ಬೆಳ್ತಂಗಡಿಯ ಧುಂಬೆಟ್ಟಿಗೆ ಪರಿಣಿತರ ತಂಡ; ಕಾಡಾನೆ ಹಾವಳಿ: ಕೃಷಿಕರ ಮೊರೆಗೆ ಇಲಾಖೆ ಸ್ಪಂದನೆ


Team Udayavani, Mar 14, 2022, 5:45 AM IST

aಬೆಳ್ತಂಗಡಿಯ ಧುಂಬೆಟ್ಟಿಗೆ ಪರಿಣಿತರ ತಂಡ; ಕಾಡಾನೆ ಹಾವಳಿ: ಕೃಷಿಕರ ಮೊರೆಗೆ ಇಲಾಖೆ ಸ್ಪಂದನೆ

ಬೆಳ್ತಂಗಡಿ: ತಾಲೂಕಿನ ಹಲವೆಡೆ ಕಾಡಾನೆಗಳು ಕೃಷಿ ಚಟುವಟಿಕೆಗಳ ಮೇಲೆ ದಾಳಿ ನಡೆಸುತ್ತಿರುವ ಪರಿಣಾಮ ಶಾಶ್ವತ ಪರಿಹಾರಕ್ಕಾಗಿ ಅರಣ್ಯ ಇಲಾಖೆಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಇಲಾಖೆ ರವಿವಾರ ಆನೆಗಳನ್ನು ಕಾಡಿಗಟ್ಟುವ ಪರಿಣಿತರ ತಂಡವನ್ನು ಬೆಳ್ತಂಗಡಿಗೆ ಕಳುಹಿಸಿದೆ.

ಇಲ್ಲಿನ ಮುಂಡಾಜೆಯ ಧುಂಬೆಟ್ಟು ಪ್ರದೇಶದ ಸ್ಥಳೀಯರು ಹಾಗೂ ಡ್ರೋನ್‌ ಕೆಮರಾ ತಂಡ ಸೇರಿ ಸೋಮವಾರ ಕಾರ್ಯಾಚರಣೆ ಆರಂಭಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಧುಂಬೆಟ್ಟು ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಕಾಡಾನೆಗಳು ನಿರಂತರ ದಾಳಿ ಇಡುತ್ತಿದ್ದು, ಲಕ್ಷಾಂತರ ರೂ. ಮೌಲ್ಯದ ಕೃಷಿ ಹಾನಿ ಸಂಭವಿಸಿದೆ. ಕಾಡಾನೆಗಳು ಇಲ್ಲಿನ ಮನೆಗಳ ಸುತ್ತ ಸುಳಿಯುತ್ತಿದ್ದು, ಇದರಿಂದ ಪರಿಸರದ ಜನರಲ್ಲಿ ಭೀತಿ ಉಂಟು ಮಾಡಿತ್ತು.
ಕಾಡಾನೆಗಳ ಹಾವಳಿ ತಡೆಗೆ ಕಳೆದ ಮೂರು ದಿನಗಳ ಹಿಂದೆ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ| ದಿನೇಶ್‌ ಕುಮಾರ್‌ ಅವರಿಗೆ ತಾಲೂಕಿನ ಕೃಷಿಕರು ಮನವಿ ಸಲ್ಲಿಸಿದ್ದರು. ತತ್‌ಕ್ಷಣ ಸ್ಪಂದನೆ ನೀಡಿದ ಅವರು ನಾಗರಹೊಳೆಯಿಂದ ಪರಿಣಿತ ಸಿಬಂದಿಯನ್ನು ಕರೆಸಿಕೊಂಡಿದ್ದಾರೆ.

ಡಿಎಫ್ಒ ಅವರ ತಂಡ ಕಾರ್ಗಿಲ್‌ ವನಕ್ಕೆ ಭೇಟಿ ನೀಡಿ ಆನೆ ಹಾವಳಿಯಿಂದ ಉಂಟಾದ ಹಾನಿಯ ವೀಕ್ಷಣೆಯನ್ನು ನಡೆಸಿತು. ಬೇಲಿ ನಿರ್ಮಾಣಕ್ಕೆ ಬೇಕಾಗುವ ಸಹಾಯಧನವನ್ನು ಇಲಾಖೆಯಿಂದ ನೀಡುವ ಕುರಿತು ಭರವಸೆ ನೀಡಿದರು.

ಎಸಿಎಫ್ ಸುಬ್ರಹ್ಮಣ್ಯ ರಾವ್‌, ಬಂಟ್ವಾಳ ವಲಯ ಅರಣ್ಯಾಧಿಕಾರಿ ರಾಜೇಶ್‌ ಬಳಿಗಾರ, ಬೆಳ್ತಂಗಡಿಯ ಉಪ ವಲಯ ಅರಣ್ಯಾಧಿಕಾರಿಗಳಾದ ಯತೀಂದ್ರ, ರವೀಂದ್ರ ಅಂಕಲಗಿ, ರವೀಂದ್ರ ಕೆ., ಭವಾನಿ ಶಂಕರ್‌, ಅರಣ್ಯ ರಕ್ಷಕರಾದ ಶರತ್‌ ಶೆಟ್ಟಿ, ಪಾಂಡುರಂಗ ಕಮತಿ, ಸ್ಥಳೀಯರಾದ ಸಚಿನ್‌ ಭಿಡೆ, ಕಜೆ ವೆಂಕಟೇಶ್ವರ ಭಟ್‌, ಡಾ| ಅಮಿತ್‌ ಖಾಡಿಲ್ಕರ್‌, ಶಿವಣ್ಣ ಜಯಾನಂದ, ಗಣೇಶ್‌ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.

ಡ್ರೋನ್‌ ಕೆಮರಾ ಬಳಕೆ
ಉಪ ವಲಯ ಅರಣ್ಯಾಧಿಕಾರಿ, ಅರಣ್ಯ ರಕ್ಷಕರ ನೇತೃತ್ವದಲ್ಲಿ ಕಾರ್ಯಾಚರಣೆ ಹಗಲಿನ ಹೊತ್ತು ಮಾತ್ರ ನಡೆಯಲಿದೆ. ಕಾಡಾನೆಗಳು ಆಗಮಿಸುವ ಪರಿಸರವನ್ನು ಗುರುತು ಮಾಡಿ, ನಾಗರಹೊಳೆಯ ಪರಿಣಿತರಾದ ಹರೀಶ್‌, ವೆಂಕಟೇಶ ಹಾಗೂ ಮೋಟಪ್ಪ ಅವರು ಸ್ಥಳೀಯರ ಸಹಕಾರದಲ್ಲಿ ಇಲ್ಲಿನ ಹಾಗೂ ಸಮೀಪದ ಗ್ರಾಮಗಳ ಪರಿಸರ ಅರಣ್ಯದ ಕುರಿತು ಪರಿಶೀಲನೆ ನಡೆಸಲಿದ್ದಾರೆ. ಡ್ರೋನ್‌ ಕೆಮರಾ ಪರಿಸರದಲ್ಲಿ ಆನೆಗಳಿರುವ ಗುರುತು ಪತ್ತೆ ಮಾಡಲು ಸಹಕರಿಸಲಿದೆ.

ಟಾಪ್ ನ್ಯೂಸ್

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Bantwal: ಬಾವಿಗೆ ಬಿದ್ದ ಮಗು; ರಕ್ಷಿಸಿದ ಯುವಕ

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

11

Puttur: ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು ವೈದ್ಯರ ವಿರುದ್ಧ ದೂರು ದಾಖಲು

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.