ಪೋರ್ನ್ ವಿಡಿಯೋ ವೆಬ್‌ಸೈಟ್‌ ನಿಷೇಧಿಸಿದ್ದರೂ ಸಿಗುತ್ತಿವೆ ಮಕ್ಕಳ ಅಶ್ಲೀಲ ದೃಶ್ಯ ತುಣುಕುಗಳು


Team Udayavani, Mar 12, 2022, 9:11 AM IST

ಪೋರ್ನ್ ವಿಡಿಯೋ ವೆಬ್‌ಸೈಟ್‌ ನಿಷೇಧಿಸಿದ್ದರೂ ಸಿಗುತ್ತಿವೆ ಮಕ್ಕಳ ಅಶ್ಲೀಲ ದೃಶ್ಯ ತುಣುಕುಗಳು

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳಿಗೆ ಸಂಬಂಧಿಸಿದ ಅಶ್ಲೀಲ ವಿಡಿಯೋ ವೀಕ್ಷಣೆ, ಅಪ್‌ ಲೋಡ್‌, ಡೌನ್‌ಲೋಡ್‌ ಅಥವಾ ಹಂಚುವವರು ನಗರದಲ್ಲಿ ಹೆಚ್ಚಾಗುತ್ತಿದ್ದು, ನಗರದ 8 ಸೈಬರ್‌, ಎಕಾನಾಮಿಕ್ಸ್‌, ನಾರ್ಕೋಟಿಕ್ಸ್‌( ಸೆನ್‌) ಠಾಣೆಗಳಲ್ಲಿ ಕಳೆದ ಎರಡೂವರೆ ತಿಂಗಳಲ್ಲಿ 30ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ.

ಮಕ್ಕಳ ಅಶ್ಲೀಲ ವಿಡಿಯೋ ವೀಕ್ಷಣೆ ಹೆಚ್ಚಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ಕೆಲವೊಂದು ಮಕ್ಕಳ ಅಶ್ಲೀಲ ವಿಡಿಯೋ ವೆಬ್‌ಸೈಟ್‌ಗಳನ್ನು ನಿಷೇಧಿಸಿದೆ. ಆದರೂ ಬೇರೆ ಬೇರೆ ಜಾಲತಾಣಗಳಲ್ಲಿ ವಿಡಿಯೋ ತುಣುಕುಗಳ ಸಿಗುತ್ತಿದ್ದು, ಅವುಗಳಿಂದಲೇ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಸಂಬಂಧ ಸಿಐಡಿ ಸೂಚನೆ ಮೇರೆಗೆ ನಗರದ ಎಂಟು ಸೆನ್‌ ಠಾಣೆಗಳಲ್ಲಿ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಹೀಗಾಗಿ ಮಕ್ಕಳ ಅಶ್ಲೀಲ ವಿಡಿಯೋ, ಫೋಟೋಗಳ ವೀಕ್ಷಣೆ, ಅಪ್‌ಲೋಡ್‌, ಡೌನ್‌ಲೋಡ್‌ ಮತ್ತು ಹಂಚುವುದು ಹಾಗೂ ಗೂಗಲ್‌ ಸರ್ಜ್‌ ಎಂಜಿನ್‌ನಲ್ಲಿ ಮಕ್ಕಳ ಅಶ್ಲೀಲ ವಿಡಿಯೋ ಬಗ್ಗೆ ಸರ್ಚ್‌ ಮಾಡುವುದು ಶಿಕ್ಷಾರ್ಹ ಅಪರಾಧ. ಈ ಹಿನ್ನೆಲೆಯಲ್ಲಿ ಅಂತಹ ಜಾಲತಾಣಗಳಿಗೆ ಭೇಟಿ ಕೊಡುವವರ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತನಿಖಾ ಸಂಸ್ಥೆಗಳು ಹದ್ದಿನ ಕಣ್ಣಿಟ್ಟಿವೆ. ಅಲ್ಲದೆ, ಅವರ ವಿರುದ್ಧ ಐಟಿ ಕಾಯ್ದೆ 67(ಬಿ) ಅಡಿಯಲ್ಲಿ ಪ್ರಕರಣ ದಾಖಲಾಗುತ್ತದೆ.

