ಸರಕಾರದಿಂದ ಅರಣ್ಯ ಭೂಮಿ ಸಾಗುವಳಿದಾರರ ಒಕ್ಕಲೆಬ್ಬಿಸುವ ಹುನ್ನಾರ
Team Udayavani, Mar 14, 2022, 6:40 AM IST
ಶಿವಮೊಗ್ಗ: ಡಬಲ್ ಎಂಜಿನ್ ಸರಕಾರಗಳು ಅರಣ್ಯ ಭೂಮಿ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವ ಹುನ್ನಾರ ಮಾಡುತ್ತಿವೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು.
ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ, ಕಾರವಾರ ಸೇರಿದಂತೆ ರಾಜ್ಯದ ಹಲವೆಡೆ ಅರಣ್ಯ ಭೂಮಿ ಸಾಗುವಳಿ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 25 ಸಾವಿರ ರೈತರ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ರೈತರಿಗೆ ನೋಟಿಸ್ ಕೊಟ್ಟು ಕೋರ್ಟಿಗೆ ಅಲೆದಾಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ದೂರಿದರು.
ಕಾಯ್ದೆಯಲ್ಲಿ 75 ವರ್ಷ ದಾಖಲೆ ಬೇಕೆಂಬ ಷರತ್ತು ಇರುವುದು ಮಲೆನಾಡಿನ ಭಾಗದ ಜನರಿಗೆ ತೊಂದರೆಯಾಗಿರುವುದು ನಿಜ. ಆದರೆ ಅದನ್ನು ಸರಿಮಾಡುತ್ತೇವೆ ಎಂದು ಚುನಾಯಿತರಾದ ಬಿಜೆಪಿ ಸರಕಾರ ಯಾಕೆ ಮಾಡಿಲ್ಲ ಮತ್ತು ನಮ್ಮ ಸಂಸದರು ಈ ಬಗ್ಗೆ ಯಾಕೆ ಸಂಸತ್ತಿನಲ್ಲಿ ಮಾತನಾಡಿಲ್ಲ ಎಂದು ಮಧು ಬಂಗಾರಪ್ಪ ಪ್ರಶ್ನಿಸಿದರು.
ಬಡವರಿಗೆ ಭೂಮಿ
ಭೂ ಸುಧಾರಣಾ ಕಾಯ್ದೆ ಮೂಲಕ ಬಡವರಿಗೆ ಭೂಮಿ ಕೊಟ್ಟಿರುವುದು ಕಾಂಗ್ರೆಸ್ ಪಕ್ಷ. ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಫಾರಂ 50, 53 ಜಾರಿಗೆ ತಂದು ಲಕ್ಷಾಂತರ ಭೂ ಹೀನ ರೈತರಿಗೆ ಭೂಮಿ ಕೊಡಲಾಗಿದೆ ಆದರೆ ಇತಿಹಾಸ ಮರೆಮಾಚುವ ಬಿಜೆಪಿ ನಾಯಕರು ಈಗ ಪ್ರತಿಪಕ್ಷಗಳ ಬಗ್ಗೆ ಆರೋಪ ಮಾಡುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!