ಕೊಡಗಿನ ಮೃತ ಯೋಧ ಅಲ್ತಾಪ್ ಕುಟುಂಬಕ್ಕೆ ಶೀಘ್ರ ಪರಿಹಾರ
Team Udayavani, Mar 11, 2022, 10:30 PM IST
ವಿಧಾನಸಭೆ : ಕಾಶ್ಮೀರದಲ್ಲಿ ಹುತಾತ್ಮನಾದ ಕೊಡಗಿನ ಯೋಧ ಅಲ್ತಾಪ್ ಅವರ ಕುಟುಂಬಕ್ಕೆ ಗೃಹ ಸಚಿವರೊಂದಿಗೆ ಚರ್ಚಿಸಿ ಶೀಘ್ರ ಪರಿಹಾರ ನೀಡಲಾಗುವುದು ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.
ವಿಧಾನಸಭೆ ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್, ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ ರಾಜ್ಯ ಸರ್ಕಾರ ಹುತಾತ್ಮರ ವಿಷಯದಲ್ಲಿಯೂ ತಾರತಮ್ಯ ಮಾಡುತ್ತಿದೆ. ಕೊಡಗಿನ ಯೋಧ ಅಲ್ತಾಪ್ ಕಾಶ್ಮೀರದಲ್ಲಿ ಹುತಾತ್ಮನಾಗಿದ್ದು, ಒಂದು ವರ್ಷವಾದರೂ ಅವರ ಕುಟುಂಬಕ್ಕೆ ಪರಿಹಾರ ನೀಡಿಲ್ಲ. ಕೊಲೆಯಾದವರಿಗೆ ತಕ್ಷಣ ಪರಿಹಾರ ನೀಡಲಾಗುತ್ತಿದೆ. ಯೋಧರಿಗೆ ಪರಿಹಾರ ನೀಡದಿರುವುದು ತಾರತಮ್ಯ ಮಾಡಿದಂತಾಗಿದೆ. ಸರ್ಕಾರ ಸಾವಿನಲ್ಲಿ ತಾರತಮ್ಯ ಮಾಡುವುದು ಸರಿಯಲ್ಲ ಎಂದು ಹೇಳೀದರು.
ಇದನ್ನೂ ಓದಿ:ಪಂಜಾಬಿನಲ್ಲಿ ಸಿಧು ಮತ್ತು ಚನ್ನಿ, ರಾಜ್ಯದಲ್ಲಿ…: ಕಾಂಗ್ರೆಸ್ ಗೆ ಬಿಜೆಪಿ ಟ್ವೀಟ್ ಅಸ್ತ್ರ
ಅವರ ಪ್ರಶ್ನೆಗೆ ಉತ್ತರ ನೀಡಿದ ಕಾನೂನು ಸಚಿವ ಮಾಧುಸ್ವಾಮಿ, ಮೃತ ಯೋಧರ ಕುಟುಂಬಕ್ಕೆ ಪರಿಹಾರ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುವುದಿಲ್ಲ. ತಕ್ಷಣವೇ ಗೃಹ ಸಚಿವರೊಂದಿಗೆ ಚರ್ಚಿಸಿ ಶೀಘ್ರವೇ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