ಟೋಲ್ಗೇಟ್ ಸಮಸ್ಯೆ ಗಡ್ಕರಿ ಸಭೆಯಲ್ಲಿ ತೀರ್ಮಾನ: ನಳಿನ್
Team Udayavani, Mar 13, 2022, 6:10 AM IST
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಮೀಪದಲ್ಲಿರುವ ಟೋಲ್ಗೇಟ್ಗಳ ಕುರಿತು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಂಗಳೂರಿಗೆ ಬಂದಾಗ ದೂರು ನೀಡಿದ್ದು, ಅದರ ಆಧಾರದಲ್ಲಿ ಸಚಿವರು ಮಾ. 15ರಂದು ಅಪರಾಹ್ನ 2.30ಕ್ಕೆ ಸಭೆ ಕರೆದಿದ್ದಾರೆ. ಅದರಲ್ಲಿ ರಾಜ್ಯದ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಭಾಗವಹಿಸಲಿದ್ದು, ಅಲ್ಲಿ ಸ್ಪಷ್ಟ ತೀರ್ಮಾನ ತೆಗೆದುಕೊಳ್ಳಲಾಗುವುದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.
ಅವರು ಶನಿವಾರ ಅಮ್ಮುಂಜೆಯಲ್ಲಿ ಪತ್ರಕರ್ತರ ಜತೆ ಮಾತನಾಡಿ, ಬಿ..ಸಿ.ರೋಡಿನಿಂದ ಮುಕ್ಕ ಎನ್ಐಟಿಕೆವರೆಗಿನ ಹೆದ್ದಾರಿಯನ್ನು ಇರ್ಕಾನ್ ಸಂಸ್ಥೆ ನೇರವಾಗಿ ರಾಷ್ಟ್ರೀಯ ಹೆದ್ದಾರಿಯಡಿ ಮಾಡಿದ್ದು, ಅವರು ಎನ್ಐಟಿಕೆ ಮತ್ತು ಬ್ರಹ್ಮರಕೂಟ್ಲುನಲ್ಲಿ ಟೋಲ್ ಮಾಡಿದ್ದಾರೆ.
ತಲಪಾಡಿಯಿಂದ ಹೆಜಮಾಡಿ, ಕುಂದಾಪುರವರೆಗಿನ ಹೆದ್ದಾರಿಯನ್ನು ಬಿಒಟಿ (ಬಿಲ್ಡ್ ಆಪರೇಟ್ ಟ್ರಾನ್ಸ್ಫರ್) ಯೋಜನೆಯಡಿ ನವಯುಗ ಸಂಸ್ಥೆ ಮಾಡಿದ್ದು, ಅವರು ತಲಪಾಡಿ ಮತ್ತು ಹೆಜಮಾಡಿಯಲ್ಲಿ ಟೋಲ್ ಮಾಡಿದ್ದಾರೆ.
ಟೋಲ್ ಸಮಸ್ಯೆ ಕುರಿತು ಈಗಾಗಲೇ ಸರಕಾರದ ಗಮನಕ್ಕೆ ತಂದು 2-3 ಸಭೆಗಳನ್ನು ಮಾಡಿದ್ದೇವೆ. ಅದರಲ್ಲಿ ಸಾಕಷ್ಟು ಕಾನೂನಾತ್ಮಕ ಸಮಸ್ಯೆಗಳಿವೆ. ಕಂಪೆನಿಯವರು ಹಾಕಿದ ಹಣ, ಮುಂದಿನ ನಿರ್ವಹಣೆ ಹೇಗೆ ಎಂಬ ಗೊಂದಲಗಳು ಕೂಡ ಇದೆ. ಹೀಗಾಗಿ ಕಾನೂನು ತೊಡಕುಗಳನ್ನು ಪರಿಹಾರ ಮಾಡುವ ನಿಟ್ಟಿನಲ್ಲಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಬೇಕಿದೆ ಎಂದರು.ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ
Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು
ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್ನಲ್ಲೇ ಹೆಚ್ಚು
Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ
Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು
MUST WATCH
ಹೊಸ ಸೇರ್ಪಡೆ
Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ
Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು
Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ
Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ
Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