ಗುಲಾಲಿ ಚೆಂಡಿನ ಟೆಸ್ಟ್: ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ
ಆಡುವ ಬಳಗದಲ್ಲಿ ಅಕ್ಷರ್ ಪಟೇಲ್
Team Udayavani, Mar 12, 2022, 2:11 PM IST
ಬೆಂಗಳೂರು: ಪ್ರವಾಸಿ ಶ್ರೀಲಂಕಾ ಎದುರು ಎಂ. ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಶನಿವಾರ ಆರಂಭವಾಗಿರುವ ಸರಣಿಯ ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಹಗಲು-ರಾತ್ರಿ ಪಂದ್ಯ ಆಡಲಾಗುತ್ತಿದ್ದು, ಬೆಂಗಳೂರಿನಲ್ಲಿ ನಡೆಯಲಿರುವ ಮೊದಲ ಫ್ಲಡ್ ಲೈಟ್ ಟೆಸ್ಟ್ ಆಗಿರುವುದರಿಂದ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿದೆ. ಬೆಂಗಳೂರಿನಲ್ಲಿ 2 ವರ್ಷಗಳ ಬಳಿಕ ಅಂತಾರಾಷ್ಟ್ರೀಯ ಪಂದ್ಯ ಆಡಲಾಗುತ್ತಿದ್ದು, 4 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಆಡಲಾಗುತ್ತಿದೆ.
ಭಾರತವು ಒಂದು ಬದಲಾವಣೆ ಮಾಡಿದ್ದು, ಆಡುವ ಹನ್ನೊಂದರ ಬಳಗದಲ್ಲಿ ಜಯಂತ್ ಠಾಕೂರ್ ಬದಲಿಗೆ ಫಿಟ್ ಆಗಿರುವ ಅಕ್ಷರ್ ಪಟೇಲ್ ಅನ್ನು ಮತ್ತೊಮ್ಮೆ ಆಯ್ಕೆ ಮಾಡಿದೆ.
ಶ್ರೀಲಂಕಾ ಎರಡು ಬದಲಾವಣೆಗಳನ್ನು ಮಾಡಿದ್ದು, ಪಾತುಮ್ ನಿಸ್ಸಾಂಕ ಮತ್ತು ಲಹಿರು ಕುಮಾರ, ಗಾಯಗಳಿಂದಾಗಿ ಹೊರಗುಳಿದಿದ್ದು,ಅವರ ಬದಲಿಗೆ ಕುಸಾಲ್ ಮೆಂಡಿಸ್ ಮತ್ತು ಪ್ರವೀಣ್ ಜಯವಿಕ್ರಮ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.
ಮೊದಲ ಟೆಸ್ಟ್ನಲ್ಲಿ ಭಾರತ ಇನ್ನಿಂಗ್ಸ್ ಮತ್ತು 222 ರನ್ಗಳ ಜಯ ಸಾಧಿಸಿತ್ತು.
ಉಭಯ ತಂಡಗಳ ಆಡುವ ಬಳಗ
ಭಾರತ : ಮಯಾಂಕ್ ಅಗರ್ವಾಲ್, ರೋಹಿತ್ ಶರ್ಮಾ (ನಾಯಕ), ಹನುಮ ವಿಹಾರಿ, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿ.ಕೀ.), ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ.
ಶ್ರೀಲಂಕಾ : ದಿಮುತ್ ಕರುಣಾರತ್ನೆ (ನಾಯಕ), ಲಹಿರು ತಿರಿಮನ್ನೆ, ಕುಸಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ನಿರೋಶನ್ ಡಿಕ್ವೆಲ್ಲಾ (ವಿ.ಕೀ.), ಸುರಂಗ ಲಕ್ಮಲ್, ಲಸಿತ್ ಎಂಬುಲ್ದೇನಿಯ, ವಿಶ್ವ ಫೆರ್ನಾಂಡೋ, ಪ್ರವೀಣ್ ಜಯವಿಕ್ರಮ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Mumbai Indians ವಿರುದ್ಧ ತವರಿನ ಅಂಗಳ: ರಾಹುಲ್ಗೆ ಮಹತ್ವದ ಪಂದ್ಯ
Champions Trophy ತಾಣ ಅಂತಿಮ ಲಾಹೋರ್, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