ದಾವಣಗೆರೆ ದುಗ್ಗಮ್ಮನ ಜಾತ್ರೆಗೆ ವಿಧ್ಯುಕ ಚಾಲನೆ

 ದೇವಿಗೆ ವಿಶೇಷ ಅಲಂಕಾರ-ಪಂಚಾಮೃತಾಭಿಷೇಕ

Team Udayavani, Mar 14, 2022, 1:08 PM IST

1

ದಾವಣಗೆರೆ: ರಾಜ್ಯದ ಮನೆಮಾತಾಗಿರುವ ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ದುಗ್ಗಮ್ಮನ (ಶ್ರೀ ದುರ್ಗಾಂಬಿಕಾ ದೇವಿ) ಜಾತ್ರೆಗೆ ಭಾನುವಾರದಿಂದ ವಿಧ್ಯುಕ್ತ ಚಾಲನೆ ದೊರೆತಿದೆ.

ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ ನಗರ ದೇವತೆ ಶ್ರೀ ದುರ್ಗಾಂಬಿಕಾದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಸ್ಥಾನದ ಪ್ರಧಾನ ಅರ್ಚಕರಾದ ನಾಗರಾಜ ಜೋಯಿಸ್‌ ಅವರ ನೇತೃತ್ವದಲ್ಲಿ ಪಂಚಾಮೃತಾಭಿಷೇಕ ನೆರವೇರಿಸಿ, ಕಂಕಣಧಾರಣೆ, ಇತರೆ ಧಾರ್ಮಿಕ, ಪೂಜಾ ವಿಧಾನ ನಡೆದವು. ಭಾನುವಾರ ರಾತ್ರಿ ಸಾರು.. ಹಾಕುವ ಮೂಲಕ ಮೂಲಕ ಅಧಿಕೃತವಾಗಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

ಜಾತ್ರೆಯ ಹಿನ್ನೆಲೆಯಲ್ಲಿ ಶ್ರೀ ದುರ್ಗಾಂಬಿಕಾ ದೇವಿ ವಜ್ರ, ವೈಡೂರ್ಯ, ಚಿನ್ನದಾಭರಣಗಳ ಅಲಂಕಾರ ಮಾಡಲಾಗಿದೆ. ಬೆಳ್ಳಿ ಪ್ರಭಾವಳಿಯ ಮಧ್ಯದಲ್ಲಿ ಕಂಗೊಳಿಸುತ್ತಿರುವ ದುಗ್ಗಮ್ಮನ ದರ್ಶನಕ್ಕಾಗಿ ಭಕ್ತಾದಿಗಳು ಭಾನುವಾರದಿಂದಲೇ ಸರತಿ ಸಾಲಲ್ಲಿ ನಿಂತು, ಉಡಕ್ಕಿ, ಕಾಣಿಕೆ ನೀಡಿ, ಕೃತಾರ್ಥರಾದರು.

ಈಗಿರುವ ದುರ್ಗಾಂಬಿಕಾ ದೇವಸ್ಥಾನವನ್ನು 1937ರಲ್ಲಿ ಕಟ್ಟಿಸಲು ಪ್ರಾರಂಭಿಸಲಾಯಿತು. 1939ರಲ್ಲಿ ಮುಕ್ತಾಯಗೊಂಡ ದೇವಸ್ಥಾನವನ್ನು ದಾವಣಗೆರೆಯಲ್ಲಿಯೇ ಇದ್ದ ಶ್ರೀ ಜಯದೇವ ಜಗದ್ಗುರುಗಳು ಜಾತ್ರೆ ಉದ್ಘಾಟಿಸಿದರು. 1939ರಿಂದ ಪ್ರಾರಂಭ ಆಗಿರುವ ದುಗ್ಗಮ್ಮನ ಜಾತ್ರೆ ಪ್ರತಿ 2 ವರ್ಷಕ್ಕೊಮ್ಮೆ ಜಾತ್ರೆ ನಡೆಯುತ್ತಲೇ ಇದೆ.

ಪ್ರಾರಂಭಿಕ ಹಂತದಲ್ಲಿ ದೇವಸ್ಥಾನದ ಗೌಡರು, ಶ್ಯಾನುಭೋಗರು, ರೈತರು, ಬಣಕಾರರು, ಬಾಬುದಾರರು ಹಾಗೂ ಕೆಲವು ವರ್ತಕರೇ ಮುಂದೆ ನಿಂತು ಜಾತ್ರೆ ನಡೆಸುತ್ತಿದ್ದರು. ಎಲ್ಲರೂ ಅವರಿಗೆ ನಿಗದಿಪಡಿಸಿದ ಕೆಲಸ ಮಾಡುತ್ತಿದ್ದರು. ಈಗಲೂ ಅದೇ ಸಂಪ್ರದಾಯ, ಆಚರಣೆ ಮುಂದುವರೆದಿದೆ. ಈಚೆಗೆ ದೊಡ್ಡ ಮಟ್ಟದಲ್ಲಿ ಜಾತ್ರೆ ನಡೆಯುತ್ತಿದೆ.

ಮಳೆ ದೇವತೆ ಎಂದೇ ಕರೆಯಲ್ಪಡುವ ದಾವಣಗೆರೆ ದುಗ್ಗಮ್ಮ ದಾವಣಗೆರೆ ಮಾತ್ರವಲ್ಲ ಸುತ್ತಮುತ್ತಲಿನ ಜನರನ್ನು ಎಂದೆಂದೂ ಕೈ ಬಿಟ್ಟಿಲ್ಲ. ಮಳೆ ಬರದೇ ಹೋದಲ್ಲಿ ದೇವಸ್ಥಾನದ ಸುತ್ತ ವಾರದ ಸಂತೆ(ಭಾನುವಾರ ದಾವಣಗೆರೆಯಲ್ಲಿ ವಾರದ ಸಂತೆ) ನಡೆಸಿದರೆ ಮಳೆ ಬಂದೇ ಬರುತ್ತದೆ ಎಂಬ ಗಾಢನಂಬಿಕೆ ಇಲ್ಲಿನ ಜನರಲ್ಲಿದೆ. ಅನೇಕ ಬಾರಿ ಭಾನುವಾರದ ಸಂತೆ ನಡೆಸಿದ ಕೆಲ ದಿನಗಳ ಅಂತರದಲ್ಲಿ ಹದವಾದ ಮಳೆಯಾದ ಉದಾಹರಣೆಗಳು ಸಹ ಇವೆ ಎಂದು ಭಕ್ತಾದಿಗಳು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ. ದುಗ್ಗಮ್ಮ ಮಳೆ ತರಿಸುವ ತಾಯಿ ಎಂದೇ ಜನರು ಆರಾಧಿಸುತ್ತಾರೆ.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.