ಹೇಗೆ ಪತ್ತೆ ಹಚ್ಚುತ್ತಾರೆ?: ಮಕ್ಕಳ ಅಶ್ಲೀಲ ವಿಡಿಯೋ ಕುರಿತು 2019ರಲ್ಲಿ ಕೇಂದ್ರ ಸರ್ಕಾರ ನ್ಯಾಷನಲ್‌ ಸೆಂಟರ್‌ ಫಾರ್‌ ಮಿಸ್ಸಿಂಗ್‌ ಆ್ಯಂಡ್‌ ಎಕ್ಸ್‌ಫ್ಲಾಯ್ಲೆಡ್‌( ಎನ್‌ಸಿಎಂಇಸಿ) ಎಂಬ ಸಂಸ್ಥೆ ಆರಂಭಿಸಿದ್ದು, ಅದು ಸೈಬರ್‌ ಟಿಪ್‌ಲೈನ್‌ ಮೂಲಕ ಅಶ್ಲೀಲ ವೆಬ್‌ಸೈಟ್‌ ವೀಕ್ಷಕರ ಪತ್ತೆ ಹಚ್ಚುತ್ತದೆ. ದೇಶದ ಯಾವುದೇ ಸ್ಥಳದಲ್ಲಿ ಕುಳಿತು ಮಕ್ಕಳ ಅಶ್ಲೀಲ ಚಿತ್ರದ ಬಗ್ಗೆ ಜಾಲತಾಣದಲ್ಲಿ ಶೋಧಿಸಿದ ಕೂಡಲೇ ಸೈಬರ್‌ ಟಿಪ್‌ಲೈನ್‌ಗೆ ಸಂದೇಶ ರವಾನೆಯಾಗುತ್ತದೆ. ನಂತರ ಯಾವ ಜಾಗದಲ್ಲಿ? ಯಾವ ಐಪಿ ವಿಳಾಸ? ಆ ವ್ಯಕ್ತಿ ಹೆಸರು, ಮೊಬೈಲ್‌ ನಂಬರ್‌ ಪತ್ತೆ ಹಚ್ಚಲಾಗುತ್ತದೆ. ಈ ಮಾಹಿತಿಯನ್ನು ರಾಷ್ಟ್ರೀಯ ಅಪರಾಧ ದಾಖಲಾತಿ ಘಟಕ(ಎನ್‌ಸಿಆರ್‌ಬಿ) ಪಡೆದುಕೊಂಡು, ನಂತರ ಆಯಾ ರಾಜ್ಯದ ಸೈಬರ್‌ ಘಟಕದ ಮುಖ್ಯ ಕಚೇರಿಗೆ ಆರೋಪಿತ ವ್ಯಕ್ತಿ ಹೆಸರು, ಐಪಿ ವಿಳಾಸ ಅಥವಾ ಸಿಮ್‌ಕಾರ್ಡ್‌ ನಂಬರ್‌ ನಮೂದಿಸಿ ಕಳುಹಿಸುತ್ತಾರೆ. ಈ ಆಧಾರದ ಮೇಲೆ ಸಿಐಡಿ ಸೂಚನೆ ಮೇರೆಗೆ ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳ ಸೆನ್‌ ಠಾಣೆಗಳಲ್ಲಿ ಸೈಬರ್‌ ಟಿಪ್‌ಲೈನ್‌ ಪ್ರಕರಣಗಳು ದಾಖಲಾಗುತ್ತವೆ.

ಮೂರೂವರೆ ವರ್ಷದಲ್ಲಿ 280 ಪ್ರಕರಣ!

