ಬಗ್ಗುಂಡಿ ಕೆರೆ ಅಭಿವೃದ್ಧಿಗೆ ಸ್ಮಾರ್ಟ್‌ ಸಿಟಿ ಅನುದಾನ


Team Udayavani, Mar 13, 2022, 5:45 AM IST

ಬಗ್ಗುಂಡಿ ಕೆರೆ ಅಭಿವೃದ್ಧಿಗೆ ಸ್ಮಾರ್ಟ್‌ ಸಿಟಿ ಅನುದಾನ

ಸುರತ್ಕಲ್‌: ಕುಳಾಯಿ ಬಳಿಯ ಐತಿಹಾಸಿಕ ಬಗ್ಗುಂಡಿ ಕೆರೆ ಕಾಯಕಲ್ಪಕ್ಕೆ ಸ್ಮಾರ್ಟ್‌ ಸಿಟಿ ಅನುದಾನದ ಮೂಲಕ ಮಾಡಲು ಚಿಂತನೆ ನಡೆದಿದೆ.

ಗುಜ್ಜರಕೆರೆ, ಕಾವೂರು ಕೆರೆಯ ಮಾದರಿ ನಗರದೊಳಗಿನ ಕೆರೆ ಉಳಿಸುವ ಜತೆಗೆ ಪ್ರವಾಸಿ ಆಕರ್ಷಣೆಯ ಕೇಂದ್ರವನ್ನಾಗಿ ಮಾಡುವ ಚಿಂತನೆಯೂ ಅಡಕವಾಗಿದೆ.

ಕೊರೊನಾದಿಂದ ಬದಲಾದ ಆರ್ಥಿಕ ಸ್ಥಿತಿಯಲ್ಲಿ ವಿಶ್ವ ಬ್ಯಾಂಕ್‌ನಿಂದ ಹಣಕಾಸು ನೆರವು ಪಡೆಯಲು ಸ್ಥಳೀಯಾಡಳಿತ ಮುಂದಾಗಿದೆ. ಜತೆಗೆ ಸ್ಮಾರ್ಟ್‌ ಸಿಟಿ ಅನುದಾನ ಮೀಸಲಿಡಲು ಶಾಸಕ ಡಾ| ಭರತ್‌ ಶೆಟ್ಟಿ ವೈ. ಅವರು ಸೂಚಿಸಿರುವುದರಿಂದ ಕೆರೆ ಕಾಯಕಲ್ಪದ ನಿರೀಕ್ಷೆ ಚಿಗುರೊಡೆದಿದೆ.

ಈ ಹಿಂದೆ ಸ್ಥಳೀಯ ಕೃಷಿ ಭೂಮಿಗೆ ಬಗ್ಗುಂಡಿ ಕೆರೆ ಮೂಲವಾಗಿತ್ತು. 60ಎಕ್ರೆಗೂ ಮಿಕ್ಕಿ ಪ್ರದೇಶ ಇಲ್ಲಿದ್ದರೂ, ಇಲ್ಲಿ ಸರಕಾರಿ ದಾಖಲೆಯಲ್ಲಿರುವ ಕೆರೆ 13 ಎಕರೆಯಷ್ಟಿದೆ. ಬಗ್ಗುಂಡಿ ಕೆರೆಗೂ ಕುಳಾಯಿ ಬಳಿ ಇರುವ ಕೋಟೆದ ಬಬ್ಬು ದೈವಸ್ಥಾನಕ್ಕೂ ನಂಟಿದ್ದು ಪ್ರತಿವರ್ಷ ಮಾರ್ಚ್‌ನಲ್ಲಿ ಬರುವ ಮೀನ ಸಂಕ್ರಮಣದಂದು ಈ ದೈವಸ್ಥಾನದ ನೇಮದ ಸಂದರ್ಭ ಕೆರೆಯಲ್ಲಿ ಮೀನು ಹಿಡಿಯುವ ಜಾತ್ರೆ ನಡೆಯುತ್ತಿದೆ. ಪ್ರತೀ ವರ್ಷ ವಿವಿಧ ಗ್ರಾಮಗಳಿಂದ ಬರುವ ಜನ ಮೀನು ಹಿಡಿಯುವ ಜಾತ್ರೆಯಲ್ಲಿ ಪಾಲ್ಗೊಂಡು ಸಂಭ್ರಮ ಪಡುತ್ತಿದ್ದರು. ಆದರೆ ಇತ್ತೀಚಿನ ನಾಲ್ಕೈದು ವರ್ಷಗಳಲ್ಲಿ ಕೆರೆಯಲ್ಲಿ ಹಾವಸೆ ತುಂಬಿದ ಕಾರಣ ಅನೇಕ ವರ್ಷಗಳಿಂದ ಕೆರೆಯಲ್ಲಿ ನಡೆಯುವ ಮೀನು ಹಿಡಿಯುವ ಜಾತ್ರೆಗೂ ವಿಘ್ನವುಂಟು ಮಾಡಿತ್ತು. ಅಲ್ಲದೇ ಕೆರೆ ಸುತ್ತಮುತ್ತ ಇರುವ ಕೈಗಾರಿಕೆ ಹಾಗೂ ಇದೀಗ ಬಡಾವಣೆಗಳಿಂದಲೂ ಮಲೀನ ನೀರು ಕೆರೆಯನ್ನು ತುಂಬುತ್ತಿದೆ.

