ಕಿತ್ತೂರು ಕೋಟೆ-ಅರಮನೆ ವೀಕ್ಷಿಸಿದ ರಾಜ್ಯಪಾಲ

ವಿವಿಧ ಮಠಾಧಿಧೀಶರು ರಾಜ್ಯಪಾಲರಿಗೆ ರಾಣಿ ಚನ್ನಮ್ಮಾಜಿ ಪ್ರತಿಮೆ ನೀಡಿ ಸನ್ಮಾನಿಸಿದರು.

Team Udayavani, Mar 9, 2022, 5:47 PM IST

ಕಿತ್ತೂರು ಕೋಟೆ-ಅರಮನೆ ವೀಕ್ಷಿಸಿದ ರಾಜ್ಯಪಾಲ

ಚನ್ನಮ್ಮನ ಕಿತ್ತೂರ: ಇಲ್ಲಿಯ ಐತಿಹಾಸಿಕ ರಾಣಿ ಚನ್ನಮ್ಮಾಜಿಯ ಕೋಟೆ ಆವರಣ, ಅರಮನೆ ಮತ್ತು ರಾಣಿ ಚನ್ನಮ್ಮಾಜಿ ಸ್ಮಾರಕ ಸರಕಾರಿ ವಸ್ತು ಸಂಗ್ರಹಾಲಯಕ್ಕೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಭೇಟಿ ನೀಡಿ ಕಿತ್ತೂರಿನ ಇತಿಹಾಸವನ್ನು ತಿಳಿದುಕೊಂಡರು.

ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಅವರಿಗೆ ಹಿರಿಯ ಅ ಧಿಕಾರಿಗಳು ಮತ್ತು ಸ್ಥಳೀಯ ಶಾಸಕ ಮಹಾಂತೇಶ ದೊಡಗೌಡರ ಸಾಥ್‌ ನೀಡಿದರು. ಅರಮನೆಗೆ ಭೇಟಿ ನೀಡಿದ ಅವರು, ದರ್ಬಾರ್‌ ಹಾಲ್‌, ಬತೇರಿ, ಅರಮನೆಯ ಮುಖ್ಯದ್ವಾರ, ಅತಿಥಿ ಕೋಣೆಗಳು, ಸಭಾಗೃಹ, ಭೋಜನಾಲಯ, ಪೂಜಾ ಕೊಠಡಿ, ಬಾವಿಗಳು, ಸ್ನಾನದ ಮನೆ ವೀಕ್ಷಿಸಿ ಮಾಹಿತಿ ಪಡೆದುಕೊಂಡರು. ನಂತರ ಕಿತ್ತೂರು ರಾಣಿ ಚೆನ್ನಮ್ಮ ಸ್ಮಾರಕ ಸರ್ಕಾರಿ ವಸ್ತುಸಂಗ್ರಹಾಲಯಕ್ಕೆ
ಭೇಟಿ ನೀಡಿ ಕಿತ್ತೂರು ಸಂಸ್ಥಾನಕ್ಕೆ ಸಂಬಂಧಿಸಿದ ಶಸ್ತ್ರಾಸ್ತ್ರಗಳು, ಕತ್ತಿಗಳು, ಕೋಟ್‌, ಗುರಾಣಿ, ಕೆತ್ತಿದ ಮರದ ಬಾಗಿಲುಗಳು ಮತ್ತು ಕಿತ್ತೂರು ಅರಮನೆಯ ಕಿಟಕಿಗಳು, ಶಾಸನಗಳನ್ನು ಮತ್ತು ಪ್ರಾಚೀನ ವಸ್ತುಗಳ ಸಂಗ್ರಹವನ್ನು ವೀಕ್ಷಿಸಿದರು.

ಇದಕ್ಕೂ ಮೊದಲು ರಾಷ್ಟ್ರೀಯ ಹೆದ್ದಾರಿ ಪಕ್ಕದ ರಾಣಿ ಚನ್ನಮ್ಮಾಜಿ ಪ್ರತಿಮೆಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌, ಶಾಸಕ ಮಹಾಂತೇಶ ದೊಡಗೌಡರ ಮಾಲಾರ್ಪನೆ ಮಾಡಿ ಗೌರವ ಸಲ್ಲಿಸಿದರು.

