ಸೋಲಿನ ನಂತರ ಕಾಂಗ್ರೆಸ್ ಮಹತ್ವದ ಸಭೆ: ಸರ್ಕಾರವನ್ನು ಎದುರಿಸಲು ಹೊಸ ತಂತ್ರ

ಪಕ್ಷದೊಳಗೆ ಹೆಚ್ಚಿದ ಬದಲಾವಣೆಯ ಒತ್ತಡ

Team Udayavani, Mar 13, 2022, 11:52 AM IST

1-sadsad

ನವದೆಹಲಿ: ಪಂಚ ರಾಜ್ಯಗಳ ಚುನಾವಣೆ ಯಲ್ಲಿ ಹೀನಾಯ ಸೋಲು ಅನುಭವಿಸಿದ ಬಳಿಕ ಕಾಂಗ್ರೆಸ್ ನಾಯಕರು ಭಾನುವಾರ ಮಹತ್ವದ ಸಭೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಹೋರಾಟಕ್ಕೆ ಕೈಗೊಳ್ಳಬೇಕಾದ ಹೊಸ ರಣ ತಂತ್ರಗಳ ಕುರಿತು ಚರ್ಚೆ ನಡೆಸಿದ್ದಾರೆ.

ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಸೋಲಿನ ನಂತರ ನಡೆದ ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಮಿತಿ ಸಭೆ ಸೋನಿಯಾ ಗಾಂಧಿ ನೇತೃತ್ವದಲ್ಲಿ 10 ಜನಪಥ್‌ನಲ್ಲಿ ನಡೆಯಿತು.

ಪ್ರತಿಪಕ್ಷಗಳ ಜತೆಗೂಡಿ ಸರ್ಕಾರದ ವಿರುದ್ಧ ಹೋರಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಕೆಸಿ ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ, ಆನಂದ್ ಶರ್ಮಾ, ಮನೀಶ್ ತಿವಾರಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

”ಮುಂಬರುವ ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳ ಕುರಿತು ಚರ್ಚೆ ನಡೆಸಿದ್ದೇವೆ. ಉಕ್ರೇನ್‌ನಿಂದ ಹಿಂತಿರುಗುವ ವೈದ್ಯಕೀಯ ವಿದ್ಯಾರ್ಥಿಗಳ ಕುರಿತು, ರೈತರ ಎಂಎಸ್‌ಪಿ , ಹಣದುಬ್ಬರ, ನಿರುದ್ಯೋಗ, ಸಮಸ್ಯೆಗಳನ್ನು ಪ್ರಸ್ತಾಪಿಸಲು ನಾವು ಪ್ರಯತ್ನಿಸುತ್ತೇವೆ” ಎಂದು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸಭೆಯ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದ ಉತ್ತರ ಪ್ರದೇಶದಲ್ಲಿ, ಕಾಂಗ್ರೆಸ್ ಕೇವಲ ಎರಡು ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಗಿತ್ತು. ಇಡೀ ಯುಪಿಯಲ್ಲಿ ಶೇ.2.4ರಷ್ಟು ಮತಗಳನ್ನು ಮಾತ್ರ ಪಡೆದಿದೆ. ಯುಪಿಯ 380 ಸೀಟುಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಠೇವಣಿಯನ್ನೂ ಕಳೆದುಕೊಂಡಿದ್ದಾರೆ.

ಪಕ್ಷದೊಳಗೆ ಹೆಚ್ಚಿದ ಬದಲಾವಣೆಯ ಒತ್ತಡ

ಭಾರಿ ಸೋಲಿನ ನಂತರ, ಕೇರಳ ಸಂಸದ ಶಶಿ ತರೂರ್ ಸೇರಿದಂತೆ ಹಲವು ನಾಯಕರು ಈಗಾಗಲೇ ಉನ್ನತ ಮಟ್ಟದಲ್ಲಿ ಬದಲಾವಣೆಗೆ ಒತ್ತಾಯಿಸಿದ್ದಾರೆ. ಆದರೆ, ಕರ್ನಾಟಕದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಡಿ.ಕೆ.ಶಿವಕುಮಾರ್ ಅವರು ಗಾಂಧಿ ಕುಟುಂಬದ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸೋಲಿನ ಬಳಿಕ ಯುಪಿ ಕಾಂಗ್ರೆಸ್‌ನ ಹಲವು ನಾಯಕರು ಪಕ್ಷ ತೊರೆಯುವುದಾಗಿ ಘೋಷಿಸಿದ್ದಾರೆ.
ಮತ್ತೊಂದೆಡೆ, ಯುಪಿ ಕಾಂಗ್ರೆಸ್‌ನ ಎಲೆಕ್ಟ್ರಾನಿಕ್ ಮಾಧ್ಯಮ ಸಂಯೋಜಕ ಜೀಶನ್ ಹೈದರ್ ಅವರನ್ನು ನಾಯಕತ್ವದ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಕಾರಣಕ್ಕಾಗಿ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.