ಭಾಷಾಪ್ರೇಮ ಬೆಳೆಸಿಕೊಂಡು ಕನ್ನಡ ಉಳಿಸೋಣ

ಕಸಾಪ ಪದಾಧಿಕಾರಿಗಳ ಅಧಿಕಾರ ಗ್ರಹಣ ಸಮಾರಂಭ

Team Udayavani, Mar 15, 2022, 2:29 PM IST

12

ಬೆಳಗಾವಿ: ಜನಪ್ರತಿನಿಧಿಗಳು ಸೇರಿದಂತೆ ಎಲ್ಲರಲ್ಲೂ ಕನ್ನಡ ಭಾಷಾ ಪ್ರೇಮವಿರಬೇಕು. ಬೆಳಗಾವಿಯಂತಹ ಸೂಕ್ಷ್ಮ ಪ್ರದೇಶದಲ್ಲಿ ಕನ್ನಡ ಉಳಿಸುವ ಅನಿವಾರ್ಯತೆ ಇದೆ. ಕೇವಲ ಕನ್ನಡ ಸಾಹಿತ್ಯ ಪರಿಷತ್‌ ಕನ್ನಡ ಬೆಳೆಸುವ ಪ್ರಕ್ರಿಯೆಯಲ್ಲಿ ಪಾಲ್ಗೊಂಡರೆ ಸಾಲದು. ಎಲ್ಲರೂ ಸಹ ಭಾಷೆಗೆ ಹೆಚ್ಚಿನ ಒತ್ತು ಕೊಟ್ಟು ತನು-ಮನ-ಧನ ಅರ್ಪಿಸಿದಾಗ ಮಾತ್ರ ಕನ್ನಡ ಉಳಿಯುತ್ತದೆ ಎಂದು ನಾಗನೂರು ರುದ್ರಾಕ್ಷಿಮಠದ ಅಲ್ಲಮಪ್ರಭು ಸ್ವಾಮಿಗಳು ಹೇಳಿದರು.

ಬೆಳಗಾವಿ ತಾಲೂಕಾ ಕ.ಸಾ.ಪ ಘಟಕದ ಉದ್ಘಾಟನೆ ಮತ್ತು ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಗಡಿಭಾಗದಲ್ಲಿ ಕನ್ನಡವನ್ನು ಬೆಳೆಸುವ ಕಾರ್ಯದಲ್ಲಿ ಕೆ.ಎಲ್‌.ಇ ಸಂಸ್ಥೆ, ನಾಗನೂರು ಮಠಗಳು ತನ್ನದೇ ಆದ ಸೇವೆ ಮಾಡುತ್ತಾ ಬಂದಿವೆ. ಕಾಲ ಮಿಂಚಿಲ್ಲ, ಈಗಲೂ ನಾವು ಭಾಷಾ ಪ್ರೇಮ ಬೆಳೆಸಿಕೊಂಡು ಉಳಿಸೋಣ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕ.ಸಾ.ಪ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್‌, ಹಳ್ಳಿಹಳ್ಳಿಗಳಲ್ಲಿ ಸಾಹಿತ್ಯಕ ಕೆಲಸಗಳು ನಡೆಯಲಿ. ಅನ್ಯ ಭಾಷಿಕರನ್ನು ನೋಡಿದರೆ ನಮಗೆ ಭಾಷೆಯ ಅಭಿಮಾನ ಕಡಿಮೆ. ಅದು ಹೆಚ್ಚಬೇಕು. ಕನ್ನಡ ಭವನ ಕನ್ನಡ ಪರವಾದ ಚಟುವಟಿಕೆಗಳಿಗೆ ಮೀಸಲಾಗಿದೆ. ಈ ನಿಟ್ಟಿನಲ್ಲಿ ಒಳ್ಳೆಯ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ನಾಡುನುಡಿಯನ್ನು ಸಮƒದ್ಧಿ ಗೊಳಿಸೋಣ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಅನಿಲ ಬೆನಕೆ, ಕನ್ನಡ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ತಮ್ಮ ಸಮಯವನ್ನು ಮೀಸಲಿಟ್ಟು ಸೇವೆ ಮಾಡಬೇಕಾದ ಅನಿವಾರ್ಯತೆ ಬಂದಿರುವುದು ನಿಜಕ್ಕೂ ಖೇದನೀಯ. ಜನಪ್ರತಿನಿಧಿಗಳು ಮೊದಲಿಗೆ ಕನ್ನಡ ಭಾಷೆಗೆ ಆದ್ಯತೆ ನೀಡುವುದನ್ನು ರೂಢಿಸಿಕೊಳ್ಳಬೇಕು. ಸರಕಾರದಿಂದ ಬರುವ ಸೌಲಭ್ಯಗಳನ್ನು ಮುಂಬರುವ ದಿನಗಳಲ್ಲಿ ಸಾಹಿತ್ಯಕ ಕ್ಷೇತ್ರ ಬಲಪಡಿಸಲು ಶ್ರಮಿಸುವೆ ಎಂದು ಭರವಸೆ ನೀಡಿದರು.

