ಭಾರತ ಬೌದ್ಧಿಕ ಸಂಪತ್ತಿನಲ್ಲಿ ವಿಶ್ವಗುರು: ಓಂ ಬಿರ್ಲಾ


Team Udayavani, Mar 11, 2022, 6:35 PM IST

ಭಾರತ ಬೌದ್ಧಿಕ ಸಂಪತ್ತಿನಲ್ಲಿ ವಿಶ್ವಗುರು: ಓಂ ಬಿರ್ಲಾ

ಬೆಳಗಾವಿ: ಜಗತ್ತಿನ ಸಂಶೋಧನಾ ಕ್ಷೇತ್ರದಲ್ಲಿ ಭಾರತ ಹೆಸರುವಾಸಿಯಾಗಿದೆ. ಭಾರತೀಯ ವಿದ್ಯಾರ್ಥಿಗಳು ವಿದೇಶದಲ್ಲಿ ವಿಜ್ಞಾನಿಗಳಾಗಿ, ತಂತ್ರಜ್ಞರಾಗಿ ಮುನ್ನಡೆಯುತ್ತಿದ್ದಾರೆ. ಅಪಾರ ಬೌದ್ಧಿಕ ಸಂಪತ್ತು ಹೊಂದಿರುವ ಭಾರತ ವಿಶ್ವಗುರು ಆಗಿ ಹೊರಹೊಮ್ಮುವ ಎಲ್ಲ ಸಾಮರ್ಥ್ಯ ಹೊಂದಿದೆ ಎಂದು ಲೋಕಸಭೆ ಸಭಾಧ್ಯಕ್ಷ ಓಂ ಬಿರ್ಲಾ ಹೇಳಿದರು.

ನಗರದಲ್ಲಿ ಗುರುವಾರ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 21ನೇ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು. ಬೌದ್ಧಿಕ ಸಂಪತ್ತಿನಿಂದ ಭಾರತ ಶ್ರೀಮಂತ ರಾಷ್ಟ್ರವಾಗಿದೆ. ಇದನ್ನು ಅರಿತುಕೊಂಡು ಕೃಷಿ, ವೈದ್ಯಕೀಯ, ಕೈಗಾರಿಕೆ, ಮಾಹಿತಿ ತಂತ್ರಜ್ಞಾನ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಭಾರತ ಉನ್ನತ ಸಾಧನೆ ಮಾಡಬೇಕು. ಈ ನಿಟ್ಟಿನಲ್ಲಿ ಯುವಸಮುದಾಯ ಮುಂದಾಗಬೇಕು.ಹೊಸ ಸಂಶೋಧನೆ, ಆವಿಷ್ಕಾರ ಬಗ್ಗೆ  ಚಿಂತಿಸಬೇಕು ಎಂದು ಹೇಳಿದರು.

ಕೋವಿಡ್‌ ಹಿನ್ನೆಲೆಯಲ್ಲಿ ಭಾರತದಲ್ಲಿ ಡಿಜಿಟಲ್‌ ಶಿಕ್ಷಣದ ಹೊಸ ಯುಗ ಆರಂಭಗೊಂಡಿದೆ. ಶಾಲೆ- ಕಾಲೇಜುಗಳಲ್ಲಿಯೂ ಡಿಜಿಟಲ್‌ ಆನ್‌ಲೈನ್‌ ಶಿಕ್ಷಣ ಹೆಚ್ಚು ಮಹತ್ವ ಪಡೆದುಕೊಂಡಿತು. ಡಿಜಿಟಲ್‌ ಶಿಕ್ಷಣದಲ್ಲಿ ಅನೇಕ ಸವಾಲುಗಳಿವೆ. ಆದರೂ ಅವೆಲ್ಲವನ್ನೂ ಮೀರಿ ಭಾರತ ಉತ್ತಮ ಸಾಧನೆ ಮಾಡುತ್ತಿದೆ. ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಬೆಳೆಯುತ್ತಿದೆ. ಜಗತ್ತಿನ ಹಲವು ದೇಶಗಳಲ್ಲಿ ಡಿಜಿಟಲ್‌, ಮಾಹಿತಿ-ತಂತ್ರಜ್ಞಾನದ ಬೆಳವಣಿಗೆಯಲ್ಲಿ ಕರ್ನಾಟಕದ ಕೊಡುಗೆ ಅಪಾರ ಎಂದರು.

