ಬೆಂಗಳೂರು ರಸ್ತೆ ಗುಂಡಿಗೆ ಟೆಕ್ಕಿ ಬಲಿ: ಪ್ರತಿಭಟಿಸಿದ ಎಎಪಿ ಮುಖಂಡರು ವಶಕ್ಕೆ

ಅಶ್ವಿನ್‌ ಕುಟುಂಬಕ್ಕೆ ಒಂದು ಕೋಟಿ ರೂ ಪರಿಹಾರಕ್ಕೆ ಆಗ್ರಹ

Team Udayavani, Mar 14, 2022, 5:41 PM IST

1-asd

ಬೆಂಗಳೂರು: ಎಂ.ಎಸ್.ಪಾಳ್ಯದಲ್ಲಿ ರಸ್ತೆಗುಂಡಿಗೆ ಬಲಿಯಾದ ಅಶ್ವಿನ್‌ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರುಪಡಿಸಿದ್ದಾರೆ.

ಎಎಪಿ ಮುಖಂಡರಾದ ಮೋಹನ್‌ ದಾಸರಿ, ಬಿ.ಟಿ.ನಾಗಣ್ಣ, ಸುರೇಶ್‌ ರಾಥೋಡ್‌, ಜಗದೀಶ್‌ ವಿ ಸದಂ, ಚೆನ್ನಪ್ಪಗೌಡ ನೆಲ್ಲೂರು, ಸುಹಾಸಿನಿ, ಕುಶಲಸ್ವಾಮಿ, ಸಮೀರ್‌ ಅಸದ್‌, ಜಗದೀಶ್ ಬಾಬು , ಶ್ರೀಕಾಂತ್ , ಗೋವರ್ಧನ್ ರಾಜು, ಯಾಸೀನ್‌ ಸೇರಿದಂತೆ 14 ಮಂದಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನೂರಾರು ಎಎಪಿ ಕಾರ್ಯಕರ್ತರು ವಿದ್ಯಾರಣ್ಯ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ವಶಕ್ಕೆ ಪಡೆದವರನ್ನು ಮ್ಯಾಜಿಸ್ಟೇಟ್‌ ಮುಂದೆ ಹಾಜರುಪಡಿಸಿ ಹೇಳಿಕೆ ಪಡೆಯಲಾಯಿತು.

ಮಾಧ್ಯಮಗಳ ಜೊತೆ ಮಾತನಾಡಿದ ಎಎಪಿಯ ಬೆಂಗಳೂರು ನಗರ ಅಧ್ಯಕ್ಷರಾದ ಮೋಹನ್‌ ದಾಸರಿ, “ಬೆಂಗಳೂರಿನ ರಸ್ತೆಗುಂಡಿಗಳಿಗೆ ವಾಹನಸವಾರರು ಬಲಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ. ಸೀನಿಯರ್‌ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಶ್ವಿನ್‌ರವರನ್ನು ಈಗ ಕಳೆದುಕೊಂಡಿದ್ದೇವೆ. ಮೃತರ ಕುಟುಂಬಕ್ಕೆ ಸರ್ಕಾರ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು. ಘಟನೆಗೆ ಬಿಬಿಎಂಪಿ ಕಮಿಷನರ್‌ ಹಾಗೂ ಉನ್ನತ ಅಧಿಕಾರಿಗಳ ನಿರ್ಲಕ್ಷ್ಯವೇ ನೇರ ಕಾರಣ. ಆದ್ದರಿಂದ ಅವರನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

ಬೆಂಗಳೂರು ಎಎಪಿಯ ಉಪಾಧ್ಯಕ್ಷರಾದ ಬಿ.ಟಿ.ನಾಗಣ್ಣ ಮಾತನಾಡಿ, “ರಸ್ತೆಗುಂಡಿಗೆ ಕಾರಣರಾದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಅನೇಕ ಸಲ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿದ್ದಲ್ಲ. ಬದಲಾಗಿ, ರಸ್ತೆಗುಂಡಿ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಸಿದ ಆಮ್‌ ಆದ್ಮಿ ಪಾರ್ಟಿ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ಭ್ರಷ್ಟ ರಾಜಕಾರಣಿಗಳು ಪೊಲೀಸರನ್ನು ತಮ್ಮ ಕೈಗೊಂಬೆಯಂತೆ ಬಳಸಿಕೊಳ್ಳುತ್ತಿದ್ದಾರೆ” ಎಂದು ಕಿಡಿಕಾರಿದರು.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

7-ಬನಗ

Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

6-bng-crime

Drugs ಮಾರಾಟ: ಮೂವರು ವಿದೇಶಿ ಪ್ರಜೆಗಳು ಸೇರಿ 8 ಮಂದಿ ಬಂಧನ ‌

5-bng-crime-1

Bengaluru Crime: ಮನೆ ಮಾಲಕಿಯ ಕೊಂದು ಚಿನ್ನ ದೋಚಿದಳು!

E-bus: ಚಾಲಕರ ಧರಣಿ: ರಸ್ತೆಗಿಳಿಯದ 113 ಇ-ಬಸ್‌

E-bus: ಚಾಲಕರ ಧರಣಿ: ರಸ್ತೆಗಿಳಿಯದ 113 ಇ-ಬಸ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.