ಅವಧಿ ಪೂರ್ವ ಚುನಾವಣೆ ಅಸಾಧ್ಯ: ಶಾಸಕ ಬಸನಗೌಡ ಪಾಟೀಲ ಯತ್ನಾಳ್
Team Udayavani, Mar 14, 2022, 6:45 AM IST
ವಿಜಯಪುರ : ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಸಾಧ್ಯವೇ ಇಲ್ಲ. ಚುನಾವಣೆ ಒಂದು ವರ್ಷ ಇರುವುದರಿಂದ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ. ಪಕ್ಷದ ಹಿರಿಯರಿಗೆ ಹಾಗೂ ಯುವಕರಿಗೆ ಸಂಪುಟದಲ್ಲಿ ಅವಕಾಶ ನೀಡಲಾಗುತ್ತದೆ. ಆದರೆ ನನಗೆ ಮಂತ್ರಿ ಮಾಡಿ ಎಂದು ಯಾರನ್ನೂ ಕೇಳಿಲ್ಲ. ಪಕ್ಷದ ನಾಯಕರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಕಾಂಗ್ರೆಸ್ನ ಸೋನಿಯಾ, ರಾಹುಲ್, ಪ್ರಿಯಾಂಕಾ ಅವರೇ ಬಿಜೆಪಿ ಸ್ಟಾರ್ ಪ್ರಚಾರಕರು. ಸುಮ್ಮನೇ ರಾಜೀನಾಮೆ ನೀಡುವ ಹಾಗೂ ಆತ್ಮಾವಲೋಕನ ಸಭೆ ನಡೆಸುವ ನಾಟಕ ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಬಿಜೆಪಿಯನ್ನು ಬ್ರೋಕರ್ ಪಾರ್ಟಿ ಅಂತ ಕರೆದಿದ್ದಾರೆ. ಕಾಂಗ್ರೆಸ್ ಲೋಫರ್ ಪಾರ್ಟಿಯಾಗಿದೆ. ಜೈಲಿಗೆ ಹೋಗಿ ಬಂದವರು ನಮ್ಮ ಪಕ್ಷವನ್ನು ಟೀಕಿಸುವ ಯಾವ ನೈತಿಕತೆಯೂ ಹೊಂದಿಲ್ಲ. ಜನ ಬಿಜೆಪಿಗೆ ಅಭೂತ ಪೂರ್ವ ಬೆಂಬಲ ನೀಡಿದ್ದಾರೆ.
ಮತದಾರರ ನಿರ್ಧಾರವನ್ನು ಸ್ವೀಕರಿಸಬೇಕು. ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಬಿಜೆಪಿಯಲ್ಲಿ ಈಗ ಸೆಕೆಂಡ್ ಲೈನ್ ಲೀಡರಶೀಪ್ ಬಂದಿದೆ. ಮುಂಬರುವ ಚುನಾವಣೆಯಲ್ಲಿ ಎಲ್ಲರೂ ಸೇರಿ 130 ಸ್ಥಾನಗಳ ಗಡಿ ದಾಟಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