ಮೇಕೆದಾಟು: ರಾಜ್ಯದ ಹಿತ ಕಾಯುವ ನಿರ್ಧಾರ ಬರಲಿ


Team Udayavani, Mar 12, 2022, 6:00 AM IST

ಮೇಕೆದಾಟು: ರಾಜ್ಯದ ಹಿತ ಕಾಯುವ ನಿರ್ಧಾರ ಬರಲಿ

ಮೇಕೆದಾಟು ಯೋಜನೆ ಸಂಬಂಧ ತಮಿಳುನಾಡು ಸರಕಾರದ ಅಡ್ಡಿ ಮತ್ತು ಕೇಂದ್ರ ಸರಕಾರದಿಂದ ಸಿಗದ ಪರಿಸರ ಅನುಮತಿ ಕುರಿತಂತೆ ಮುಂದಿನ ವಾರ ಸರ್ವಪಕ್ಷಗಳ ಸಭೆ ಕರೆಯಲು ರಾಜ್ಯ ಸರಕಾರ ಮುಂದಾಗಿರುವ ಕ್ರಮ ಸ್ವಾಗತಾರ್ಹವಾಗಿದೆ. ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಸಲುವಾಗಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ಹಿಂದಿನ ಸರಕಾರಗಳೇ ಡಿಪಿಆರ್‌ ಸಿದ್ಧಪಡಿಸಿದ್ದು, ಕೇಂದ್ರ ಸರಕಾರದ ಒಪ್ಪಿಗೆ ಬೇಕಿದೆ. ಅಲ್ಲದೆ ಕೇಂದ್ರ ಪರಿಸರ ಇಲಾಖೆಯೂ ಇದಕ್ಕೆ ಒಪ್ಪಿಗೆ ನೀಡಬೇಕು.

ಮೊದಲಿನಿಂದಲೂ ಕಾವೇರಿ ಎಂದರೆ, ತಮಿಳುನಾಡು ಸರಕಾರಗಳಿಗೆ ಜಮೀನು ಮತ್ತು ಕುಡಿಯುವ ನೀರು ಒದಗಿಸುವ ಇರುವ ಜೀವ ಜಲ ಎಂಬುದಕ್ಕಿಂತ ಹೆಚ್ಚಾಗಿ ಹಕ್ಕು ಸಾಧಿಸುವುದು ಮತ್ತು ವಿವಾದ ಮಾಡುವುದೇ ಕಾಯಕವಾಗಿದೆ. ಕರ್ನಾಟಕದ ಕಡೆಯಿಂದ ಕಾವೇರಿ ಕುರಿತಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಹೊರಟರೂ, ತಮಿಳುನಾಡು ರಾಜಕಾರಣಿಗಳು ನಿದ್ದೆಯಲ್ಲಿ ಕೆಟ್ಟ ಕನಸು ಬಿದ್ದವರಂತೆ ಗಾಬರಿಗೊಂಡವರಂತೆ ಆಡುತ್ತಾರೆ. ಇದು ತೀರಾ ಉತ್ಪ್ರೇಕ್ಷೆಯೇನಲ್ಲ. ಇತಿಹಾಸವನ್ನು ಒಮ್ಮೆ ತಿರುಗಿಸಿ ನೋಡಿದರೆ ಇದು ತಿಳಿಯುತ್ತದೆ.

ಈಗಂತೂ ಕರ್ನಾಟಕದ ಸರಕಾರಗಳು ಮೇಕೆದಾಟು ಯೋಜನೆಯನ್ನು ರೂಪಿಸಿರುವುದೇ ಬೆಂಗಳೂರು ಜನತೆಗೆ ಕುಡಿಯುವ ನೀರು ಒದಗಿಸುವ ಸಲುವಾಗಿ. ಇದನ್ನು ಹಿಂದಿನಿಂದಲೂ ತಮಿಳುನಾಡು ಮುಂದೆ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಾಡಿಕೊಂಡೇ ಬಂದಿವೆ. ಆದರೆ ಇದುವರೆಗೂ ತಮಿಳುನಾಡಿಗೆ ಇದು ಅರ್ಥವಾಗಿಲ್ಲ. ಅಲ್ಲದೆ ಅಲ್ಲಿನ ರಾಜಕಾರಣಿಗಳಂತೂ, ಕಾವೇರಿ ವಿಚಾರದಲ್ಲಿ ಒಂದಾದಷ್ಟು ಬೇರೆ ಯಾವುದೇ ವಿಚಾರದಲ್ಲಿ ಒಂದಾಗುವುದಿಲ್ಲ.

