ಸಮಗ್ರ ಕೃಷಿ ಪದ್ಧತಿ ಅನುಸರಿಸಿ

ಕೃಷಿ ಸಮಾವೇಶಗಳು ಗ್ರಾಮೀಣ ಪ್ರದೇಶದಲ್ಲಿ ನಡೆಯಲಿ: ಸಚಿವ ಪಾಟೀಲ

Team Udayavani, Mar 15, 2022, 2:39 PM IST

13

ಚಿಕ್ಕೋಡಿ: ರೈತರು ಸಮಗ್ರ ಕೃಷಿ ನೀತಿ ಅಳವಡಿಸಿಕೊಂಡು ಕೃಷಿ ಮಾಡಿದರೆ ಪ್ರಧಾನಿ ನರೇಂದ್ರ ಮೋದಿ ಅವರ ಅಸೆಯಂತೆ ರೈತರ ಆದಾಯ ದ್ವಿಗುಣವಾಗಲಿದೆ. ರೈತರು ಕೃಷಿ ಮಾಡಲು ಹಿಂದೇಟು ಹಾಕದೇ ಕೃಷಿಯಲ್ಲಿಯೇ ಉದ್ಯೋಗ ಕೊಡುವ ಕೃಷಿ ಉದ್ಯಮಿಯಾಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ತಾಲೂಕಿನ ಅಂಕಲಿ ಗ್ರಾಮದಲ್ಲಿ ಬೆಂಗಳೂರಿನ ಐಸಿಎಆರ್‌ ಅಟಾರಿ, ಮತ್ತಿಕೊಪ್ಪದ ಕೆಎಲ್‌ಇ ಸಂಸ್ಥೆ ಕೃಷಿ ವಿಜ್ಞಾನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಸೋಯಾಬೀನ್‌ ಹಾಗೂ ಕಬ್ಬು ಬೆಳೆಯುವ ರೈತರ, ವಿಜ್ಞಾನಿಗಳ ಮತ್ತು ಉದ್ಯಮಿಗಳ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ನಗರ, ಪಟ್ಟಣ ಪ್ರದೇಶಗಳಲ್ಲಿ ನಡೆಯುವ ಕೃಷಿ ಸಮ್ಮೇಳನ ಗ್ರಾಮೀಣ ಪ್ರದೇಶದಲ್ಲಿ ನಡೆಯುವುದು ಅತೀ ಮುಖ್ಯವಾಗಿದೆ. ಕೃಷಿ ವಿಜ್ಞಾನಿಗಳ ಮೂಲಕ ರೈತರಿಗೆ ಕೃಷಿ ಕುರಿತು ಮಾರ್ಗದರ್ಶನ ನೀಡುವ ಕಾರ್ಯಕ್ರಮ ಇಂದಿನ ದಿನಗಳಲ್ಲಿ ಅವಶ್ಯಕವಾಗಿದೆ. ಈ ದೇಶ ಸದೃಢವಾಗಿ ಬೆಳೆಯಲು ರೈತರು ಬೆಳೆಯುವ ಆಹಾರ ಮುಖ್ಯವಾಗಿದೆ ಎಂದರು.

ಕೃಷಿ ಸಚಿವನಾದ ಮೇಲೆ ಕೃಷಿ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ ತರಲಾಗಿದೆ. ಇಲಾಖೆ ದೂರವಾಣಿಯಲ್ಲಿ ಹಲೋ ಬದಲು ಜೈಕಿಸಾನ್‌ ಎನ್ನುವ ಸಂದೇಶ ಅಳವಡಿಸಲಾಗಿದೆ. ರೈತರು ಸಂಕೋಚ ಪಡದೇ ಕೃಷಿಯತ್ತ ಮುನ್ನುಗ್ಗಬೇಕು. ಅನ್ನ ಕೊಡುವ ರೈತನ ತಾಕತ್ತು ಯಾವ ಉದ್ಯಮಿಗಳಿಗೂ ಸಾಧ್ಯವಿಲ್ಲ ಎಂದರು.

ಕಬ್ಬಿನ ಬೆಳೆಯ ಜೊತೆಗೆ ಸೋಯಾಬೀನ್‌ ಕೃಷಿ ಮಾಡುವುದು ಸೂಕ್ತವಾಗಿದೆ. ಎಣ್ಣೆ ಪದಾರ್ಥ ಬೆಳೆ ದೇಶಕ್ಕೆ ಹೆಚ್ಚಾಗಬೇಕಿದೆ. ದೇಶಕ್ಕೆ ಸುಮಾರು 75 ಸಾವಿರ ಕೋಟಿಯಷ್ಟು ಎಣ್ಣೆ ಪದಾರ್ಥಗಳನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಅದೇ ನಮ್ಮ ದೇಶದಲ್ಲಿ ಹೆಚ್ಚಿನ ಎಣ್ಣೆ ಪದಾರ್ಥ ಬೆಳೆ ಅವಶ್ಯಕ ಎಂದರು.

ರೈತರು ಒಂದೇ ಕೃಷಿಯತ್ತ ಮನಸ್ಸು ಮಾಡದೇ ಹತ್ತು ಬೆಳೆ ಬೆಳೆಯಲು ಮುಂದಾಗಬೇಕು. ಹವಾಮಾನ ಸೇರಿದಂತೆ ಇನ್ನಿತರ ಕಾರಣಗಳಿಂದ ಬೆಳೆ ಹಾನಿಯಾದರೆ ಒಂದು ಬೆಳೆಯಾದರೂ ರೈತನ ಕೈಹಿಡಿಯುತ್ತದೆ. ರೈತರು ತಂತ್ರಜ್ಞಾನ ಅಳವಡಿಸಿಕೊಂಡು ಸಮಗ್ರ ಕೃಷಿ ನೀತಿ ಅನುಸರಿಸಬೇಕು. ರಾಜ್ಯ ಸರ್ಕಾರ ರೈತರ ಮಕ್ಕಳಿಗೆ ವಿವಿಧ ಯೋಜನೆ ಜಾರಿ ಮಾಡಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ| ಪ್ರಭಾಕರ ಕೋರೆ ಮಾತನಾಡಿ, ಸರ್ಕಾರಿ ನೌಕರಿಗೆ ಇರುವ ಮಾನ್ಯತೆ ಕೃಷಿಕರಿಗೂ ಬರಬೇಕು. ಕೃಷಿ ಉಳಿದರೆ ಮಾತ್ರ ದೇಶದ ಭವಿಷ್ಯ ಸುಭದ್ರವಾಗಿರುತ್ತದೆ. ಯುವಕರು ಕೃಷಿ ಕಡೆಗೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದರು.

ವೇದಿಕೆ ಮೇಲೆ ಐಸಿಎಆರ್‌ ಅಟಾರಿ ನಿರ್ದೇಶಕ ಡಾ| ವಿ.ವೆಂಕಟಸುಬ್ರಮಣಿಯನ್‌, ಡಾ| ನೀತಾ ಖಾಂಡೇಕರ, ಭರತೇಶ ಬಣವನೆ, ಮಲ್ಲಿಕಾರ್ಜುನ ಕೋರೆ, ಡಾ| ಆರ್‌ .ಬಿ.ಖಂಡಗಾವಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಮಹೇಶ ಭಾತೆ, ಸುರೇಶ ಪಾಟೀಲ, ಡಾ| ಪ್ರಸಾದ ರಾಂಪೂರೆ ಮುಂತಾದವರು ಇದ್ದರು. ಬಿ.ಆರ್‌.ಪಾಟೀಲ ಸ್ವಾಗತಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.