ಪದವಿ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳ ಜೀವನದಲ್ಲಿ ಇದು ಅವಿಸ್ಮರಣೀಯ ದಿನವಾಗಿದೆ. ಜೀವನದಲ್ಲಿ ಕಠಿಣ ಪರಿಶ್ರಮ, ಆತ್ಮವಿಶ್ವಾಸದಿಂದ ಅಭ್ಯಾಸ ಮಾಡಿ ಸಾಧನೆಗೈದು ಸುವರ್ಣ ಪದಕ ಹಾಗೂ ರ್‍ಯಾಂಕ್‌ ಗಳಿಸಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಇದು ಅವರಿಗೆ ಕಲಿಸಿದ ಗುರುಗಳಿಗೂ ಅವಿಸ್ಮರಣೀಯ ದಿನ. ಶಿಕ್ಷಣ, ಜ್ಞಾನದ ಅನುಭವದ ಆಧಾರದ ಮೇಲೆ ಹೊಸ ಹೆಜ್ಜೆ ಇಟ್ಟು ಇದನ್ನು ದೇಶದ ಪ್ರಗತಿಗೆ ಬಳಸಿಕೊಳ್ಳಬೇಕು ಎಂದರು.

ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಸಚಿವ ಡಾ| ಅಶ್ವತ್ಥನಾರಾಯಣ ಮಾತನಾಡಿ, ನಿಮ್ಮ ಜ್ಞಾನ ಕೇವಲ ಉದ್ಯೋಗ ಪಡೆಯಲು ಸೀಮಿತಗೊಳಿಸದೇ ಉದ್ಯೋಗ ಸೃಷ್ಟಿಸಲು ಬಳಸಿಕೊಳ್ಳಬೇಕು. ಸರ್ಕಾರ ನೀಡಿರುವ ಅವಕಾಶಗಳನ್ನು ಬಳಸಿಕೊಂಡು ನವೋದ್ಯಮಿಗಳಾಗಿ ಹೊರಹೊಮ್ಮಬೇಕು. ಅನೇಕ ಸವಾಲುಗಳ ಮಧ್ಯೆ ಬದುಕಬೇಕಿದೆ ಎಂದರು. ಎಸ್‌.ಜಿ. ಬಾ ಳೇಕುಂದ್ರಿ ಅವರ ಹೆಸರಿನಲ್ಲಿ ವಿಟಿಯುನಲ್ಲಿ ಅಧ್ಯಯನ ಕೇಂದ್ರ ಆರಂಭಿಸಲಾಗುವುದು ಎಂದು ಸಚಿವರು ಪ್ರಕಟಿಸಿದರು.

ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌, ನವ ಪದವೀಧರರು ದೇಶದ ಪ್ರಗತಿಯ ಭಾಗವಾಗಬೇಕು. ಉದ್ಯೋಗ ಹುಡುಕುವವರಾಗದೇ ಉದ್ಯೋಗ ಸೃಷ್ಟಿಸುವವರಾಗಬೇಕು. ಸ್ವಯಂ ಉದ್ಯೋಗ ಆರಂಭಿಸಲು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಇವುಗಳನ್ನು ಬಳಸಿಕೊಂಡು ಬದುಕು ರೂಪಿಸಿಕೊಳ್ಳಬೇಕು. ವಿಜ್ಞಾನ-ತಂತ್ರಜ್ಞಾನ, ತಾಂತ್ರಿಕ ಕ್ಷೇತ್ರದ ಸಾಧನೆಯಲ್ಲಿ ಭಾರತದ ಹೆಸರು ಮುಂಚೂಣಿಯಲ್ಲಿದೆ.