ಮಾಲಿನ್ಯದಿಂದ ಕೆರೆಯಲ್ಲಿ ಮುಗುಡು ಮೀನುಗಳು ಹೆಚ್ಚಾಗಿ ಇತರ ಸಣ್ಣಪುಟ್ಟ ಮೀನುಗಳು ಈ ಮೀನಿಗೆ ಆಹಾರವಾಗುವ ಕಾರಣ ಇತರ ಮೀನುಗಳು ಸಂತತಿ ಕಡಿಮೆಯಾಗುತ್ತಿದೆ.

ಟೂರಿಸ್ಟ್‌ ಹಾಟ್‌ಸ್ಪಾಟ್‌ ಲಕ್ಷಣ
ರಾಷ್ಟ್ರೀಯ ಹೆದ್ದಾರಿ 66ಕ್ಕೆ ಹೊಂದಿಕೊಂಡಿರುವ ಉಡುಪಿ ಮಂಗಳೂರು ರಸ್ತೆಯ ಇಕ್ಕೆಲದಲ್ಲಿ ಇರುವ ಕುಳಾಯಿ ಗ್ರಾಮದ ಪರಿಸರಕ್ಕೆ ಒಂದು ಕಾಲದಲ್ಲಿ ತಾಲೂಕಿನ ಜೀವ ನಾಡಿಯಾಗಿದ್ದ ಐತಿಹಾಸಿಕ ಬಗ್ಗುಂಡಿ ಕೆರೆ, ಪ್ರಕೃತಿಯ ಸುಂದರ ತಾಣದಲ್ಲಿ ನೆಲೆಗೊಂಡಿದೆ. ವಿವಿಧ ಜಾತಿಯ ನೀರು ಹಕ್ಕಿಗಳ ಕಲರವ ನಿತ್ಯ ಕಾಣಸಿಗುತ್ತವೆ.
ಉಳಿದಂತೆ ವರ್ಷಪೂರ್ತಿ ನೀರಸೆಲೆ ಇರುವುದರಿಂದ ಮೊಟ್ಟೆಯಿಡಲು ಬೇರೆ ಬೇರೆ ತಾಣದಿಂದ ಹಕ್ಕಿಗಳು ಇಲ್ಲಿ ಬರುತ್ತವೆ. ಪ್ರಯತ್ನ ಪಟ್ಟರೆ ಅತ್ಯಂತ ಸುಂದರ ಪ್ರವಾಸಿ ಸ್ಥಳವನ್ನಾಗಿ ಮಾಡಬಹುದು. ಬೋಟಿಂಗ್‌, ಕೆರೆಯ ಸುತ್ತಾ ವಾಕಿಂಗ್‌ ಟ್ರ್ಯಾಕ್‌, ಸೈಲ್‌ ರೈಡಿಂಗ್‌ ಮತ್ತಿತರ ಸೌಲಭ್ಯಕ್ಕೆ ಸಾಕಷ್ಟು ಅವಕಾಶಗಳಿವೆ.

ಕೆರೆ ಅಭಿವೃದ್ಧಿಗೆ ಯೋಜನೆ
ಕಾವೂರು ಕೆರೆಯಂತೆ ಈ ಕೆರೆ ಅಭಿವೃದ್ಧಿಗೂ ಯೋಜನೆ ರೂಪಿಸಲಾಗುವುದು. ಕಾವೂರು, ಗುಜ್ಜರಕೆರೆ ಹಾಗೂ ವಿವಿಧೆಡೆ ಕೆರೆ ಅಭಿವೃದ್ಧಿ ಆಗುತ್ತಿದೆ. ಸುರತ್ಕಲ್‌ ಉಪವಿಭಾಗ ಪಾಲಿಕೆ ವ್ಯಾಪ್ತಿಯಲ್ಲಿ ಕುಳಾಯಿಯ ಈ ಐತಿಹಾಸಿಕ ಮಾದರಿ ಕೆರೆ ಮಾಡಲು ಸರಕಾರ ಯೋಜನೆ ರೂಪಿಸುತ್ತದೆ.
-ಡಾ| ಭರತ್‌ ಶೆಟ್ಟಿ ವೈ, ಶಾಸಕರು

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.