ಜೀವನ ಶೈಲಿ ಅಭಿವೃದ್ಧಿ ಹೆಸರಲ್ಲಿ ಪ್ರಕೃತಿ ಕಲುಷಿತ

ತುಂಗಳ ಕೆರೆ ಅಭಿವೃದ್ಧಿಗೆ 7.30 ಲಕ್ಷ ಸಹಾಯಧನ

Team Udayavani, Mar 15, 2022, 2:10 PM IST

11

ಜಮಖಂಡಿ: ಪ್ರಕೃತಿ ಭೂಮಿ ಮೇಲೆ ವಾಸಿಸುವ ಪ್ರತಿಯೊಂದು ಜೀವಿಗೂ ಶುಭ್ರ, ಹೇರಳವಾದ ಸಂಪನ್ಮೂಲ ನೀಡಿದೆ. ಆದರೆ ಇಂದಿನ ಮನುಷ್ಯನ ಜೀವನಶೈಲಿ, ಅಭಿವೃದ್ಧಿ ಹೆಸರಿನಲ್ಲಿ ಪ್ರಾಕೃತಿಕ ಸಂಪನ್ಮೂಲಗಳಾದ ಭೂಮಿ, ಗಾಳಿ, ನೀರು ಕಲುಷಿತವಾಗುತ್ತಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ನಿರ್ದೇಶಕ ಪಿ.ಪುರುಷೋತ್ತಮ ಹೇಳಿದರು.

ತಾಲೂಕಿನ ತುಂಗಳ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದಲ್ಲಿ ಹೊಸಕೆರೆ ಹೂಳೆತ್ತುವ ಸಮಾರಂಭದಲ್ಲಿ ಮಾತನಾಡಿದರು.

ಪೂರ್ವಜರು ನಮಗೋಸ್ಕರ ನೀರಿಗಾಗಿ ಕೆರೆಗಳ ರಚನೆ ಮಾಡಿದ್ದು ರಾಜ್ಯದಲ್ಲಿ 36 ಸಾವಿರಕ್ಕೂ ಹೆಚ್ಚು ಕೆರೆಗಳಿವೆ. ಅವುಗಳ ನಿರ್ವಹಣೆ ಆಗದೆ ಹಿನ್ನೆಲೆಯಲ್ಲಿ ಹೆಚ್ಚಿನ ಕೆರೆಗಳಿಗೆ ಮಳೆಗಾಲದಲ್ಲಿ ನೀರಿನ ಶೇಖರಣೆ ಪ್ರಮಾಣ ಕಡಿಮೆ ಆಗುತ್ತಿದೆ. ಧರ್ಮಸ್ಥಳದ ಧರ್ಮಾಧಿಕಾರಿಗಳು ಗ್ರಾಮಸ್ಥರ ಸಹಕಾರದಿಂದ ಹಾಗೂ ಸ್ಥಳೀಯ ಆಡಳಿತ ಕಚೇರಿ ಸಹಭಾಗಿತ್ವದಲ್ಲಿ ನಮ್ಮೂರು ನಮ್ಮ ಕೆರೆ ಎಂಬ ಕಾರ್ಯಕ್ರಮದಡಿಯಲ್ಲಿ ಕೆರೆಯ ಹೂಳು ತೆಗೆಯಲು ಕಾರ್ಯಕ್ರಮ ನಡೆಸುತ್ತಿದೆ. ಈಗಾಗಲೆ ರಾಜ್ಯದಲ್ಲಿ 429 ಕೆರೆಗಳ ಅಭಿವೃದ್ಧಿ ಕೆಲಸ ಪ್ರಗತಿಯಲ್ಲಿದ್ದು, ತುಂಗಳ ಕೆರೆ 430ನೇ ಕೆರೆಯ ಅಭಿವೃದ್ಧಿಗೆ 7.30 ಲಕ್ಷ ಸಹಾಯಧನ ನೀಡಲಾಗಿದೆ ಎಂದರು.