ರಾಜ್ಯದಲ್ಲಿ 2019ರಿಂದ ಇದುವರೆಗೂ ಸುಮಾರು 280ಕ್ಕೂ ಹೆಚ್ಚು ಟಿಪ್‌ಲೈನ್‌ ಪ್ರಕರಣಗಳು ದಾಖಲಾಗಿವೆ ಎಂದು ಮೂಲಗಳು ತಿಳಿಸಿವೆ. ಪ್ರಮುಖವಾಗಿ ಬೆಂಗಳೂರು, ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಬೆಂಗಳೂರು, ಶಿವಮೊಗ್ಗ ಹಾಗೂ ಉತ್ತರ ಕರ್ನಾಟಕ ಕೆಲ ಜಿಲ್ಲೆಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚಿನ ತನಿಖೆಯಲ್ಲಿ ರಾಜ್ಯದವರಿಗಿಂತ ಬಿಹಾರ, ಪಶ್ಚಿಮ ಬಂಗಾಳ ಸೇರಿ ಉತ್ತರ ಭಾರತದ ರಾಜ್ಯದ ವ್ಯಕ್ತಿಗಳೇ ಈ ಕೃತ್ಯದಲ್ಲಿ ತೊಡಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ನೆರೆ ರಾಜ್ಯ ಮತ್ತು ಜಿಲ್ಲೆಯವರು ಬೆಂಗಳೂರಿನ ವಿಳಾಸದಲ್ಲಿ ಪಡೆದ ಸಿಮ್‌ಕಾರ್ಡ್‌ ಮೂಲಕ ಈ ದೃಶ್ಯಗಳನ್ನು ಅಪ್‌ಲೋಡ್‌ ಮತ್ತು ಡೌನ್‌ಲೋಡ್‌ ಮಾಡಿಕೊಳ್ಳುತ್ತಾರೆ. ಹೀಗಾಗಿ ಈ ಪ್ರಕರಣ ಪತ್ತೆಗೆ ಸಾಕಷ್ಟು ಸಮಯ ಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:ವ್ಯಾಕ್ಯೂಮ್‌ ಬಾಂಬ್‌ ಬಳಕೆ ಒಪ್ಪಿಕೊಂಡ ರಷ್ಯಾ!

ಸೈಬರ್‌ ಟಿಪ್‌ಲೈನ್‌ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಆರೋಪಿಗಳ ಪತ್ತೆ ಕಾರ್ಯ ನಡೆಸಲಾಗುತ್ತದೆ. ಈ ಕೃತ್ಯದ ಹಿಂದೆ ಒಬ್ಬನೇ ವ್ಯಕ್ತಿ ಇದ್ದಾನೆಯೇ? ಅಥವಾ ವ್ಯವಸ್ಥಿತ ಜಾಲ ಇದೆಯೇ? ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತದೆ.-  ಕಮಲ್‌ ಪಂತ್‌, ನಗರ ಪೊಲೀಸ್‌ ಆಯುಕ್ತ.

ನಗರದಲ್ಲಿ ಎಲ್ಲೆಲ್ಲಿ ಪ್ರಕರಣ?

ನಗರದ 8 ಸೆನ್‌ ಠಾಣೆಗಳಲ್ಲಿ ಸಿಐಡಿ ಸೂಚನೆ ಮೇರೆಗೆ ಎರಡೂವರೆ ತಿಂಗಳಲ್ಲಿ 30 ಸೈಬರ್‌ ಟಿಪ್‌ಲೈನ್‌ ಪ್ರಕರಣಗಳು ದಾಖಲಾಗಿವೆ. ಪೂರ್ವ-05, ಉತ್ತರ-05, ವೈಟ್‌ ಫೀಲ್ಡ್‌ -04, ಈಶಾನ್ಯ -01, ಆಗ್ನೇಯ-04 ಇನ್ನುಳಿದಂತೆ ಕೇಂದ್ರ, ದಕ್ಷಿಣ, ಪಶ್ಚಿಮ ವಿಭಾಗ ಸೆನ್‌ ಠಾಣೆಗಳಲ್ಲೂ ಪ್ರರಕಣಗಳು ದಾಖಲಾಗಿದ್ದು, ಒಟ್ಟು 30 ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳ ಪೈಕಿ ಬಹುತೇಕ ಅಶ್ಲೀಲ ವಿಡಿಯೋ ಅಪ್‌ಲೋಡ್‌ ಮತ್ತು ಡೌನ್‌ಲೋಡ್‌ ಮಾಡಿರುವ ಪ್ರಕರಣಗಳೇ ಹೆಚ್ಚಾಗಿವೆ ಎಂದು ಮೂಲಗಳು ತಿಳಿಸಿವೆ.

ಅಶ್ಲೀಲ ಚಿತ್ರ ವೀಕ್ಷಣೆಗೆ ಶಿಕ್ಷೆ ಏನು?

ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ ಅಥವಾ ಅಪ್‌ಲೋಡ್‌ ಮಾಡಿದರೆ ಐಟಿ ಕಾಯ್ದೆ 67(ಬಿ) ಪ್ರಕಾರ ಐದು ವರ್ಷ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ.ವರೆಗೆ ದಂಡ. ಎರಡನೇ ಬಾರಿ ವೀಕ್ಷಣೆಗೆ 7 ವರ್ಷ ಶಿಕ್ಷೆ ಮತ್ತು 10 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

 ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.