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದಿಂದ ಕೈಗೊಳ್ಳಲು ಉದ್ದೇಶಿಸಿರುವ ಅರಮನೆ ಮರು ನಿರ್ಮಾಣ ಯೋಜನೆಯ ನೀಲನಕ್ಷೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ವಿಕ್ಷಿಸಿದರು. ಶಾಸಕ ಮಹಾಂತೇಶ ದೊಡಗೌಡರ, ವಿವಿಧ ಮಠಾಧಿಧೀಶರು ರಾಜ್ಯಪಾಲರಿಗೆ ರಾಣಿ ಚನ್ನಮ್ಮಾಜಿ ಪ್ರತಿಮೆ ನೀಡಿ ಸನ್ಮಾನಿಸಿದರು.

ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ನಿಚ್ಚಣಕಿ ಶ್ರೀಗುರು ಮಡಿವಾಳೇಶ್ವರ ಮಠದ ಪಂಚಾಕ್ಷರಿ ಸ್ವಾಮೀಜಿ, ಶಾಸಕ ಮಹಾಂತೇಶ ದೊಡಗೌಡರ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಉಳವಪ್ಪ ಉಳ್ಳಾಗಡ್ಡಿ, ಬಸನಗೌಡ ಸಿದ್ರಾಮನಿ, ಕಿರಣ ಪಾಟೀಲ, ಉಪವಿಭಾಗಾಧಿಕಾರಿ ಶಶಿಧರ ಬಗಲಿ, ತಹಶೀಲ್ದಾರ್‌ ಸೋಮಲಿಂಗಪ್ಪ ಹಾಲಗಿ, ತಾಪಂ ಇಓ ಸುಭಾಸ ಸಂಪಗಾಂವಿ, ಸಿಪಿಐ ಮಹಾಂತೇಶ ಹೊಸಪೇಟ್‌, ಲೋಕೋಪಯೋಗಿ ಅಭಿಯಂತರ ಪ್ರವೀಣ ಹುಲಜಿ, ವಸ್ತು ಸಂಗ್ರಹಾ ಲಯದ ಕ್ಯೂರೇಟರ್‌ ರಾಘವೇಂದ್ರ, ಪಪಂ ಮುಖ್ಯಾ ಧಿಕಾರಿ ಪ್ರಕಾಶ ಮಠದ, ವಿವಿಧ ಇಲಾಖೆ ಅಧಿ ಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ರಾಜ್ಯಪಾಲರು ಮಾತನಾಡಿ, ಮಹಿಳಾ ದಿನದಂದು ಕಿತ್ತೂರಿಗೆ ಆಗಮಿಸಿರುವದು ಬಹಳ ಸಂತೋಷ ತಂದಿದೆ. ರಾಣಿ ಚನ್ನಮ್ಮಾಜಿ ಕರ್ಮಭೂಮಿಗೆ ಭೇಟಿ ನೀಡುವ ಉದ್ದೇಶವಿತ್ತು. ಅದು ಈಗ ಸಾಧ್ಯವಾಯಿತು. ದೇಶದ ಸ್ವಾತಂತ್ರ್ಯದ ಕಿಡಿ ಹಚ್ಚಿ ಜನರಲ್ಲಿ ಜಾಗೃತಿ ಮೂಡಿಸಿದ ವೀರ ಮಹಿಳೆ ರಾಣಿ ಚನ್ನಮ್ಮಾಜಿ, ಝಾನ್ಸಿ ರಾಣಿ ಲಕ್ಷ್ಮೀಬಾಯಿ ಸೇರಿದಂತೆ ಅನೇಕ ಮಹನೀಯರು ಹೋರಾಟ ಮಾಡಿದರು.ಅವರ ತ್ಯಾಗ-ಬಲಿದಾನ-ಸಂಘರ್ಷದಿಂದ ಸ್ವಾತಂತ್ರ್ಯ ದೊರೆಯಿತು. ದೇಶಕ್ಕೆ ಸ್ವಾತಂತ್ರ್ಯ ತರುವಲ್ಲಿ ಮಹಿಳೆಯರ ಪಾತ್ರ ಬಹು ಮುಖ್ಯವಾಗಿದೆ. ನಮ್ಮ ದೇಶದ ಸ್ವಾತಂತ್ರ್ಯ ಮತ್ತಷ್ಟು ಗಟ್ಟಿಗೊಳ್ಳಲಿ ಎಂದು ಹಾರೈಸಿದರು

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.