ಅಂತರ್ಜಲ ಅಭಿವೃದ್ಧಿಗೆ ಮುಂದಿನ 10 ವರ್ಷಗಳಲ್ಲಿ 3 ಸಾವಿರ ಕೆರೆಗಳ ಹೂಳೆತ್ತುವ ಗುರಿ ಹೊಂದಲಾಗಿದೆ. 430ನೇ ಕೆರೆ ಹೂಳೆತ್ತುವ ಕಾರ್ಯಕ್ರಮವನ್ನು ತುಂಗಳ ಹೊಸ ಕೆರೆಗೆ ಚಾಲನೆ ನೀಡಲಾಗಿದೆ. ಕೆರೆ ಹೂಳು ತೆಗೆಯುವುದರಿಂದ ಅಂತರ್ಜಲ ಹೆಚ್ಚುವುದರೊಂದಿಗೆ ಕುಡಿಯುವ ನೀರು, ಕೃಷಿ ಚಟುವಟಿಕೆಗಳಿಗೆ ನೆರವು ಆಗಲಿದೆ. ಮುಂದಿನ 10 ವರ್ಷದಲ್ಲಿ 30 ಸಾವಿರ ಕೆರೆಯಲ್ಲಿ ಹೂಳು ತೆಗೆಯುವ ಗುರಿ ಹೊಂದಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಆರೋಗ್ಯರಕ್ಷಾ ಕಾರ್ಯಕ್ರಮದಲ್ಲಿ ಅನಾರೋಗ್ಯಕ್ಕೆ ತುತ್ತಾಗಿರುವ ಸದಸ್ಯರಾದ ರತ್ನವ್ವ ಜಾಧವ, ಯಶೋಧ ಮಾಳಿ ಅವರಿಗೆ ಆರೋಗ್ಯ ರಕ್ಷಾ ಸೌಲಭ್ಯದಡಿಯಲ್ಲಿ ಮಂಜೂರಾದ ಪರಿಹಾರ ಚೆಕ್‌ ವಿತರಿಸಲಾಯಿತು.

ಗ್ರಾಪಂ ಅಧ್ಯಕ್ಷ ಅನುಸೂಯಾ ಬಸಗೊಂಡ ಖನಾಳ ಮಾತನಾಡಿದರು. ವೇದಿಕೆಯಲ್ಲಿ ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಭೀಮಪ್ಪ ಗೋಲಬಾವಿ, ಜಿಲ್ಲಾ ನಿರ್ದೇಶಕ ಎಂ.ಮಹೇಶ, ಗ್ರಾ.ಪಂ. ಉಪಾಧ್ಯಕ್ಷ ಸದಾಶಿವ ಹೊನವಾಡ, ತಾಪಂ ಮಾಜಿ ಸದಸ್ಯ ಸದಾಶಿವ ಶೇಗುಣಸಿ, ಸಮಿತಿ ಉಪಾಧ್ಯಕ್ಷ ಶವರುದ್ರಕಣಾಳ, ಗ್ರಾಪಂ ಸದಸ್ಯ ವಸಂತ ಗ್ರಾಮಸ್ಥರ ಒಕ್ಕೂಟದ ಅಧ್ಯಕ್ಷ ಮಹಾದೇವಿ ತೋರದರ, ವಲಯ ಸೇವಾ ಪ್ರತಿನಿಧಿಗಳು, ಕೃಷಿ ಮೇಲ್ವಿಚಾರಕರು ಇದ್ದರು.

ಯೋಜನಾಧಿಕಾರಿ ಬಿ.ಬಾಲಕೃಷ್ಣ ಸ್ವಾಗತಿಸಿದರು. ವಲಯ ಮೇಲ್ವಿಚಾರಕ ಪರಶುರಾಮ ನಿರೂಪಿಸಿದರು. ಸೇವಾ ಪ್ರತಿನಿಧಿ ಸಚಿನ್‌ ವಂದಿಸಿದರು.

ಟಾಪ್ ನ್ಯೂಸ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.