ರೈತ ವಿರೋಧಿ ಬಿಜೆಪಿ ಸರ್ಕಾರ: ನೀಲಾ
Team Udayavani, Mar 15, 2022, 1:03 PM IST
ಜೇವರ್ಗಿ: ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತ, ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದ್ದು, ಕಣ್ಣಿ, ಕಿವಿ ಹಾಗೂ ಕರಳು ಇಲ್ಲದ ಈ ಉಭಯ ಸರ್ಕಾರಗಳಿಂದ ಜನ ಬೇಸತ್ತು ಹೋಗಿದ್ದಾರೆ ಎಂದು ಜನವಾದಿ ಮಹಿಳಾ ಸಂಘಟನೆ ರಾಜ್ಯ ಉಪಾಧ್ಯಕ್ಷೆ ಕೆ.ನೀಲಾ ಆರೋಪಿಸಿದರು.
ಹರವಾಳ ಗ್ರಾಮದ ಸಿದ್ಧೇಶ್ವರ ದೇವಸ್ಥಾನದಲ್ಲಿ ಸೋಮವಾರ ರಾಜ್ಯ ಪ್ರಾಂತ ಕೂಲಿಕಾರರ ಸಂಘದ ನೂತನ ಗ್ರಾಮ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.
ರೈತರ, ಕೂಲಿ ಕಾರ್ಮಿಕರ, ಬಡವರ ಕಷ್ಟಗಳಿಗೆ ನಮ್ಮನ್ನಾಳುತ್ತಿರುವ ರಾಜಕಾರಣಿಗಳು ಕಾರಣ ಹೊರತು ದೇವರಲ್ಲ. ಇದು ಗೊತ್ತಾಗಬಾರದು ಎಂದು ರಾಜಕಾರಣಿಗಳು ಕೆಲವು ವಿಚಾರಗಳು ನಮ್ಮೆಲ್ಲರ ತಲೆಯೊಳಗೆ ತುಂಬುತ್ತಿದ್ದಾರೆ. ಈ ದೇಶದ ಅಭಿವೃದ್ಧಿಗೆ ಅದಾನಿ, ಅಂಬಾನಿ ಕೊಡುಗೆಯಿಲ್ಲ. ರೈತರ ಹಾಗೂ ಕೂಲಿ ಕಾರ್ಮಿಕರ ಕೊಡುಗೆ ಅಪಾರವಿದೆ ಎಂದರು.
ಮಹಿಳಾ ಗ್ರಾಪಂ ಸದಸ್ಯರು ಕಡ್ಡಾಯವಾಗಿ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಗ್ರಾಮದ ಅಭಿವೃದ್ಧಿ ಕುರಿತು ಚರ್ಚೆ ನಡೆಸಬೇಕು. ರಸ್ತೆ, ಚರಂಡಿ, ಶುದ್ಧವಾದ ಕುಡಿಯುವ ನೀರು, ಮಹಿಳಾ ಶೌಚಾಲಯ, ಬೀದಿದೀಪ ಅಳವಡಿಸಿ ಮಾದರಿ ಗ್ರಾಪಂ ನಿರ್ಮಾಣವಾಗಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಹೇಳಿದರು.
ಕರ್ನಾಟಕ ಪ್ರಾಂತ ಕೂಲಿಕಾರ ಸಂಘದ ಜಿಲ್ಲಾಧ್ಯಕ್ಷ ಭೀಮಶಟ್ಟಿ ಯಂಪಳ್ಳಿ ಮಾತನಾಡಿ, ಉದ್ಯೋಗ ಖಾತರಿಯಲ್ಲಿ ದುಡಿಯುವ ಕೈಗಳಿಗೆ ಉದ್ಯೋಗ ಸಿಗದೇ ಇತ್ತೀಚೆಗೆ ಅದು ಉದ್ರಿ ಖಾತರಿ ಆಗುತ್ತಿದೆ. ಸರ್ಕಾರದ ನೀತಿ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು. ನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ ತಡೆಗಟ್ಟಲು ರೈತರ, ಕೂಲಿಕಾರರ ಸಹಕಾರ ಅಗತ್ಯವಾಗಿದೆ. ಸಮಸ್ಯೆಗಳ ವಿರುದ್ಧ ಸಂಘರ್ಷ ಮಾಡಿ, ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡುವ ಮೂಲಕ ಸರ್ಕಾರದ ಸೌಲಭ್ಯ ಪಡೆದುಕೊಳ್ಳಲು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಕೂಲಿಕಾರ ಸಂಘದ ಗ್ರಾಮ ಘಟಕದ ನೂತನ ಅಧ್ಯಕ್ಷೆಯಾಗಿ ಜಯಶ್ರೀ ಜವಳಿ, ಗೌರವಾಧ್ಯಕ್ಷರಾಗಿ ಆನಂದಪ್ಪ ಚಿಂಚೋಳಿ, ಕಾರ್ಯದರ್ಶಿಯಾಗಿ ಸಂತೋಷ ಉಮ್ಮರಗಿ, ಖಜಾಂಚಿಯಾಗಿ ಅಬ್ದುಲ್ ಮೈನಾಳ, ಸಹ ಕಾರ್ಯದರ್ಶಿಯಾಗಿ ನಾಗರಾಜ ಕಾಳಪ್ಪಗೋಳ ಅವರನ್ನು ಆಯ್ಕೆ ಮಾಡಲಾಯಿತು. ಕೂಲಿಕಾರರ ಸಂಘದ ಮುಖಂಡ ಸಿದ್ಧರಾಮ ಅದ್ವಾನಿ ಹರವಾಳ, ಗ್ರಾಪಂ ಅಧ್ಯಕ್ಷ ಆಕಾಶ ಗಣಜಲಖೇಡ, ಪಿಡಿಒ ಆನಂದ ದೊಡ್ಮನಿ, ಆನಂದಪ್ಪ ಚಿಂಚೋಳಿ, ಕಲ್ಲಪ್ಪ ಅದ್ವಾನಿ, ಸಿದ್ದಪ್ಪ ದೊರೆ, ಗೋಪಾಲ ರಾಠೊಡ, ಕಲ್ಯಾಣಪ್ಪಗೌಡ ನಾಗರಾವತ್, ಮಹಿಬೂಬ ಅತ್ತಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ
Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ
ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…
Kalburgi: ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ
Kalaburagi: ಹಣಕ್ಕಾಗಿ ಮೂವರ ವಿವಸ್ತ್ರಗೊಳಿಸಿ ಗುಪ್ತಾಂಗಕ್ಕೆ ಶಾಕ್!: 7 ಮಂದಿ ಸೆರೆ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್