ಯುವ ಸಮುದಾಯವನ್ನು ಅತ್ಯಧಿಕ ಸಂಖ್ಯೆಯಲ್ಲಿ ಹೊಂದಿರುವ ನಮ್ಮ ದೇಶದ ಕಡೆ ಇಡೀ ವಿಶ್ವ ಗಮನಿಸುತ್ತಿದೆ. 21ನೇ ಶತಮಾನವು ಭಾರತದ ಸಾಧನೆಗೆ ಸಾಕ್ಷಿಯಾಗಲಿದೆ ಎಂದರು. ದೇಶದ ಸರ್ವಾಂಗೀಣ ಅಭಿವೃದ್ಧಿ ಸರಕಾರದ ಆಶಯವಾಗಿದೆ. ಎಲ್ಲರೂ ಇದಕ್ಕೆ ಕೈಜೋಡಿಸುವ ಮೂಲಕ ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಹೇಳಿದರು. ಸಂಸದೆ ಮಂಗಲಾ ಅಂಗಡಿ, ವಿಟಿಯು ಕುಲಸಚಿವ ಪ್ರೊ|ಆನಂದ ದೇಶಪಾಂಡೆ, ಮೌಲ್ಯಮಾಪನ ಕುಲಸಚಿವ ಪ್ರೊ|ರಂಗಸ್ವಾಮಿ ಬಿ.ಇ., ಸಿಂಡಿಕೇಟ್‌ ಸದಸ್ಯರು, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

ಗೋಪಾಲಕೃಷ್ಣನ್‌ಗೆ ಗೌರವ ಡಾಕ್ಟರೇಟ್‌
ಪದ್ಮಭೂಷಣ ಪುರಸ್ಕೃತ ಬೆಂಗಳೂರಿನ ಅಕ್ಸಿಲೊರ್‌ ವೆಂಚರ್ಸ್‌ ಅಧ್ಯಕ್ಷರು ಹಾಗೂ ಇನ್ಫೋಸಿಸ್‌ ಸಹಸಂಸ್ಥಾಪಕ ಸೇನಾಪತಿ ಕ್ರಿಶ್‌ ಗೋಪಾಲಕೃಷ್ಣನ್‌ ಗೌರವ ಡಾಕ್ಟರೇಟ್‌ ಪದವಿ ಸ್ವೀಕರಿಸಿ, ಸಂತಸ ವ್ಯಕ್ತಪಡಿಸಿದರು. ಇನ್ಫೊಧೀಸಿಸ್‌ ಸಹೋದ್ಯೋಗಿಗಳ ಸಹಕಾರದಿಂದ ಈ ಗೌರವಕ್ಕೆ ಪಾತ್ರನಾಗಿದ್ದೇನೆ. ಸಿಬ್ಬಂದಿ, ಕುಟುಂಬದವರು, ಶಿಕ್ಷಕರನ್ನು ಈ ಸಂದರ್ಭದಲ್ಲಿ ನೆನೆಯುತ್ತೇನೆ ಎಂದರು. ಪದ್ಮಭೂಷಣ, ಹೈದರಾಬಾದ್‌ನ ಭಾರತ ಬಯೋಟೆಕ್‌ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ| ಕೃಷ್ಣ ಎಲ್ಲಾ ಹಾಗೂ ಪದ್ಮಶ್ರೀ ಪುರಸ್ಕೃತ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ, ಹೈಎನರ್ಜಿ ಭೌತಿಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕಿ ಪ್ರೊ|ರೋಹಿಣಿ ಗೊಡಬೋಲೆ ಅವರ ಅನುಪಸ್ಥಿತಿಯಲ್ಲಿ ಗೌರವ ಡಾಕ್ಟರೇಟ್‌ ಪದವಿ ಘೋಷಿಸಲಾಯಿತು.

ಮಾತೃಭಾಷೆ ಕನ್ನಡದಲ್ಲೂ ತಾಂತ್ರಿಕ ಶಿಕ್ಷಣ ಪಡೆಯುವ ಅವಕಾಶವನ್ನು ಸರ್ಕಾರ ಕಲ್ಪಿಸಿದೆ. ಇದರ ಪ್ರಯೋಜನ ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳು ಶಿಸ್ತು, ಉತ್ಸಾಹ ಹಾಗೂ ನೈತಿಕತೆಯ ಮೂಲಕ ಹೊಸತನ ಮತ್ತು ಸಾಧನೆಗೆ ಮುಂದಾಗಬೇಕು.
ಓಂ ಬಿರ್ಲಾ,
ಲೋಕಸಭೆ ಸಭಾಧ್ಯಕ್ಷ

ಟಾಪ್ ನ್ಯೂಸ್

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.