ಈಗ ರಾಜ್ಯ ಸರಕಾರ ಮುಂದಿನ ವಾರ ಮೇಕೆದಾಟು ವಿಚಾರದಲ್ಲಿ ಸರ್ವಪಕ್ಷಗಳ ಸಭೆ ಕರೆಯಲು ಹೊರಟಿರುವುದು ಸಕಾಲಿಕ ಮತ್ತು ತೀರಾ ಅಗತ್ಯವಿರುವ ಸಂಗತಿ. ಇಲ್ಲಿ ಆಡಳಿತ ಪಕ್ಷವೊಂದೇ ಏನನ್ನೂ ಮಾಡಲು ಸಾಧ್ಯವಿಲ್ಲ. ಅಲ್ಲದೆ ಕಾವೇರಿ ವಿಷಯದಲ್ಲಿ ಎಲ್ಲ ಪಕ್ಷಗಳ ಸಹಕಾರವೂ ಅತ್ಯಗತ್ಯವಾಗಿರುತ್ತದೆ. ಇದಕ್ಕೆ ಬಲವಾದ ಕಾರಣವೂ ಇದೆ. ಹಿಂದಿನಿಂದಲೂ ಅಧಿಕಾರ ಮಾಡಿಕೊಂಡು ಬಂದಿರುವ ಮತ್ತು ಈಗ ವಿಪಕ್ಷದಲ್ಲಿ ಕುಳಿತಿರುವ ಪಕ್ಷಗಳಿಗೂ ಕಾವೇರಿ ಕುರಿತ ನೋವಿನ ಬಗ್ಗೆ ಅರಿವಿದೆ. ಹಾಗೆಯೇ ಎಲ್ಲರೂ ಒಂದಿಲ್ಲೊಂದು ವಿಚಾರದಲ್ಲಿ ಕೋರ್ಟ್‌ ಮುಂದೆಯೂ ಎಲ್ಲ ಸರಕಾರಗಳು ಕಾವೇರಿ ಕುರಿತಾಗಿ ವಾದ ಮಂಡಿಸಿವೆ.

ಈಗಲೂ ಅಷ್ಟೇ ರಾಜ್ಯ ಸರಕಾರ, ಮೇಕೆದಾಟು ಯೋಜನೆ ಜಾರಿ ಸಂಬಂಧ ವಿಪಕ್ಷಗಳಿಂದ ಅಗತ್ಯ ಸಲಹೆ ಸೂಚನೆ ಪಡೆಯಬೇಕು. ಇದುವರೆಗೆ ಕೇಂದ್ರ ಸರಕಾರ ಒಪ್ಪಿಗೆ ನೀಡದಿರುವುದು ಮತ್ತು ಇತ್ತೀಚೆಗಷ್ಟೇ ಕೇಂದ್ರದ ಜಲಶಕ್ತಿ ಸಚಿವರು ಮೇಕೆದಾಟು ವಿವಾದ ಸಂಬಂಧ ಕರ್ನಾಟಕ ಹಾಗೂ ತಮಿಳುನಾಡು ಸರಕಾರಗಳ ಮಧ್ಯೆ ಮಾತುಕತೆಗೆ ವೇದಿಕೆ ಸೃಷ್ಟಿಸುತ್ತೇನೆ ಎಂದಿರುವುದು ಬೇರೆಯದ್ದೇ ರಾಜಕೀಯ ವಾಸನೆ ತೋರಿಸಿದಂತಿದೆ. ಅಂದರೆ ಈಗಾಗಲೇ ಕೇಂದ್ರದ ಮುಂದೆ ತಮಿಳುನಾಡು ಕರ್ನಾಟಕದ ಬಗ್ಗೆ ದೂರು ಹೇಳಿರುವ ಸಾಧ್ಯತೆಗಳಿವೆ. ಇದನ್ನು ಮನಗಂಡೇ ಒಂದು ಸರ್ವಸಮ್ಮತ ನಿರ್ಧಾರ ತೆಗೆದುಕೊಂಡು, ಒಟ್ಟಾಗಿಯೇ ದಿಲ್ಲಿಗೆ ಹೋಗಿ ಕೇಂದ್ರ ಸರಕಾರದ ಮನವೊಲಿಕೆ ಮಾಡಬೇಕಾಗಿದೆ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

Editorial:ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Editorial: ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.