ಕ.ಸಾ.ಪ ಜಿಲ್ಲಾ ಸಹ ಕಾರ್ಯದರ್ಶಿ ಶಿವಾನಂದ ತಲ್ಲೂರ ನೂತನ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಪರಿಚಯಿಸಿದರು. ಬೆಳಗಾವಿ ತಾಲೂಕಿನ ನೂತನ ಕಾರ್ಯಕಾರಿ ಸಮಿತಿಗೆ ನೇಮಕಗೊಂಡ ಗೌರವ ಕಾರ್ಯದರ್ಶಿಗಳಾದ ಎನ್‌. ಬಿ. ಕರವಿನಕೊಪ್ಪ, ಜ್ಞಾನದೀಪ ಸಂಸ್ಥೆಯ ರಮೇಶ ಬಾಗೇವಾಡಿ, ಮಹಿಳಾ ಪ್ರತಿನಿಧಿಗಳಾದ ರಾಜನಂದಾ ಘಾರ್ಗಿ, ಆಶಾ ಯಮಕನಮರಡಿ, ಸಂಘ ಸಂಸ್ಥೆಗಳ ಪ್ರತಿನಿಧಿ ಬಿ.ಜಿ ವಾಲಿ ಇಟಗಿ, ಬೆಳಗಾವಿ ಗ್ರಾಮೀಣ ವಲಯದ ಶಿಕ್ಷಣಾಧಿಕಾರಿ ರುದ್ರಗೌಡ ಜುಟ್ಟನವರ, ಬೆಳಗಾವಿ ನಗರವಲಯದ ರವಿ ಭಜಂತ್ರಿ, ಸದಸ್ಯರಾಗಿ ನೇಮಕಗೊಂಡ ಲೋಕೇಶ ತಲ್ಲೂರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ ದೇಯಣ್ಣವರ, ಎಂ.ಜಿ.ಪಾಟೀಲ, ಡಾ| ಎಸ್‌.ಡಿ ಪಾಟೀಲ, ಡಾ| ಜಯಾನಂದ ಧನವಂತ ಮತ್ತು ಮಾಧ್ಯಮ ಪ್ರತಿನಿಧಿಗಳಾಗಿ ನೇಮಕಗೊಂಡ ರಮೇಶ ಮಗದುಮ್‌, ವಿನೋದ ಜಗಜಂಪಿ ಮೊದಲಾದವರು ಉಪಸ್ಥಿತರಿದ್ದರು.

ರಾಜನಂದಾ ಘಾರ್ಗಿ ಸ್ವಾಗತಿಸಿದರು. ಬೆಳಗಾವಿ ತಾಲೂಕಾ ಕ.ಸಾ.ಪ ಅಧ್ಯಕ್ಷ ಸುರೇಶ ಹಂಜಿ ಪ್ರಾಸ್ತಾವಿಕವಾಗಿ ಮಾತನಾಡಿ, ತಾಲೂಕು ಕಸಾಪ ಘಟಕ ರೂಪಿಸಿರುವ ಯೋಜನೆಗಳ ಕುರಿತು ತಿಳಿಸಿದರು. ಆಶಾ ಯಮಕನಮರಡಿ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯದರ್ಶಿ ಎನ್‌. ಬಿ ಕರವಿನಕೊಪ್ಪ ವಂದಿಸಿದರು.

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.