೇಬ್ರ ಇದು ಶ್ರೀಕೃಷ್ಣ ಪರಮಾತ್ಮನ ಆಟರಿ, ಅವನ ಎಲ್ಲಾ ನುಡಸ್ತಾನ್ರಿ ಮತ್ತು ಆಡಸತಾನರಿ ಎನ್ನುತ್ತಾರೆ ಸುಂದ್ರವ್ವ. ಪಾರಿಜಾತದ ಜೊತೆಗೆ ಸುಂದ್ರವ್ವ ಚೌಡಕಿ ಪದಗಳ ಕಲಾವಿದೆಯೂ ಹೌದು. ಇದನ್ನು ಸುತ್ತ ಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ದೇವರ ಸೇವೆಯ ಸಂದರ್ಭದಲ್ಲಿ ಮಾತ್ರ ಪ್ರದರ್ಶನ ಮಾಡುತ್ತಾರೆ.

ಇವರ ಸೇವೆಯನ್ನು ಗಮನಿಸಿದ ಬಾಗಲಕೋಟೆಯ ಬಸವೇಶ್ವರ ಕಲಾ ಮಹಾವಿದ್ಯಾಲಯ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದೆ. ಅದೇ ರೀತಿಯಾಗಿ 2017-18 ರಲ್ಲಿ ಬಾಗಲಕೋಟೆ ಜಿಲ್ಲೆಯ ಬಯಲಾಟ ಅಕಾಡೆಮಿ ಪ್ರಶಸ್ತಿಗೆ ಅವರು ಭಾಜನರಾಗಿದ್ದಾರೆ. ಅದೇ ರೀತಿಯಾಗಿ ಅನೇಕ ಸಂಘ ಸಂಸ್ಥೆಗಳು ಅವರನ್ನು ಸನ್ಮಾನಿಸಿ ಗೌರವಿಸಿವೆ. ಕರ್ನಾಟಕ ಸರ್ಕಾರ ಕಲಾವಿದರೆಗೆ ನೀಡುವ ಪಿಂಚಣಿ ಅವರಿಗೆ ಮತ್ತಷ್ಟು ಆಸರೆಯನ್ನು ನೀಡಿದೆ.

ಈಗಲೂ ಸುಂದ್ರವ್ವ ಮೇತ್ರಿಯವರ ಕಾಲುಗಳಲ್ಲಿಯ ಮತ್ತು ಧ್ವನಿಯಲ್ಲಿಯ ಶಕ್ತಿ ಇನ್ನೂ ಕಡಿಮೆಯಾಗಿಲ್ಲ. ಈಗಲೂ ಅವರು ತಮ್ಮ ಸೇವೆಯನ್ನು ಮುಂದುವರೆಸಿದ್ದಾರೆ. ನಾಲ್ಕು ದಶಕಗಳಿಂದ ಶ್ರೀಕೃಷ್ಣ ಪಾರಿಜಾತ ಪಾರಿಜಾತ ಕಲೆಯನ್ನು ಉಳಿಸಿ ಬೆಳೆಸುತ್ತಿರುವ ಸುಂದ್ರವ್ವ ಮೇತ್ರಿಯವರಿಗೆ ಇನ್ನಷ್ಟು ಪ್ರಶಸ್ತಿಗಳು ದೊರೆಯಲಿ ಎಂಬುದು ನಮ್ಮೆಲ್ಲರ ಶುಭ ಹಾರೈಕೆ.

– ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.